ರಾಜ್ಯ

ಎಫ್ ಡಿ ಐ ಪರೀಕ್ಷೆ ಹಗರಣ| ಯಾರನ್ನೂ ಬಿಡೋ ಪ್ರಶ್ನೆ ಇಲ್ಲ: ಪ್ರಿಯಾಂಕ್ ಖರ್ಗೆ

ಕಲಬುರಗಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮದಲ್ಲಿ ಭಾಗಿಯಾದ ಯಾರೊಬ್ಬರನ್ನು ಬಿಡೋದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಮತ್ತು ಜಿಲ್ಲಾ ಉಸ್ತುವಾರಿ‌ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಕನ್ನಡ ರಾಜ್ಯೋತ್ಸವದ ನಂತರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಕ್ರಮ ನಡೆಯುವ ಸಾಧ್ಯತೆಗಳ‌ ಮನಗಂಡೇ 200 ಮೀಟರ್ ಒಳಗೆ ಯಾರನ್ನು ಬಿಟ್ಟಿಲ್ಲ. ಎರಡು ಹಂತದ ಡಿಟೆಕ್ಟರ್ ಅಳವಡಿಸಲಾಗಿದ್ದರ ಪರಿಣಾಮ ಪರೀಕ್ಷೆ ಬರೆಯುವ ಸಂದರ್ಭದಲ್ಲೇ ಹಲವರನ್ನು ವಶಕ್ಕೆ ಪಡೆದು ಬಂಧಿಸಲಾಗಿದೆ. ಈಗ ಎಲ್ಲ ಆಯಾಮಗಳಿಂದ ತನಿಖೆ ನಡೆಯುತ್ತಿದೆ.‌ ಪ್ರಕರಣದಲ್ಲಿ ಅಧಿಕಾರಿಗಳೇ ಇರಲಿ, ಇನ್ನಾರೇ ದೊಡ್ಡ ಕುಳಗಳಿರಲಿ, ಅವರನ್ನು ರಕ್ಷಿಸುವುದಿಲ್ಲ.‌ ಬಂಧಿಸಿ ಕಠಿಣ ಕ್ರಮ‌ಕೈಗೊಳ್ಳುತ್ತೇವೆ ಎಂದರು.

ಮುಂಜಾಗ್ರತಾ ಕ್ರಮ ಕೈಗೊಂಡ ಪರಿಣಾಮವೇ ಹಲವರು ಗೈರು ಹಾಜರಾಗಿದ್ದಾರೆ. ಕೆಲವು ಅಕ್ರಮವಾಗಿರಬಹುದು.‌ ಆದರೆ ಈಗಿನದ್ದು ಅವಲೋಕಿಸಿದರೆ ಪ್ರಶ್ನೆ ಪತ್ರಿಕೆ ಬಹಿರಂಗಗೊಂಡಿಲ್ಲ. ಆದರೂ ಎಲ್ಲಿ, ಲೋಪವಾಗಿದೆ.ಇದರಲ್ಲಿ ಅಧಿಕಾರಿಗಳ ಪಾತ್ರವೇನು? ಎಂಬುದರ ಕುರಿತಾಗಿ ತನಿಖೆ ನಡೆದಿದ್ದು, ವೈಜ್ಞಾನಿಕ ನಿಟ್ಟಿನಲ್ಲಿ ತನಿಖೆ ನಡೆದಿರುವುದರಿಂದ ಆರೋಪಿಗಳ್ಯಾರು ಪ್ರಕರಣದಿಂದ ಪಾರಾಗುವಂತಿಲ್ಲ ಎಂದು ಪುನರುಚ್ಚರಿಸಿದರು.

ತನಿಖೆ: ಅಕ್ರಮದ ತನಿಖೆಯು ಪ್ರಗತಿ ಯಲ್ಲಿದೆ. ತನಿಖಾ ಆಳ ಹಾಗೂ ವಿಸ್ತಾರ ಅವಲೋಕಿಸಿ ಯಾವ ಮಟ್ಟದ ತನಿಖೆ ಎಂಬುದನ್ನು ಮುಂದಿನ ದಿನಗಳಲ್ಲಿ ನಿರ್ಧರಿಸಲಾಗುವುದು.‌ ಆದರೆ ಪ್ರಕರಣದ ತನಿಖೆ ಸಿಬಿಐಗೆ ವಹಿಸುವುದಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಠಪಡಿಸಿದರು.‌

