ರಾಜ್ಯ

ಬೆಂಗಳೂರಿನ ರಸ್ತೆಗುಂಡಿಗಳಿಂದ ಬೇಸತ್ತು ಬೇರೆ ರಾಜ್ಯಗಳತ್ತ ಮುಖಮಾಡಿದ ಪ್ರತಿಷ್ಠಿತ ಖಾಸಗಿ ಕಂಪನಿ..!

ಬೆಂಗಳೂರು : ನಗರದ ರಸ್ತೆ ಗುಂಡಿ ಮತ್ತಿತರ ಅವ್ಯವಸ್ಥೆಗಳಿಂದ ಬೆಸತ್ತಿರುವ ಖಾಸಗಿ ಸಂಸ್ಥೆಯೊಂದು ಬೆಂಗಳೂರಿನಿಂದ ಹೊರ ನಡೆಯಲು ತೀರ್ಮಾನಿಸಿದೆ. ಕಳೆದ ಒಂಬತ್ತು ವರ್ಷಗಳಿಂದ ನಗರದಲ್ಲಿ ಕಾರ್ಯಚರಣೆ ನಡೆಸುತ್ತಿರುವ ಅತಿದೊಡ್ಡ ಲಾಜಿಸ್ಟಿಕ್ ಸಂಸ್ಥೆಯಾದ ಬ್ಲಾಕ್ ಬಕ್ ಕಂಪನಿ ಬೆಂಗಳೂರಿನ ಸಹವಾಸವೇ ಬೇಡ ಎಂಬ ನಿರ್ಧಾರಕ್ಕೆ ಬಂದಿದೆ.

ಕಳೆದ 990 ರಲ್ಲಿ ಲಾಜಿಸ್ಟಿಕ್ ಸೇವೆ ಆರಂಭಿಸಿದ್ದ ಬ್ಲಾಕ್ ಬಕ್ ಸಂಸ್ಥೆ ನಗರದ ಹೊರವರ್ತುಲ ರಸ್ತೆಯಲ್ಲಿ ಸೇವೆ ನೀಡುತ್ತ ಬರುತ್ತಿದೆ. ವೈಟ್‍ಫೀಲ್ಡ್, ಸರ್ಜಾಪುರ, ಮಾರತ್‍ಹಳ್ಳಿ ಮತ್ತು ಬೆಳ್ಳಂದೂರು ಕಡೆಗಳಲ್ಲಿ ಸೇವೆ ನೀಡ್ತಿರೋ ಈ ಸಂಸ್ಥೆ ನಗರದ ಅವ್ಯವಸ್ಥೆಗೆ ಬೇಸತ್ತು ಇಲ್ಲಿಂದ ಜಾಗ ಖಾಲಿ ಮಾಡಲು ನಿರ್ಧರಿಸಿದೆ.

ಬ್ಲಾಕ್‍ಬಕ್ ಸಂಸ್ಥೆ ಸಹ-ಸಂಸ್ಥಾಪಕ ಮತ್ತು ಸಿಇಒ ರಾಜೇಶ್ ಯಬಾಜಿ ಅವರು ಎಕ್ಸ್ ಮಾಡಿ ತಮ್ಮ ಈ ನಿರ್ಧಾರ ಪ್ರಕಟಿಸಿದ್ದಾರೆ. ಪೋಸ್ಟ್‍ನಲ್ಲಿ ಕಳೆದ 9 ವರ್ಷದಿಂದ ಬೆಂಗಳೂರಿನಲ್ಲಿ ಸೇವೆ ನೀಡೋಕೆ ಕಷ್ಟ ಆಗ್ತಿದೆ.. ಬೆಳ್ಳಂದೂರಿನಲ್ಲಿ ಸೇವೆ ನೀಡೋಕೆ ಕಷ್ಟ ಆಗ್ತಿದೆ. ನಮ್ಮ ಕಚೇರಿ ಇದೀಗ ಕಚೇರಿ ಪ್ಲಸ್ ಮನೆಯಾಗಿ ಪರಿವರ್ತನೆಯಾಗಿದೆ. ಇಲ್ಲಿ ನಾವು ಮುಂದುವರೆಯುವುದು ಕಷ್ಟ ಆಗಲಿದೆ..ನಾವು ಹೊರಗೆ ಹೋಗಲು ತೀರ್ಮಾನಿಸಿದ್ದೇವೆ ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ.

