Father-in-law murdered by son-in-law: Wife and aunt-in-law arrested for aiding the murder.
ಬೆಂಗಳೂರು : ಹೆಣ್ಣು ಕೊಟ್ಟ ಮಾವನನ್ನು ಅಳಿಯ ಕೊಲೆ ಮಾಡಿದರೆ, ಶವವನ್ನು ತಾಯಿ ಮತ್ತು ಮಗಳು ಸುಟ್ಟು ಹಾಕಿರುವಂತಹ ಹೃದಯ ವಿದ್ರಾವಕ ಘಟನೆಯೊಂದು ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ದೇವನಹಳ್ಳಿ ಮೂಲದ ಬಾಬು (48) ಅಳಿಯನಿಂದಲೇ ಕೊಲೆಯಾದ ಮಾವ.
ಅಳಿಯ ರಾಮಕೃಷ್ಣ ಹಾಗೂ ಬಾಬು ಅವರ ಪತ್ನಿ ಮುನಿರತ್ನ ಮತ್ತು ಪುತ್ರಿಯಿಂದ ಕೃತ್ಯವೆಸಗಲಾಗಿದ್ದು, ಸದ್ಯ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ಹಲವು ವರ್ಷದಿಂದ ಕಾಡುಗೋಡಿಯಲ್ಲಿ ಈ ಕುಟುಂಬ ವಾಸವಿದೆ. ಗೋದಾಮು ಒಂದರಲ್ಲಿ ಬಾಬು ಕೆಲಸ ಮಾಡಿಕೊಂಡಿದ್ದರು. ಈ ನಡುವೆ ಬಾಬು ಪುತ್ರಿ 3 ತಿಂಗಳ ಹಿಂದೆ ರಾಮಕೃಷ್ಣನನ್ನು ಪ್ರೀತಿಸಿ ಮದುವೆಯಾಗಿದ್ದಳು. ಆದರೆ ಈ ಮದುವೆ ಬಾಬುಗೆ ಇಷ್ಟವಿರಲಿಲ್ಲ.
ಜು. 26ರಂದು ತವರು ಮನೆಗೆ ಮಗಳು ಹಾಗೂ ಅಳಿಯ ರಾಮಕೃಷ್ಣ ಬಂದಿದ್ದಾರೆ. ಆ ಸಂದರ್ಭದಲ್ಲಿ ಮೊದಲೇ ಮಗಳ ಮೇಲೆ ಬೇಸರಗೊಂಡಿದ್ದ ಬಾಬು ಅವರು ಬಾಯಿಗೆ ಬಂದಂತೆ ಬೈದಿದ್ದಾರೆ. ಗಲಾಟೆ ವೇಳೆ ಪತ್ನಿ ಮುನಿರತ್ನ ಅವರ ಕಪಾಳಕ್ಕೂ ಹೊಡೆದಿದ್ದರು. ಇದರಿಂದ ಕೋಪಗೊಂಡ ಅಳಿಯ ರಾಮಕೃಷ್ಣ ಅತ್ತೆಗೆ ಹೊಡಿಯುತ್ತೀರಾ ಎಂದು ಕಪಾಳಮೋಕ್ಷ ಮಾಡಿದ ಏಟಿಗೆ ಸ್ಥಳದಲ್ಲೇ ಬಾಬು ಮೃತಪಟ್ಟಿದ್ದಾರೆ.
ಆಗ ಮೂವರು ಸೇರಿಕೊಂಡು ಮೃತದೇಹವನ್ನು ಏನು ಮಾಡಬೇಕೆಂದು ಯೋಚಿಸಿ ನಂತರ ಸಂಬಂಧಿಕರೊಬ್ಬರ ಆಂಬ್ಯುಲೆನ್ಸ್ ತರಿಸಿಕೊಂಡು ಮುಂಜಾನೆ 3 ಗಂಟೆಗೆ ಬಾಬು ಮೃತದೇಹವನ್ನು ಆಂಬ್ಯುಲೆನ್ಸ್ನಲ್ಲಿ ಕೋಲಾರದ ಬಳಿ ತೆಗೆದುಕೊಂಡು ಹೋಗಿ ನಿರ್ಜನ ಪ್ರದೇಶದಲ್ಲಿ ಪೆಟ್ರೋಲ್ ಸುರಿದು ಬಾಬು ಶವ ಸುಟ್ಟು ಆರೋಪಿಗಳು ಮನೆಗೆ ಹಿಂದಿರುಗಿದ್ದಾರೆ.
ಇದೆಲ್ಲವನ್ನು ನೋಡಿದ್ದ ಕಿರಿಮಗಳು ನಾಲ್ಕು ದಿನದ ಬಳಿಕ ಸಂಬಂಧಿಕರ ಬಳಿ ಹೇಳಿದ್ದಾಳೆ. ಬಾಬು ಸಹೋದರ ಪೊಲೀಸರಿಗೆ ದೂರು ನೀಡಿದ್ದಾರೆ. ದೂರು ಆಧರಿಸಿ ಎಫ್ಐಆರ್ ದಾಖಲಿಸಿಕೊಂಡ ಕಾಡುಗೋಡಿ ಠಾಣೆ ಪೊಲೀಸರು, ಈ ಮೂವರನ್ನು ವಿಚಾರಣೆ ನಡೆಸಿದ ವೇಳೆ ಆರೋಪಿಗಳು ಕೊಲೆ ಮಾಡಿದ್ದಾಗಿ ಬಾಯ್ಬಿಟ್ಟಿದ್ದಾರೆ.
ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…
ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…
ಕೆಲ ದಿನಗಳ ಹಿಂದಷ್ಟೇ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಚಿತ್ರನಟ ಜೋಸೆಫ್ ವಿಜಯ್ ಅವರು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಒಂದೇ ರಸ್ತೆಯಲ್ಲಿ…
ನವೀನ್ ಡಿಸೋಜ ವಿಪತ್ತು ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ; ಸಂತ್ರಸ್ತರನ್ನು ರಕ್ಷಿಸುವ ವಿಧಾನ, ದೋಣಿ ಮೋಟಾರ್ಗಳನ್ನು ಚಾಲನೆ ಮಾಡುವ ಬಗ್ಗೆ…
ಬಾಪೂಜಿ ಮತ್ತು ವಾಜಪೇಯಿ ದಾರಿ ಬೇರೆಯಾಗಿದ್ದರೂ ನೈತಿಕತೆಗೆ ಮಾದರಿಯಾಗಿದ್ದರು ರಾಜೀವ ಹೆಗಡೆ ಗಾಂಧೀಜಿ ಕ್ವಿಟ್ ಇಂಡಿಯಾ ಚಳವಳಿ ಆರಂಭಿ ಸಿದಾಗ…
ಸುಧಾರಣೆ ನೆಪದಲ್ಲಿ ಎಚ್ಚರ ತಪ್ಪಿದೆ. ಪ್ರೌಢಶಾಲೆಯಲ್ಲಿ ನನಗೆ ಆಪ್ತ ಸ್ನೇಹಿತರು ಬಹಳ ಕಡಿಮೆಯಿದ್ದರು. ಅಲ್ಲಿ ಬೇರೆ ಬೇರೆ ಕಾಲದಲ್ಲಿ ನನಗೆ…