ರಾಜ್ಯ

ಬೆಂಗಳೂರಿನ ರಸ್ತೆಗುಂಡಿಗಳಿಂದ ಬೇಸತ್ತು ಬೇರೆ ರಾಜ್ಯಗಳತ್ತ ಮುಖಮಾಡಿದ ಪ್ರತಿಷ್ಠಿತ ಖಾಸಗಿ ಕಂಪನಿ..!

ಬೆಂಗಳೂರು : ನಗರದ ರಸ್ತೆ ಗುಂಡಿ ಮತ್ತಿತರ ಅವ್ಯವಸ್ಥೆಗಳಿಂದ ಬೆಸತ್ತಿರುವ ಖಾಸಗಿ ಸಂಸ್ಥೆಯೊಂದು ಬೆಂಗಳೂರಿನಿಂದ ಹೊರ ನಡೆಯಲು ತೀರ್ಮಾನಿಸಿದೆ. ಕಳೆದ ಒಂಬತ್ತು ವರ್ಷಗಳಿಂದ ನಗರದಲ್ಲಿ ಕಾರ್ಯಚರಣೆ ನಡೆಸುತ್ತಿರುವ ಅತಿದೊಡ್ಡ ಲಾಜಿಸ್ಟಿಕ್ ಸಂಸ್ಥೆಯಾದ ಬ್ಲಾಕ್ ಬಕ್ ಕಂಪನಿ ಬೆಂಗಳೂರಿನ ಸಹವಾಸವೇ ಬೇಡ ಎಂಬ ನಿರ್ಧಾರಕ್ಕೆ ಬಂದಿದೆ.

ಕಳೆದ 990 ರಲ್ಲಿ ಲಾಜಿಸ್ಟಿಕ್ ಸೇವೆ ಆರಂಭಿಸಿದ್ದ ಬ್ಲಾಕ್ ಬಕ್ ಸಂಸ್ಥೆ ನಗರದ ಹೊರವರ್ತುಲ ರಸ್ತೆಯಲ್ಲಿ ಸೇವೆ ನೀಡುತ್ತ ಬರುತ್ತಿದೆ. ವೈಟ್‍ಫೀಲ್ಡ್, ಸರ್ಜಾಪುರ, ಮಾರತ್‍ಹಳ್ಳಿ ಮತ್ತು ಬೆಳ್ಳಂದೂರು ಕಡೆಗಳಲ್ಲಿ ಸೇವೆ ನೀಡ್ತಿರೋ ಈ ಸಂಸ್ಥೆ ನಗರದ ಅವ್ಯವಸ್ಥೆಗೆ ಬೇಸತ್ತು ಇಲ್ಲಿಂದ ಜಾಗ ಖಾಲಿ ಮಾಡಲು ನಿರ್ಧರಿಸಿದೆ.

ಬ್ಲಾಕ್‍ಬಕ್ ಸಂಸ್ಥೆ ಸಹ-ಸಂಸ್ಥಾಪಕ ಮತ್ತು ಸಿಇಒ ರಾಜೇಶ್ ಯಬಾಜಿ ಅವರು ಎಕ್ಸ್ ಮಾಡಿ ತಮ್ಮ ಈ ನಿರ್ಧಾರ ಪ್ರಕಟಿಸಿದ್ದಾರೆ. ಪೋಸ್ಟ್‍ನಲ್ಲಿ ಕಳೆದ 9 ವರ್ಷದಿಂದ ಬೆಂಗಳೂರಿನಲ್ಲಿ ಸೇವೆ ನೀಡೋಕೆ ಕಷ್ಟ ಆಗ್ತಿದೆ.. ಬೆಳ್ಳಂದೂರಿನಲ್ಲಿ ಸೇವೆ ನೀಡೋಕೆ ಕಷ್ಟ ಆಗ್ತಿದೆ. ನಮ್ಮ ಕಚೇರಿ ಇದೀಗ ಕಚೇರಿ ಪ್ಲಸ್ ಮನೆಯಾಗಿ ಪರಿವರ್ತನೆಯಾಗಿದೆ. ಇಲ್ಲಿ ನಾವು ಮುಂದುವರೆಯುವುದು ಕಷ್ಟ ಆಗಲಿದೆ..ನಾವು ಹೊರಗೆ ಹೋಗಲು ತೀರ್ಮಾನಿಸಿದ್ದೇವೆ ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ.

