pathhole
ಬೆಂಗಳೂರು : ನಗರದ ರಸ್ತೆ ಗುಂಡಿ ಮತ್ತಿತರ ಅವ್ಯವಸ್ಥೆಗಳಿಂದ ಬೆಸತ್ತಿರುವ ಖಾಸಗಿ ಸಂಸ್ಥೆಯೊಂದು ಬೆಂಗಳೂರಿನಿಂದ ಹೊರ ನಡೆಯಲು ತೀರ್ಮಾನಿಸಿದೆ. ಕಳೆದ ಒಂಬತ್ತು ವರ್ಷಗಳಿಂದ ನಗರದಲ್ಲಿ ಕಾರ್ಯಚರಣೆ ನಡೆಸುತ್ತಿರುವ ಅತಿದೊಡ್ಡ ಲಾಜಿಸ್ಟಿಕ್ ಸಂಸ್ಥೆಯಾದ ಬ್ಲಾಕ್ ಬಕ್ ಕಂಪನಿ ಬೆಂಗಳೂರಿನ ಸಹವಾಸವೇ ಬೇಡ ಎಂಬ ನಿರ್ಧಾರಕ್ಕೆ ಬಂದಿದೆ.
ಕಳೆದ 990 ರಲ್ಲಿ ಲಾಜಿಸ್ಟಿಕ್ ಸೇವೆ ಆರಂಭಿಸಿದ್ದ ಬ್ಲಾಕ್ ಬಕ್ ಸಂಸ್ಥೆ ನಗರದ ಹೊರವರ್ತುಲ ರಸ್ತೆಯಲ್ಲಿ ಸೇವೆ ನೀಡುತ್ತ ಬರುತ್ತಿದೆ. ವೈಟ್ಫೀಲ್ಡ್, ಸರ್ಜಾಪುರ, ಮಾರತ್ಹಳ್ಳಿ ಮತ್ತು ಬೆಳ್ಳಂದೂರು ಕಡೆಗಳಲ್ಲಿ ಸೇವೆ ನೀಡ್ತಿರೋ ಈ ಸಂಸ್ಥೆ ನಗರದ ಅವ್ಯವಸ್ಥೆಗೆ ಬೇಸತ್ತು ಇಲ್ಲಿಂದ ಜಾಗ ಖಾಲಿ ಮಾಡಲು ನಿರ್ಧರಿಸಿದೆ.
ಬ್ಲಾಕ್ಬಕ್ ಸಂಸ್ಥೆ ಸಹ-ಸಂಸ್ಥಾಪಕ ಮತ್ತು ಸಿಇಒ ರಾಜೇಶ್ ಯಬಾಜಿ ಅವರು ಎಕ್ಸ್ ಮಾಡಿ ತಮ್ಮ ಈ ನಿರ್ಧಾರ ಪ್ರಕಟಿಸಿದ್ದಾರೆ. ಪೋಸ್ಟ್ನಲ್ಲಿ ಕಳೆದ 9 ವರ್ಷದಿಂದ ಬೆಂಗಳೂರಿನಲ್ಲಿ ಸೇವೆ ನೀಡೋಕೆ ಕಷ್ಟ ಆಗ್ತಿದೆ.. ಬೆಳ್ಳಂದೂರಿನಲ್ಲಿ ಸೇವೆ ನೀಡೋಕೆ ಕಷ್ಟ ಆಗ್ತಿದೆ. ನಮ್ಮ ಕಚೇರಿ ಇದೀಗ ಕಚೇರಿ ಪ್ಲಸ್ ಮನೆಯಾಗಿ ಪರಿವರ್ತನೆಯಾಗಿದೆ. ಇಲ್ಲಿ ನಾವು ಮುಂದುವರೆಯುವುದು ಕಷ್ಟ ಆಗಲಿದೆ..ನಾವು ಹೊರಗೆ ಹೋಗಲು ತೀರ್ಮಾನಿಸಿದ್ದೇವೆ ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ.
ನಮ್ಮ ಅಸಮಾಧಾನಕ್ಕೆ ಕಾರಣ..!
