ರಾಜ್ಯ

ಎಫ್ ಡಿ ಐ ಪರೀಕ್ಷೆ ಹಗರಣ| ಯಾರನ್ನೂ ಬಿಡೋ ಪ್ರಶ್ನೆ ಇಲ್ಲ: ಪ್ರಿಯಾಂಕ್ ಖರ್ಗೆ

ಕಲಬುರಗಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮದಲ್ಲಿ ಭಾಗಿಯಾದ ಯಾರೊಬ್ಬರನ್ನು ಬಿಡೋದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಮತ್ತು ಜಿಲ್ಲಾ ಉಸ್ತುವಾರಿ‌ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಕನ್ನಡ ರಾಜ್ಯೋತ್ಸವದ ನಂತರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಕ್ರಮ ನಡೆಯುವ ಸಾಧ್ಯತೆಗಳ‌ ಮನಗಂಡೇ 200 ಮೀಟರ್ ಒಳಗೆ ಯಾರನ್ನು ಬಿಟ್ಟಿಲ್ಲ. ಎರಡು ಹಂತದ ಡಿಟೆಕ್ಟರ್ ಅಳವಡಿಸಲಾಗಿದ್ದರ ಪರಿಣಾಮ ಪರೀಕ್ಷೆ ಬರೆಯುವ ಸಂದರ್ಭದಲ್ಲೇ ಹಲವರನ್ನು ವಶಕ್ಕೆ ಪಡೆದು ಬಂಧಿಸಲಾಗಿದೆ. ಈಗ ಎಲ್ಲ ಆಯಾಮಗಳಿಂದ ತನಿಖೆ ನಡೆಯುತ್ತಿದೆ.‌ ಪ್ರಕರಣದಲ್ಲಿ ಅಧಿಕಾರಿಗಳೇ ಇರಲಿ, ಇನ್ನಾರೇ ದೊಡ್ಡ ಕುಳಗಳಿರಲಿ, ಅವರನ್ನು ರಕ್ಷಿಸುವುದಿಲ್ಲ.‌ ಬಂಧಿಸಿ ಕಠಿಣ ಕ್ರಮ‌ಕೈಗೊಳ್ಳುತ್ತೇವೆ ಎಂದರು.

ಮುಂಜಾಗ್ರತಾ ಕ್ರಮ ಕೈಗೊಂಡ ಪರಿಣಾಮವೇ ಹಲವರು ಗೈರು ಹಾಜರಾಗಿದ್ದಾರೆ. ಕೆಲವು ಅಕ್ರಮವಾಗಿರಬಹುದು.‌ ಆದರೆ ಈಗಿನದ್ದು ಅವಲೋಕಿಸಿದರೆ ಪ್ರಶ್ನೆ ಪತ್ರಿಕೆ ಬಹಿರಂಗಗೊಂಡಿಲ್ಲ. ಆದರೂ ಎಲ್ಲಿ, ಲೋಪವಾಗಿದೆ.ಇದರಲ್ಲಿ ಅಧಿಕಾರಿಗಳ ಪಾತ್ರವೇನು? ಎಂಬುದರ ಕುರಿತಾಗಿ ತನಿಖೆ ನಡೆದಿದ್ದು, ವೈಜ್ಞಾನಿಕ ನಿಟ್ಟಿನಲ್ಲಿ ತನಿಖೆ ನಡೆದಿರುವುದರಿಂದ ಆರೋಪಿಗಳ್ಯಾರು ಪ್ರಕರಣದಿಂದ ಪಾರಾಗುವಂತಿಲ್ಲ ಎಂದು ಪುನರುಚ್ಚರಿಸಿದರು.

ತನಿಖೆ: ಅಕ್ರಮದ ತನಿಖೆಯು ಪ್ರಗತಿ ಯಲ್ಲಿದೆ. ತನಿಖಾ ಆಳ ಹಾಗೂ ವಿಸ್ತಾರ ಅವಲೋಕಿಸಿ ಯಾವ ಮಟ್ಟದ ತನಿಖೆ ಎಂಬುದನ್ನು ಮುಂದಿನ ದಿನಗಳಲ್ಲಿ ನಿರ್ಧರಿಸಲಾಗುವುದು.‌ ಆದರೆ ಪ್ರಕರಣದ ತನಿಖೆ ಸಿಬಿಐಗೆ ವಹಿಸುವುದಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಠಪಡಿಸಿದರು.‌

ಪಿಎಸ್ಐ ಹಗರಣ ಕ್ಕೂ ಈ ಎಫ್ ಡಿಎ ಅಕ್ರಮಕ್ಕೂ ವ್ಯತ್ಯಾಸಗಳಿವೆ. ಪಿಎಸ್ಐ ಹಗರಣ ನಡೆದಿದ್ದರೂ ಆಗಿನ ಬಿಜೆಪಿ ಸರ್ಕಾರದ ಗೃಹ ಸಚಿವರೇ ಏನು ಆಗಿಲ್ಲ‌ಎಂದು ವಿಧಾನಸಭೆಯಲ್ಲಿ ಹೇಳಿದ್ದರು. ಸಚಿವರೇ ಅಕ್ರಮದಲ್ಲಿ ಭಾಗಿಯಾದ ಅಭ್ಯರ್ಥಿ ಯನ್ನು ಹಿಡಿಯಬೇಡಿ ಎಂಬ ಆಡಿಯೋ ಹೊರಗೆ ಬಂತು. ಅದಲ್ಲದೇ ಇನ್ನೂ ಹಲವರ ಹೆಸರು ಕೇಳಿ ಬಂದಿದ್ದರಿಂದ ನ್ಯಾಯಾಂಗ ತನಿಖೆ ಕೇಳಲಾಗಿತ್ತು. ‌ಆದರೆ ಕೊಡಲಿಲ್ಲ. ಈಗ ಸಿಬಿಐ ತನಿಖೆ ಎನ್ನುತ್ತಿದ್ದಾರೆ. ತಮ್ಮದು ವಾದ ಯಾವಾಗಲೂ ಬದ್ದತೆಯಿಂದ ಕೂಡಿದೆ ಎಂದು ತಿಳಿಸಿದರು.

 

andolanait

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

3 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

3 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

3 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

3 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

3 hours ago