ನಮ್ಮ ಅಸಮಾಧಾನಕ್ಕೆ ಕಾರಣ..!
ನಮ್ಮ ಸಹೋದ್ಯೋಗಿಗಳ ಪ್ರಯಾಣದ ಸಮಯ ಒಂದೂವರೆ ಗಂಟೆಗೂ ಹೆಚ್ಚಿದೆ. ರಸ್ತೆಗಳು ಗುಂಡಿ ಮತ್ತು ಧೂಳಿನಿಂದ ತುಂಬಿವೆ. ಹಾಳಾದ ರಸ್ತೆಗಳನ್ನ ರಿಪೇರಿ ಮಾಡಲು ಹಿಂದೇಟು ಹಾಕಲಾಗುತ್ತಿದೆ. ಮುಂದಿನ ಐದು ವರ್ಷ ಯಾವುದೇ ಬದಲಾವಣೆ ಕಂಡು ಬರುವುದು ಕಷ್ಟ ಸಾಧ್ಯ ಎನ್ನುವ ಪರಿಸ್ಥಿತಿ ಇರುವ ಹಿನ್ನೆಲೆಯಲ್ಲಿ ಇಂತಹ ನಿರ್ಧಾರ ಕೈಗೊಳ್ಳುವುದು ಅನಿವಾರ್ಯ ಎಂದು ಅವರು ಅಲವತ್ತುಕೊಂಡಿದ್ದಾರೆ. ಕೆಆರ್ ಪುರಂ ನಿಂದ ಸಿಲ್ಕ್ ಬೋರ್ಡ್ ವರೆಗೆ 500ಕ್ಕೂ ಐಟಿ ಸಂಸ್ಥೆಗಳಿವೆ ಇಲ್ಲಿ 9.5 ಲಕ್ಷಕ್ಕೂ ಹೆಚ್ಚು ಉದ್ಯೋಗಿಗಳು ಕೆಲಸ ಮಾಡುತ್ತಿದ್ದಾರೆ. ರಾಜ್ಯದ ವಾರ್ಷಿಕ ಆದಾಯದಲ್ಲಿ ಶೆ. 36ರಷ್ಟು ಕೊಡುಗೆ ನಮ್ಮದೆ ಇದೇ. ಪರಿಸ್ಥಿತಿ ಹೀಗಿದ್ದರೂ ನಮಗೆ ಸೂಕ್ತ ಮೂಲಭೂತ ಸೌಲಭ್ಯ ಸಿಗುತ್ತಿಲ್ಲ ಎಂದು ಅವರು ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ.

ಆಂದೋಲನ ಡೆಸ್ಕ್

Recent Posts

ಪರಿಷತ್‌ ಚುನಾವಣೆಯಲ್ಲಿ ಕ್ರಾಸ್‌ ವೋಟ್‌ ಮಾಡಿದ ಶಾಸಕರು ಗೊತ್ತಿದೆ ; ಎಚ್‌.ಡಿ.ಕುಮಾರಸ್ವಾಮಿ

ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…

11 hours ago

ಮಂಡ್ಯ | ಐವರು ಅಂತರ್‌ ಜಿಲ್ಲಾ ಕಳ್ಳರ ಬಂಧನ

ಮಂಡ್ಯ : ಜಿಲ್ಲೆಯ ವಿವಿಧೆಡೆ ನಡೆದ 21 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ 553 ಗ್ರಾಂ…

12 hours ago

ಜೂನ್‌ 21ರಂದು ನೀಟ್‌ ಮರುಪರೀಕ್ಷೆ ; ಮೈಸೂರು ಜಿಲ್ಲೆಯಲ್ಲಿ 7886 ಪರೀಕ್ಷಾರ್ಥಿಗಳ ನೋಂದಣಿ

ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ…

12 hours ago

ನೀಟ್‌ಗಾಗಿ ಟೆಲಿಗ್ರಾಂ ನಿಷೇಧ ; ಕೇಂದ್ರದ ನಿರ್ಧಾರ ಎತ್ತಿ ಹಿಡಿದ ಕೋರ್ಟ್‌

ಹೊಸದಿಲ್ಲಿ : ನೀಟ್‌-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…

13 hours ago

ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ ; ಡಾ.ಎಚ್.ಸಿ.ಮಹದೇವಪ್ಪ

ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…

13 hours ago

ಮೈಸೂರು | ಠಾಣಾ ಮಟ್ಟದಲ್ಲಿ ರೌಡಿ ಪ್ರತಿಬಂಧಕ ದಳ ಸ್ಥಾಪನೆ

ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…

21 hours ago