ನಮ್ಮ ಸಹೋದ್ಯೋಗಿಗಳ ಪ್ರಯಾಣದ ಸಮಯ ಒಂದೂವರೆ ಗಂಟೆಗೂ ಹೆಚ್ಚಿದೆ. ರಸ್ತೆಗಳು ಗುಂಡಿ ಮತ್ತು ಧೂಳಿನಿಂದ ತುಂಬಿವೆ. ಹಾಳಾದ ರಸ್ತೆಗಳನ್ನ ರಿಪೇರಿ ಮಾಡಲು ಹಿಂದೇಟು ಹಾಕಲಾಗುತ್ತಿದೆ. ಮುಂದಿನ ಐದು ವರ್ಷ ಯಾವುದೇ ಬದಲಾವಣೆ ಕಂಡು ಬರುವುದು ಕಷ್ಟ ಸಾಧ್ಯ ಎನ್ನುವ ಪರಿಸ್ಥಿತಿ ಇರುವ ಹಿನ್ನೆಲೆಯಲ್ಲಿ ಇಂತಹ ನಿರ್ಧಾರ ಕೈಗೊಳ್ಳುವುದು ಅನಿವಾರ್ಯ ಎಂದು ಅವರು ಅಲವತ್ತುಕೊಂಡಿದ್ದಾರೆ. ಕೆಆರ್ ಪುರಂ ನಿಂದ ಸಿಲ್ಕ್ ಬೋರ್ಡ್ ವರೆಗೆ 500ಕ್ಕೂ ಐಟಿ ಸಂಸ್ಥೆಗಳಿವೆ ಇಲ್ಲಿ 9.5 ಲಕ್ಷಕ್ಕೂ ಹೆಚ್ಚು ಉದ್ಯೋಗಿಗಳು ಕೆಲಸ ಮಾಡುತ್ತಿದ್ದಾರೆ. ರಾಜ್ಯದ ವಾರ್ಷಿಕ ಆದಾಯದಲ್ಲಿ ಶೆ. 36ರಷ್ಟು ಕೊಡುಗೆ ನಮ್ಮದೆ ಇದೇ. ಪರಿಸ್ಥಿತಿ ಹೀಗಿದ್ದರೂ ನಮಗೆ ಸೂಕ್ತ ಮೂಲಭೂತ ಸೌಲಭ್ಯ ಸಿಗುತ್ತಿಲ್ಲ ಎಂದು ಅವರು ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ.
ಹೊಸದಿಲ್ಲಿ : ಗಣರಾಜ್ಯೋತ್ಸವಕ್ಕೂ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಅಶಾಂತಿ ಸೃಷ್ಟಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ಸಿಖ್ ಫಾರ್ ಜಸ್ಟೀಸ್ ನಿಯೋಜಿತ ಭಯೋತ್ಪಾದಕ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಪಿ.ದೊಡ್ಡಿ ಗ್ರಾಮದಲ್ಲಿ 5 ಕಾಡಾನೆಗಳ ಹಿಂಡು ಬೀಡುಬಿಟ್ಟು ಕಬ್ಬಿನ ಬೆಳೆ ಫಸಲನ್ನು ನಾಶಗೊಳಿಸಿರುವ ಘಟನೆ…
ಮಡಿಕೇರಿ : ಮೈಸೂರು-ಗೋಣಿಕೊಪ್ಪ ಹೆದ್ದಾರಿಯ ದಕ್ಷಿಣ ಕೊಡಗಿನ ತಿತಿಮತಿ ವ್ಯಾಪ್ತಿಯಲ್ಲಿ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಹುಲಿ ಸೆರೆಗೆ ಶಾಸಕ…
ನಂಜನಗೂಡು : ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಗಳನ್ನು ಸಹ ನಾಚಿಸುವಂತಹ ಆಧುನಿಕ ಸೌಲಭ್ಯಗಳನ್ನು…
ಬೃಹತ್ ಕೈಗಾರಿಕೆ ಸಚಿವಾಲಯ ಅಧೀನದ ಎಆರ್ಎಐ ಘಟಕ ಸ್ಥಾಪನೆಗೆ ಪರಿಶೀಲನೆ ನಡೆಯುತ್ತಿದೆ : ಕುಮಾರಸ್ವಾಮಿ ಮಂಡ್ಯ : ಜಿಲ್ಲೆಯಲ್ಲಿ ಕೈಗಾರಿಕೆ…
ಮಂಡ್ಯ : ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ ಎನ್ನುವ…