Categories: ರಾಜ್ಯ

ತಂದೆ, ಪಕ್ಷದ ನಡುವಿನ ಮುನಿಸು ವಿಚಾರ: ಶಾಸಕ ಹರೀಶ್‌ ಗೌಡ ಪ್ರತಿಕ್ರಿಯೆ

ಬೆಂಗಳೂರು: ತಮ್ಮ ತಂದೆ ಜಿ.ಟಿ.ದೇವೇಗೌಡ ಅವರ ಹಾಗೂ ಪಕ್ಷದ ನಡುವಿನ ಮುನಿಸು ವಿಚಾರದ ಬಗ್ಗೆ ಶಾಸಕ ಜಿ.ಡಿ.ಹರೀಶ್‌ ಗೌಡ ಅವರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಇಂದು(ನ.27) ಶಾಸಕ ಜಿ.ಟಿ.ದೇವೇಗೌಡರು ಜೆಡಿಎಸ್‌ ಪಕ್ಷದಿಂದ ಇತ್ತೀಚಿನ ದಿನಗಳಲ್ಲಿ ಅಂತರ ಕಾಯ್ದುಕೊಂಡಿದ್ದರ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ಪಕ್ಷಗಳಲ್ಲಿ ಸಹಜವಾಗಿ ಅಸಮಾಧಾನಗಳು ಇರುವಂತೆ ನಮ್ಮ ಪಕ್ಷದಲ್ಲಿಯೂ ಇದೆ. ಹಾಗೆಯೇ ನಮ್ಮ ಪಕ್ಷದಲ್ಲಿಯೂ ನಾಯಕರ ಹಾಗೂ ಪಕ್ಷದ ವರಿಷ್ಠರ ನಡುವೆ ಅಸಮಾಧಾನ ಸರ್ವೇ ಸಾಮಾನ್ಯವಾಗಿದೆ. ಅದನ್ನು ಮುಂಬರುವ ದಿನಗಳನ್ನು ಸರಿಪಡಿಸಲಾಗುತ್ತದೆ ಎಂದು ಹೇಳಿದ್ದಾರೆ.

ನಮ್ಮ ವರಿಷ್ಠರು ಪಕ್ಷದ ಎಲ್ಲಾ ಶಾಸಕರು ಹಾಗೂ ನಾಯಕರೊಂದಿಗೆ ಸಾಧಕ-ಬಾಧಕಗಳೆಲ್ಲಾವನ್ನು ಚರ್ಚಿಸಿ, ಮುಂದಿನ ದಿನಗಳಲ್ಲಿ ಸರಿಪಡಿಸಿಕೊಳ್ಳುವ ಪ್ರಯತ್ನ ಮಾಡಲಾಗುತ್ತದೆ. ಇದರ ಬಗ್ಗೆ ನಾನು ಏನು ಹೆಚ್ಚಿನ ರೀತಿಯಲ್ಲಿ ಹೇಳಲು ಹೋಗುವುದಿಲ್ಲ. ಮುಂದಿನ ದಿನಗಳಲ್ಲಿ ಎಲ್ಲಾ ನಾಯಕರ ಅಸಮಾಧಾನ ಕಳೆದು ಮೊದಲಿನಂತೆ ಪಕ್ಷ  ಕಾರ್ಯ ನಿರ್ವಹಿಸಲಿದೆ ಎಂದು ತಿಳಿಸಿದ್ದಾರೆ.

ಜೆಡಿಎಸ್‌ ಕೋರ್‌ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡರು ದಸರಾ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಪರ ಬ್ಯಾಟಿಂಗ್‌ ಮಾಡಿದ್ದರು. ಇದು ರಾಜ್ಯಾದ್ಯಂತ ಚರ್ಚೆಗೆ ಗ್ರಾಸವಾದ ನಂತರ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದಾರೆಂಬ ಸಂಶಯ ವ್ಯಕ್ತವಾಗಿತ್ತು. ಈ ವಿಚಾರಕ್ಕೆ ಪೂರಕವಾಗುವಂತೆ  ಉಪಚುನಾವಣೆಯ ವೇಳೆ  ಎನ್‌ಡಿಎ ಅಭ್ಯರ್ಥಿ ನಿಖಿಲ್‌ ಪರ ಪ್ರಚಾರ ಮಾಡಬೇಕಿದ್ದ ಸ್ಟಾರ್‌ ಪ್ರಚಾರದ ಪಟ್ಟಿಯಲ್ಲಿ  ಅವರ ಹೆಸರನ್ನು ಬಿಡಲಾಗಿತ್ತು. ಇದರಿಂದ ಅಸಮಾಧಾನಗೊಂಡಿದ್ದ ಅವರು ಸಂಪೂರ್ಣವಾಗಿ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಮೈಸೂರು | ನೂತನ ಬಸ್‌ ನಿಲ್ದಾಣ ಕಾಮಗಾರಿ ಪರಿಶೀಲಿಸಿದ ಸಚಿವ ಮಹದೇವಪ್ಪ

