ಕಲಬುರಗಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮದಲ್ಲಿ ಭಾಗಿಯಾದ ಯಾರೊಬ್ಬರನ್ನು ಬಿಡೋದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಕನ್ನಡ ರಾಜ್ಯೋತ್ಸವದ ನಂತರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಕ್ರಮ ನಡೆಯುವ ಸಾಧ್ಯತೆಗಳ ಮನಗಂಡೇ 200 ಮೀಟರ್ ಒಳಗೆ ಯಾರನ್ನು ಬಿಟ್ಟಿಲ್ಲ. ಎರಡು ಹಂತದ ಡಿಟೆಕ್ಟರ್ ಅಳವಡಿಸಲಾಗಿದ್ದರ ಪರಿಣಾಮ ಪರೀಕ್ಷೆ ಬರೆಯುವ ಸಂದರ್ಭದಲ್ಲೇ ಹಲವರನ್ನು ವಶಕ್ಕೆ ಪಡೆದು ಬಂಧಿಸಲಾಗಿದೆ. ಈಗ ಎಲ್ಲ ಆಯಾಮಗಳಿಂದ ತನಿಖೆ ನಡೆಯುತ್ತಿದೆ. ಪ್ರಕರಣದಲ್ಲಿ ಅಧಿಕಾರಿಗಳೇ ಇರಲಿ, ಇನ್ನಾರೇ ದೊಡ್ಡ ಕುಳಗಳಿರಲಿ, ಅವರನ್ನು ರಕ್ಷಿಸುವುದಿಲ್ಲ. ಬಂಧಿಸಿ ಕಠಿಣ ಕ್ರಮಕೈಗೊಳ್ಳುತ್ತೇವೆ ಎಂದರು.
ಮುಂಜಾಗ್ರತಾ ಕ್ರಮ ಕೈಗೊಂಡ ಪರಿಣಾಮವೇ ಹಲವರು ಗೈರು ಹಾಜರಾಗಿದ್ದಾರೆ. ಕೆಲವು ಅಕ್ರಮವಾಗಿರಬಹುದು. ಆದರೆ ಈಗಿನದ್ದು ಅವಲೋಕಿಸಿದರೆ ಪ್ರಶ್ನೆ ಪತ್ರಿಕೆ ಬಹಿರಂಗಗೊಂಡಿಲ್ಲ. ಆದರೂ ಎಲ್ಲಿ, ಲೋಪವಾಗಿದೆ.ಇದರಲ್ಲಿ ಅಧಿಕಾರಿಗಳ ಪಾತ್ರವೇನು? ಎಂಬುದರ ಕುರಿತಾಗಿ ತನಿಖೆ ನಡೆದಿದ್ದು, ವೈಜ್ಞಾನಿಕ ನಿಟ್ಟಿನಲ್ಲಿ ತನಿಖೆ ನಡೆದಿರುವುದರಿಂದ ಆರೋಪಿಗಳ್ಯಾರು ಪ್ರಕರಣದಿಂದ ಪಾರಾಗುವಂತಿಲ್ಲ ಎಂದು ಪುನರುಚ್ಚರಿಸಿದರು.
ತನಿಖೆ: ಅಕ್ರಮದ ತನಿಖೆಯು ಪ್ರಗತಿ ಯಲ್ಲಿದೆ. ತನಿಖಾ ಆಳ ಹಾಗೂ ವಿಸ್ತಾರ ಅವಲೋಕಿಸಿ ಯಾವ ಮಟ್ಟದ ತನಿಖೆ ಎಂಬುದನ್ನು ಮುಂದಿನ ದಿನಗಳಲ್ಲಿ ನಿರ್ಧರಿಸಲಾಗುವುದು. ಆದರೆ ಪ್ರಕರಣದ ತನಿಖೆ ಸಿಬಿಐಗೆ ವಹಿಸುವುದಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಠಪಡಿಸಿದರು.
ಪಿಎಸ್ಐ ಹಗರಣ ಕ್ಕೂ ಈ ಎಫ್ ಡಿಎ ಅಕ್ರಮಕ್ಕೂ ವ್ಯತ್ಯಾಸಗಳಿವೆ. ಪಿಎಸ್ಐ ಹಗರಣ ನಡೆದಿದ್ದರೂ ಆಗಿನ ಬಿಜೆಪಿ ಸರ್ಕಾರದ ಗೃಹ ಸಚಿವರೇ ಏನು ಆಗಿಲ್ಲಎಂದು ವಿಧಾನಸಭೆಯಲ್ಲಿ ಹೇಳಿದ್ದರು. ಸಚಿವರೇ ಅಕ್ರಮದಲ್ಲಿ ಭಾಗಿಯಾದ ಅಭ್ಯರ್ಥಿ ಯನ್ನು ಹಿಡಿಯಬೇಡಿ ಎಂಬ ಆಡಿಯೋ ಹೊರಗೆ ಬಂತು. ಅದಲ್ಲದೇ ಇನ್ನೂ ಹಲವರ ಹೆಸರು ಕೇಳಿ ಬಂದಿದ್ದರಿಂದ ನ್ಯಾಯಾಂಗ ತನಿಖೆ ಕೇಳಲಾಗಿತ್ತು. ಆದರೆ ಕೊಡಲಿಲ್ಲ. ಈಗ ಸಿಬಿಐ ತನಿಖೆ ಎನ್ನುತ್ತಿದ್ದಾರೆ. ತಮ್ಮದು ವಾದ ಯಾವಾಗಲೂ ಬದ್ದತೆಯಿಂದ ಕೂಡಿದೆ ಎಂದು ತಿಳಿಸಿದರು.
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…
ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…
ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…
ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…