ಪಿಎಸ್ಐ ಹಗರಣ ಕ್ಕೂ ಈ ಎಫ್ ಡಿಎ ಅಕ್ರಮಕ್ಕೂ ವ್ಯತ್ಯಾಸಗಳಿವೆ. ಪಿಎಸ್ಐ ಹಗರಣ ನಡೆದಿದ್ದರೂ ಆಗಿನ ಬಿಜೆಪಿ ಸರ್ಕಾರದ ಗೃಹ ಸಚಿವರೇ ಏನು ಆಗಿಲ್ಲ‌ಎಂದು ವಿಧಾನಸಭೆಯಲ್ಲಿ ಹೇಳಿದ್ದರು. ಸಚಿವರೇ ಅಕ್ರಮದಲ್ಲಿ ಭಾಗಿಯಾದ ಅಭ್ಯರ್ಥಿ ಯನ್ನು ಹಿಡಿಯಬೇಡಿ ಎಂಬ ಆಡಿಯೋ ಹೊರಗೆ ಬಂತು. ಅದಲ್ಲದೇ ಇನ್ನೂ ಹಲವರ ಹೆಸರು ಕೇಳಿ ಬಂದಿದ್ದರಿಂದ ನ್ಯಾಯಾಂಗ ತನಿಖೆ ಕೇಳಲಾಗಿತ್ತು. ‌ಆದರೆ ಕೊಡಲಿಲ್ಲ. ಈಗ ಸಿಬಿಐ ತನಿಖೆ ಎನ್ನುತ್ತಿದ್ದಾರೆ. ತಮ್ಮದು ವಾದ ಯಾವಾಗಲೂ ಬದ್ದತೆಯಿಂದ ಕೂಡಿದೆ ಎಂದು ತಿಳಿಸಿದರು.

 

andolanait

Recent Posts

ಚಿರತೆ ದಾಳಿ: ಕೂಲಿ ಕಾರ್ಮಿಕನಿಗೆ ಗಾಯ

ಹುಣಸೂರು: ಕೂಲಿ ಕಾರ್ಮಿಕನ ಮೇಲೆ ಚಿರತೆ ದಾಳಿ ನಡೆಸಿ ತೀವ್ರವಾಗಿ ಗಾಯಗೊಳಿಸಿರುವ ಘಟನೆ ತಾಲ್ಲೂಕಿನ ಹನಗೋಡು ಹೋಬಳಿಯ ಕಣಗಾಲು ಗ್ರಾಮದ…

15 mins ago

ಓದುಗರ ಪತ್ರ: ಡಾಂಬರು ಕಾಣದ ಕಾಳಿಹುಂಡಿ ರಸ್ತೆ

ಸರಗೂರು ತಾಲ್ಲೂಕಿನ ಕಾಳಿಹುಂಡಿ ಗ್ರಾಮದ ರಸ್ತೆ ಡಾಂಬರು ಕಾಣದೆ ಹಲವು ವರ್ಷಗಳೇ ಆಗಿವೆ. ಈ ರಸ್ತೆಯು ಹಳ್ಳಕೊಳ್ಳಗಳಿಂದ ಕೂಡಿದೆ. ಈ…

18 mins ago

ಓದುಗರ ಪತ್ರ: ಬಿರು ಬೇಸಿಗೆಯಲ್ಲಿ ಇರಲಿ ಎಚ್ಚರ

ಬೇಸಿಗೆ ಶುರುವಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಸುಮಾರು ೩೪ ಸೆಲ್ಸಿಯಸ್‌ಗೂ ಹೆಚ್ಚು ಪ್ರಮಾಣದಲ್ಲಿ ಬಿಸಿಲಿನ ತಾಪ ಮಾನ ಏರಿಕೆಯಾಗಿರುವ…

21 mins ago

ಜಾ.ದಳ ತಾಲ್ಲೂಕು ಅಧ್ಯಕ್ಷ ಸ್ಥಾನಕ್ಕೆ ಮುಖಂಡರ ಪೈಪೋಟಿ

ಮಂಜು ಕೋಟೆ ಕೋಟೆ: ರಾಜೇಂದ್ರ, ಸಿ.ವಿ.ನಾಗರಾಜು, ಯೋಗಾನರಸಿಂಹೇಗೌಡ, ಗುಂಡತ್ತೂರು ಪ್ರಕಾಶ್ ಪ್ರಬಲ ಆಕಾಂಕ್ಷಿಗಳು ಎಚ್.ಡಿ.ಕೋಟೆ: ಜಾ.ದಳ ತಾಲ್ಲೂಕು ಅಧ್ಯಕ್ಷರನ್ನು ನೇಮಕ…

27 mins ago

ಎಲ್ಲೆಂದರಲ್ಲಿ ಕಸ ಸುರಿದರೆ ಬೀಳಲಿದೆ ದಂಡ!

ಪುರಸಭೆಯಿಂದ ಹಲವು ಕಡೆಗಳಲ್ಲಿ ಸಿಸಿಟಿವಿ ಅಳವಡಿಕೆ; ಸ್ವಚ್ಛ ಪಟ್ಟಣಕ್ಕೆ ಸಹಕರಿಸಲು ಮನವಿ ಗುಂಡ್ಲುಪೇಟೆ: ಪಟ್ಟಣದ ಕೆಲವೆಡೆ ಕಸ ಸುರಿಯದಂತೆ ಎಚ್ಚರಿಕೆ…

32 mins ago

ಅನಿಲ ಬಿಕ್ಕಟ್ಟು: ಕೃಷಿ, ಪ್ರವಾಸೋದ್ಯಮಕ್ಕೆ ಇಕ್ಕಟ್ಟು

ಕೆ.ಬಿ.ರಮೇಶನಾಯಕ ಮೈಸೂರು: ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ಭಾರತದ ಮೇಲೆ ದಿನದಿಂದ ದಿನಕ್ಕೆ ಅನಿಲ ಬಿಕ್ಕಟ್ಟು ಬಿಗಡಾಯಿಸುತ್ತಿದ್ದು, ವಾಣಿಜ್ಯ ಬಳಕೆಯ…

1 hour ago