Father-in-law murdered by son-in-law: Wife and aunt-in-law arrested for aiding the murder.
ಬೆಂಗಳೂರು : ಹೆಣ್ಣು ಕೊಟ್ಟ ಮಾವನನ್ನು ಅಳಿಯ ಕೊಲೆ ಮಾಡಿದರೆ, ಶವವನ್ನು ತಾಯಿ ಮತ್ತು ಮಗಳು ಸುಟ್ಟು ಹಾಕಿರುವಂತಹ ಹೃದಯ ವಿದ್ರಾವಕ ಘಟನೆಯೊಂದು ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ದೇವನಹಳ್ಳಿ ಮೂಲದ ಬಾಬು (48) ಅಳಿಯನಿಂದಲೇ ಕೊಲೆಯಾದ ಮಾವ.
ಅಳಿಯ ರಾಮಕೃಷ್ಣ ಹಾಗೂ ಬಾಬು ಅವರ ಪತ್ನಿ ಮುನಿರತ್ನ ಮತ್ತು ಪುತ್ರಿಯಿಂದ ಕೃತ್ಯವೆಸಗಲಾಗಿದ್ದು, ಸದ್ಯ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ಹಲವು ವರ್ಷದಿಂದ ಕಾಡುಗೋಡಿಯಲ್ಲಿ ಈ ಕುಟುಂಬ ವಾಸವಿದೆ. ಗೋದಾಮು ಒಂದರಲ್ಲಿ ಬಾಬು ಕೆಲಸ ಮಾಡಿಕೊಂಡಿದ್ದರು. ಈ ನಡುವೆ ಬಾಬು ಪುತ್ರಿ 3 ತಿಂಗಳ ಹಿಂದೆ ರಾಮಕೃಷ್ಣನನ್ನು ಪ್ರೀತಿಸಿ ಮದುವೆಯಾಗಿದ್ದಳು. ಆದರೆ ಈ ಮದುವೆ ಬಾಬುಗೆ ಇಷ್ಟವಿರಲಿಲ್ಲ.
ಜು. 26ರಂದು ತವರು ಮನೆಗೆ ಮಗಳು ಹಾಗೂ ಅಳಿಯ ರಾಮಕೃಷ್ಣ ಬಂದಿದ್ದಾರೆ. ಆ ಸಂದರ್ಭದಲ್ಲಿ ಮೊದಲೇ ಮಗಳ ಮೇಲೆ ಬೇಸರಗೊಂಡಿದ್ದ ಬಾಬು ಅವರು ಬಾಯಿಗೆ ಬಂದಂತೆ ಬೈದಿದ್ದಾರೆ. ಗಲಾಟೆ ವೇಳೆ ಪತ್ನಿ ಮುನಿರತ್ನ ಅವರ ಕಪಾಳಕ್ಕೂ ಹೊಡೆದಿದ್ದರು. ಇದರಿಂದ ಕೋಪಗೊಂಡ ಅಳಿಯ ರಾಮಕೃಷ್ಣ ಅತ್ತೆಗೆ ಹೊಡಿಯುತ್ತೀರಾ ಎಂದು ಕಪಾಳಮೋಕ್ಷ ಮಾಡಿದ ಏಟಿಗೆ ಸ್ಥಳದಲ್ಲೇ ಬಾಬು ಮೃತಪಟ್ಟಿದ್ದಾರೆ.
ಆಗ ಮೂವರು ಸೇರಿಕೊಂಡು ಮೃತದೇಹವನ್ನು ಏನು ಮಾಡಬೇಕೆಂದು ಯೋಚಿಸಿ ನಂತರ ಸಂಬಂಧಿಕರೊಬ್ಬರ ಆಂಬ್ಯುಲೆನ್ಸ್ ತರಿಸಿಕೊಂಡು ಮುಂಜಾನೆ 3 ಗಂಟೆಗೆ ಬಾಬು ಮೃತದೇಹವನ್ನು ಆಂಬ್ಯುಲೆನ್ಸ್ನಲ್ಲಿ ಕೋಲಾರದ ಬಳಿ ತೆಗೆದುಕೊಂಡು ಹೋಗಿ ನಿರ್ಜನ ಪ್ರದೇಶದಲ್ಲಿ ಪೆಟ್ರೋಲ್ ಸುರಿದು ಬಾಬು ಶವ ಸುಟ್ಟು ಆರೋಪಿಗಳು ಮನೆಗೆ ಹಿಂದಿರುಗಿದ್ದಾರೆ.
ಇದೆಲ್ಲವನ್ನು ನೋಡಿದ್ದ ಕಿರಿಮಗಳು ನಾಲ್ಕು ದಿನದ ಬಳಿಕ ಸಂಬಂಧಿಕರ ಬಳಿ ಹೇಳಿದ್ದಾಳೆ. ಬಾಬು ಸಹೋದರ ಪೊಲೀಸರಿಗೆ ದೂರು ನೀಡಿದ್ದಾರೆ. ದೂರು ಆಧರಿಸಿ ಎಫ್ಐಆರ್ ದಾಖಲಿಸಿಕೊಂಡ ಕಾಡುಗೋಡಿ ಠಾಣೆ ಪೊಲೀಸರು, ಈ ಮೂವರನ್ನು ವಿಚಾರಣೆ ನಡೆಸಿದ ವೇಳೆ ಆರೋಪಿಗಳು ಕೊಲೆ ಮಾಡಿದ್ದಾಗಿ ಬಾಯ್ಬಿಟ್ಟಿದ್ದಾರೆ.
ಹೊಸದಿಲ್ಲಿ : ಗಣರಾಜ್ಯೋತ್ಸವಕ್ಕೂ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಅಶಾಂತಿ ಸೃಷ್ಟಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ಸಿಖ್ ಫಾರ್ ಜಸ್ಟೀಸ್ ನಿಯೋಜಿತ ಭಯೋತ್ಪಾದಕ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಪಿ.ದೊಡ್ಡಿ ಗ್ರಾಮದಲ್ಲಿ 5 ಕಾಡಾನೆಗಳ ಹಿಂಡು ಬೀಡುಬಿಟ್ಟು ಕಬ್ಬಿನ ಬೆಳೆ ಫಸಲನ್ನು ನಾಶಗೊಳಿಸಿರುವ ಘಟನೆ…
ಮಡಿಕೇರಿ : ಮೈಸೂರು-ಗೋಣಿಕೊಪ್ಪ ಹೆದ್ದಾರಿಯ ದಕ್ಷಿಣ ಕೊಡಗಿನ ತಿತಿಮತಿ ವ್ಯಾಪ್ತಿಯಲ್ಲಿ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಹುಲಿ ಸೆರೆಗೆ ಶಾಸಕ…
ನಂಜನಗೂಡು : ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಗಳನ್ನು ಸಹ ನಾಚಿಸುವಂತಹ ಆಧುನಿಕ ಸೌಲಭ್ಯಗಳನ್ನು…
ಬೃಹತ್ ಕೈಗಾರಿಕೆ ಸಚಿವಾಲಯ ಅಧೀನದ ಎಆರ್ಎಐ ಘಟಕ ಸ್ಥಾಪನೆಗೆ ಪರಿಶೀಲನೆ ನಡೆಯುತ್ತಿದೆ : ಕುಮಾರಸ್ವಾಮಿ ಮಂಡ್ಯ : ಜಿಲ್ಲೆಯಲ್ಲಿ ಕೈಗಾರಿಕೆ…
ಮಂಡ್ಯ : ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ ಎನ್ನುವ…