Father-in-law murdered by son-in-law: Wife and aunt-in-law arrested for aiding the murder.
ಬೆಂಗಳೂರು : ಹೆಣ್ಣು ಕೊಟ್ಟ ಮಾವನನ್ನು ಅಳಿಯ ಕೊಲೆ ಮಾಡಿದರೆ, ಶವವನ್ನು ತಾಯಿ ಮತ್ತು ಮಗಳು ಸುಟ್ಟು ಹಾಕಿರುವಂತಹ ಹೃದಯ ವಿದ್ರಾವಕ ಘಟನೆಯೊಂದು ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ದೇವನಹಳ್ಳಿ ಮೂಲದ ಬಾಬು (48) ಅಳಿಯನಿಂದಲೇ ಕೊಲೆಯಾದ ಮಾವ.
ಅಳಿಯ ರಾಮಕೃಷ್ಣ ಹಾಗೂ ಬಾಬು ಅವರ ಪತ್ನಿ ಮುನಿರತ್ನ ಮತ್ತು ಪುತ್ರಿಯಿಂದ ಕೃತ್ಯವೆಸಗಲಾಗಿದ್ದು, ಸದ್ಯ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ಹಲವು ವರ್ಷದಿಂದ ಕಾಡುಗೋಡಿಯಲ್ಲಿ ಈ ಕುಟುಂಬ ವಾಸವಿದೆ. ಗೋದಾಮು ಒಂದರಲ್ಲಿ ಬಾಬು ಕೆಲಸ ಮಾಡಿಕೊಂಡಿದ್ದರು. ಈ ನಡುವೆ ಬಾಬು ಪುತ್ರಿ 3 ತಿಂಗಳ ಹಿಂದೆ ರಾಮಕೃಷ್ಣನನ್ನು ಪ್ರೀತಿಸಿ ಮದುವೆಯಾಗಿದ್ದಳು. ಆದರೆ ಈ ಮದುವೆ ಬಾಬುಗೆ ಇಷ್ಟವಿರಲಿಲ್ಲ.
ಜು. 26ರಂದು ತವರು ಮನೆಗೆ ಮಗಳು ಹಾಗೂ ಅಳಿಯ ರಾಮಕೃಷ್ಣ ಬಂದಿದ್ದಾರೆ. ಆ ಸಂದರ್ಭದಲ್ಲಿ ಮೊದಲೇ ಮಗಳ ಮೇಲೆ ಬೇಸರಗೊಂಡಿದ್ದ ಬಾಬು ಅವರು ಬಾಯಿಗೆ ಬಂದಂತೆ ಬೈದಿದ್ದಾರೆ. ಗಲಾಟೆ ವೇಳೆ ಪತ್ನಿ ಮುನಿರತ್ನ ಅವರ ಕಪಾಳಕ್ಕೂ ಹೊಡೆದಿದ್ದರು. ಇದರಿಂದ ಕೋಪಗೊಂಡ ಅಳಿಯ ರಾಮಕೃಷ್ಣ ಅತ್ತೆಗೆ ಹೊಡಿಯುತ್ತೀರಾ ಎಂದು ಕಪಾಳಮೋಕ್ಷ ಮಾಡಿದ ಏಟಿಗೆ ಸ್ಥಳದಲ್ಲೇ ಬಾಬು ಮೃತಪಟ್ಟಿದ್ದಾರೆ.
ಆಗ ಮೂವರು ಸೇರಿಕೊಂಡು ಮೃತದೇಹವನ್ನು ಏನು ಮಾಡಬೇಕೆಂದು ಯೋಚಿಸಿ ನಂತರ ಸಂಬಂಧಿಕರೊಬ್ಬರ ಆಂಬ್ಯುಲೆನ್ಸ್ ತರಿಸಿಕೊಂಡು ಮುಂಜಾನೆ 3 ಗಂಟೆಗೆ ಬಾಬು ಮೃತದೇಹವನ್ನು ಆಂಬ್ಯುಲೆನ್ಸ್ನಲ್ಲಿ ಕೋಲಾರದ ಬಳಿ ತೆಗೆದುಕೊಂಡು ಹೋಗಿ ನಿರ್ಜನ ಪ್ರದೇಶದಲ್ಲಿ ಪೆಟ್ರೋಲ್ ಸುರಿದು ಬಾಬು ಶವ ಸುಟ್ಟು ಆರೋಪಿಗಳು ಮನೆಗೆ ಹಿಂದಿರುಗಿದ್ದಾರೆ.
ಇದೆಲ್ಲವನ್ನು ನೋಡಿದ್ದ ಕಿರಿಮಗಳು ನಾಲ್ಕು ದಿನದ ಬಳಿಕ ಸಂಬಂಧಿಕರ ಬಳಿ ಹೇಳಿದ್ದಾಳೆ. ಬಾಬು ಸಹೋದರ ಪೊಲೀಸರಿಗೆ ದೂರು ನೀಡಿದ್ದಾರೆ. ದೂರು ಆಧರಿಸಿ ಎಫ್ಐಆರ್ ದಾಖಲಿಸಿಕೊಂಡ ಕಾಡುಗೋಡಿ ಠಾಣೆ ಪೊಲೀಸರು, ಈ ಮೂವರನ್ನು ವಿಚಾರಣೆ ನಡೆಸಿದ ವೇಳೆ ಆರೋಪಿಗಳು ಕೊಲೆ ಮಾಡಿದ್ದಾಗಿ ಬಾಯ್ಬಿಟ್ಟಿದ್ದಾರೆ.
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…