ಮೈಸೂರು : ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ:ಹೆಚ್.ಸಿ ಮಹದೇವಪ್ಪ ಅವರು ಇಂದು(ಮಾರ್ಚ್‌.28) 120 ಕೋಟಿ ರೂ…

3 mins ago

ಮೈಸೂರು | ವರ್ತುಲ ರಸ್ತೆ ಇಕ್ಕೆಲಗಳ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

ಮೈಸೂರು : ನಗರದ ಹೊರ ವರ್ತುಲ ರಸ್ತೆಯಲ್ಲಿ ಹಗಲು ವೇಳೆ ಸಾಕಷ್ಟು ವಾಹನಗಳು ಹಾಗೂ ಸಾರ್ವಜನಿಕರು ಓಡಾಡಲು ಸ್ವಚ್ಛತೆ ಕೊರತೆ…

16 mins ago

ನನಗೆ ಐಪಿಎಲ್‌ ಟಿಕೆಟ್‌ ಬೇಡ ಎಂದ ಸುರೇಶ್‌ ಕುಮಾರ್‌

ಬೆಂಗಳೂರು: ಐಪಿಎಲ್‌ ಪಂದ್ಯಗಳಿಗೆ ಸಂಬಂಧಿಸಿದಂತೆ ನನ್ನ ಹೆಸರಿನಲ್ಲಿ ಯಾವುದೇ ಟಿಕೆಟ್‌ ಅಥವಾ ಪಾಸ್‌ಗಳನ್ನು ವಿತರಿಸಬಾರದೆಂದು ಬಿಜೆಪಿ ಶಾಸಕ ಸುರೇಶ್‌ ಕುಮಾರ್‌…

20 mins ago

ನೇಪಾಳದ ಮಾಜಿ ಪ್ರಧಾನಿ ಕೆ.ಪಿ.ಶರ್ಮಾ ಓಲಿ, ಮಾಜಿ ಗೃಹ ಸಚಿವ ಅರೆಸ್ಟ್‌

ಕಠ್ಮಂಡು: ಕಳೆದ ವರ್ಷ ದೇಶದಾದ್ಯಂತ ನಡೆದಿದ್ದ ಜನರೇಷನ್‌ ಝಡ್‌ ಪ್ರತಿಭಟನೆಗೆ ಸಂಬಂಧಿಸಿದಂತೆ ನೇಪಾಳದ ಮಾಜಿ ಪ್ರಧಾನಿ ಕೆ.ಪಿ.ಶರ್ಮಾ ಓಲಿ ಹಾಗೂ…

37 mins ago

ವೈರಮುಡಿ ಬ್ರಹ್ಮೋತ್ಸವಕ್ಕೆ ಕ್ಷಣಗಣನೆ : ವೈರಮುಡಿ ಆಭರಣ ತಲೆಮೇಲೆ ಹೊತ್ತು ತಂದ ಡಿಸಿ, ಎಸ್‌ಪಿ

ಮೇಲುಕೋಟೆ : ವಿಶ್ವವಿಖ್ಯಾತ ಮೇಲುಕೋಟೆ ಚೆಲುವನಾರಾಯಣ ಸ್ವಾಮಿಯ ವೈರಮುಡಿ ಕಿರೀಟಧಾರಣಾ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ಇದಕ್ಕೆ ಪೂರ್ವಭಾವಿಯಾಗಿ, ಜಿಲ್ಲಾ ಖಜಾನೆಯಿಂದ…

55 mins ago

ಪತಿ ಮೃತಪಟ್ಟ ಮಾರನೇ ದಿನವೇ ಕರ್ತವ್ಯಕ್ಕೆ ಹಾಜರಾದ ಶಿಕ್ಷಕಿ!

ಎಚ್‌.ಡಿ.ಕೋಟೆ : ಪತಿ ಮೃತಪಟ್ಟ ಮಾರನೇ ದಿನವೇ ಶಿಕ್ಷಕಿಯೊಬ್ಬರು ಶಾಲೆಗೆ ಹಾಜರಾಗಿ ಕರ್ತವ್ಯ ನಿರ್ವಹಿಸಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಹಂಪಾಪುರ ಸಮೀಪದ…

2 hours ago