ರಾಜ್ಯ

ಎಫ್ ಡಿ ಐ ಪರೀಕ್ಷೆ ಹಗರಣ| ಯಾರನ್ನೂ ಬಿಡೋ ಪ್ರಶ್ನೆ ಇಲ್ಲ: ಪ್ರಿಯಾಂಕ್ ಖರ್ಗೆ

ಕಲಬುರಗಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮದಲ್ಲಿ ಭಾಗಿಯಾದ ಯಾರೊಬ್ಬರನ್ನು ಬಿಡೋದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಮತ್ತು ಜಿಲ್ಲಾ ಉಸ್ತುವಾರಿ‌ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಕನ್ನಡ ರಾಜ್ಯೋತ್ಸವದ ನಂತರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಕ್ರಮ ನಡೆಯುವ ಸಾಧ್ಯತೆಗಳ‌ ಮನಗಂಡೇ 200 ಮೀಟರ್ ಒಳಗೆ ಯಾರನ್ನು ಬಿಟ್ಟಿಲ್ಲ. ಎರಡು ಹಂತದ ಡಿಟೆಕ್ಟರ್ ಅಳವಡಿಸಲಾಗಿದ್ದರ ಪರಿಣಾಮ ಪರೀಕ್ಷೆ ಬರೆಯುವ ಸಂದರ್ಭದಲ್ಲೇ ಹಲವರನ್ನು ವಶಕ್ಕೆ ಪಡೆದು ಬಂಧಿಸಲಾಗಿದೆ. ಈಗ ಎಲ್ಲ ಆಯಾಮಗಳಿಂದ ತನಿಖೆ ನಡೆಯುತ್ತಿದೆ.‌ ಪ್ರಕರಣದಲ್ಲಿ ಅಧಿಕಾರಿಗಳೇ ಇರಲಿ, ಇನ್ನಾರೇ ದೊಡ್ಡ ಕುಳಗಳಿರಲಿ, ಅವರನ್ನು ರಕ್ಷಿಸುವುದಿಲ್ಲ.‌ ಬಂಧಿಸಿ ಕಠಿಣ ಕ್ರಮ‌ಕೈಗೊಳ್ಳುತ್ತೇವೆ ಎಂದರು.

ಮುಂಜಾಗ್ರತಾ ಕ್ರಮ ಕೈಗೊಂಡ ಪರಿಣಾಮವೇ ಹಲವರು ಗೈರು ಹಾಜರಾಗಿದ್ದಾರೆ. ಕೆಲವು ಅಕ್ರಮವಾಗಿರಬಹುದು.‌ ಆದರೆ ಈಗಿನದ್ದು ಅವಲೋಕಿಸಿದರೆ ಪ್ರಶ್ನೆ ಪತ್ರಿಕೆ ಬಹಿರಂಗಗೊಂಡಿಲ್ಲ. ಆದರೂ ಎಲ್ಲಿ, ಲೋಪವಾಗಿದೆ.ಇದರಲ್ಲಿ ಅಧಿಕಾರಿಗಳ ಪಾತ್ರವೇನು? ಎಂಬುದರ ಕುರಿತಾಗಿ ತನಿಖೆ ನಡೆದಿದ್ದು, ವೈಜ್ಞಾನಿಕ ನಿಟ್ಟಿನಲ್ಲಿ ತನಿಖೆ ನಡೆದಿರುವುದರಿಂದ ಆರೋಪಿಗಳ್ಯಾರು ಪ್ರಕರಣದಿಂದ ಪಾರಾಗುವಂತಿಲ್ಲ ಎಂದು ಪುನರುಚ್ಚರಿಸಿದರು.

ತನಿಖೆ: ಅಕ್ರಮದ ತನಿಖೆಯು ಪ್ರಗತಿ ಯಲ್ಲಿದೆ. ತನಿಖಾ ಆಳ ಹಾಗೂ ವಿಸ್ತಾರ ಅವಲೋಕಿಸಿ ಯಾವ ಮಟ್ಟದ ತನಿಖೆ ಎಂಬುದನ್ನು ಮುಂದಿನ ದಿನಗಳಲ್ಲಿ ನಿರ್ಧರಿಸಲಾಗುವುದು.‌ ಆದರೆ ಪ್ರಕರಣದ ತನಿಖೆ ಸಿಬಿಐಗೆ ವಹಿಸುವುದಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಠಪಡಿಸಿದರು.‌

ಪಿಎಸ್ಐ ಹಗರಣ ಕ್ಕೂ ಈ ಎಫ್ ಡಿಎ ಅಕ್ರಮಕ್ಕೂ ವ್ಯತ್ಯಾಸಗಳಿವೆ. ಪಿಎಸ್ಐ ಹಗರಣ ನಡೆದಿದ್ದರೂ ಆಗಿನ ಬಿಜೆಪಿ ಸರ್ಕಾರದ ಗೃಹ ಸಚಿವರೇ ಏನು ಆಗಿಲ್ಲ‌ಎಂದು ವಿಧಾನಸಭೆಯಲ್ಲಿ ಹೇಳಿದ್ದರು. ಸಚಿವರೇ ಅಕ್ರಮದಲ್ಲಿ ಭಾಗಿಯಾದ ಅಭ್ಯರ್ಥಿ ಯನ್ನು ಹಿಡಿಯಬೇಡಿ ಎಂಬ ಆಡಿಯೋ ಹೊರಗೆ ಬಂತು. ಅದಲ್ಲದೇ ಇನ್ನೂ ಹಲವರ ಹೆಸರು ಕೇಳಿ ಬಂದಿದ್ದರಿಂದ ನ್ಯಾಯಾಂಗ ತನಿಖೆ ಕೇಳಲಾಗಿತ್ತು. ‌ಆದರೆ ಕೊಡಲಿಲ್ಲ. ಈಗ ಸಿಬಿಐ ತನಿಖೆ ಎನ್ನುತ್ತಿದ್ದಾರೆ. ತಮ್ಮದು ವಾದ ಯಾವಾಗಲೂ ಬದ್ದತೆಯಿಂದ ಕೂಡಿದೆ ಎಂದು ತಿಳಿಸಿದರು.

 

andolanait

Recent Posts

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

7 hours ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

7 hours ago

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಬೆನ್ನಲ್ಲೇ ಪೈಲಟ್‌ಗಳ ರಜಾ ನಿಯಮ ಸಡಿಲಿಸಿದ ಡಿಜಿಸಿಎ

ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…

9 hours ago

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ: ಸತೀಶ್‌ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

10 hours ago

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಎಚ್‌ಡಿಕೆ ಪತ್ರ

ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…

11 hours ago

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

11 hours ago