ನಮ್ಮ ಅಸಮಾಧಾನಕ್ಕೆ ಕಾರಣ..!
ನಮ್ಮ ಸಹೋದ್ಯೋಗಿಗಳ ಪ್ರಯಾಣದ ಸಮಯ ಒಂದೂವರೆ ಗಂಟೆಗೂ ಹೆಚ್ಚಿದೆ. ರಸ್ತೆಗಳು ಗುಂಡಿ ಮತ್ತು ಧೂಳಿನಿಂದ ತುಂಬಿವೆ. ಹಾಳಾದ ರಸ್ತೆಗಳನ್ನ ರಿಪೇರಿ ಮಾಡಲು ಹಿಂದೇಟು ಹಾಕಲಾಗುತ್ತಿದೆ. ಮುಂದಿನ ಐದು ವರ್ಷ ಯಾವುದೇ ಬದಲಾವಣೆ ಕಂಡು ಬರುವುದು ಕಷ್ಟ ಸಾಧ್ಯ ಎನ್ನುವ ಪರಿಸ್ಥಿತಿ ಇರುವ ಹಿನ್ನೆಲೆಯಲ್ಲಿ ಇಂತಹ ನಿರ್ಧಾರ ಕೈಗೊಳ್ಳುವುದು ಅನಿವಾರ್ಯ ಎಂದು ಅವರು ಅಲವತ್ತುಕೊಂಡಿದ್ದಾರೆ. ಕೆಆರ್ ಪುರಂ ನಿಂದ ಸಿಲ್ಕ್ ಬೋರ್ಡ್ ವರೆಗೆ 500ಕ್ಕೂ ಐಟಿ ಸಂಸ್ಥೆಗಳಿವೆ ಇಲ್ಲಿ 9.5 ಲಕ್ಷಕ್ಕೂ ಹೆಚ್ಚು ಉದ್ಯೋಗಿಗಳು ಕೆಲಸ ಮಾಡುತ್ತಿದ್ದಾರೆ. ರಾಜ್ಯದ ವಾರ್ಷಿಕ ಆದಾಯದಲ್ಲಿ ಶೆ. 36ರಷ್ಟು ಕೊಡುಗೆ ನಮ್ಮದೆ ಇದೇ. ಪರಿಸ್ಥಿತಿ ಹೀಗಿದ್ದರೂ ನಮಗೆ ಸೂಕ್ತ ಮೂಲಭೂತ ಸೌಲಭ್ಯ ಸಿಗುತ್ತಿಲ್ಲ ಎಂದು ಅವರು ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ.

ಆಂದೋಲನ ಡೆಸ್ಕ್

Recent Posts

ಸಂಧಾನ ಯಶಸ್ವಿ : ಮುಷ್ಕರ ಹಿಂಪಡೆದ ವೈದ್ಯರು

 ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ನಾಳೆಯಿಂದ  (ಮಾರ್ಚ್ 11) ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು…

5 hours ago

ಪರಿಷತ್‌ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಜೆಡಿಎಸ್‌ಗೆ 1 ಸೀಟು

ಬೆಂಗಳೂರು : ಕರ್ನಾಟಕ ವಿಧಾನಪರಿಷತ್‌ನ ನಾಲ್ಕು ಕ್ಷೇತ್ರಗಳ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮೈತ್ರಿ ಪಕ್ಷ ಜೆಡಿಎಸ್‌ಗೆ ಒಂದು…

7 hours ago

ಎಲ್‌ಪಿಜಿ ಸಿಲಿಂಡರ್‌ ವ್ಯತ್ಯಯ, ಬೆಲೆ ಏರಿಕೆ : ಬಾಯಿ ಬಿಡದ ಬಿಜೆಪಿ ; ಡಿ.ಕೆ.ಶಿವಕುಮಾರ್‌ ಆರೋಪ

ಬೆಂಗಳೂರು : ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಜೊತೆಗೆ…

7 hours ago

ಹುಲಿ ದಾಳಿಗೆ ಹಸು ಬಲಿ ; ರೈತ ಪಾರು

ಗುಂಡ್ಲುಪೇಟೆ : ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿಯೊಂದು ದಾಳಿ ನಡೆಸಿದೆ. ಈ ವೇಳೆ ರೈತ ತನ್ನ ಹಸು ರಕ್ಷಿಸಲು…

8 hours ago

ಎಲ್‌ಪಿಜಿ ಕೊರತೆ | ಕೇಂದ್ರದಿಂದ 1955ರ ಕಾಯ್ದೆ ಜಾರಿ ; ಏನಿದು ಅಗತ್ಯ ಸರಕು ಕಾಯ್ದೆ?

ಹೊಸದಿಲ್ಲಿ : ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ಇಂಧನ ಪೂರೈಕೆಯ ಮೇಲೆ ಹೆಚ್ಚುತ್ತಿರುವ ಒತ್ತಡದ ನಡುವೆ, ದೇಶೀಯ ಇಂಧನ ಮಾರುಕಟ್ಟೆಯನ್ನು…

8 hours ago

ನ್ಯಾಯಾಂಗ ಭ್ರಷ್ಟಾಚಾರ ಕುರಿತ ಅಧ್ಯಾಯ ವಿವಾದ ; ಸಾರ್ವಜನಿಕ ಕ್ಷಮೆ ಯಾಚಿಸಿದ ಎನ್‌ಸಿಇಆರ್‌ಟಿ

ಹೊಸದಿಲ್ಲಿ : ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ (ಎನ್‌ಸಿಇಆರ್‌ಟಿ) ಇತ್ತೀಚೆಗೆ ಪ್ರಕಟಿಸಿದ್ದ 8ನೇ ತರಗತಿಯ ಸಮಾಜ ವಿಜ್ಞಾನ…

8 hours ago