ರಾಜ್ಯ

ಬೆಂಗಳೂರಿನ ರಸ್ತೆಗುಂಡಿಗಳಿಂದ ಬೇಸತ್ತು ಬೇರೆ ರಾಜ್ಯಗಳತ್ತ ಮುಖಮಾಡಿದ ಪ್ರತಿಷ್ಠಿತ ಖಾಸಗಿ ಕಂಪನಿ..!

ಬೆಂಗಳೂರು : ನಗರದ ರಸ್ತೆ ಗುಂಡಿ ಮತ್ತಿತರ ಅವ್ಯವಸ್ಥೆಗಳಿಂದ ಬೆಸತ್ತಿರುವ ಖಾಸಗಿ ಸಂಸ್ಥೆಯೊಂದು ಬೆಂಗಳೂರಿನಿಂದ ಹೊರ ನಡೆಯಲು ತೀರ್ಮಾನಿಸಿದೆ. ಕಳೆದ ಒಂಬತ್ತು ವರ್ಷಗಳಿಂದ ನಗರದಲ್ಲಿ ಕಾರ್ಯಚರಣೆ ನಡೆಸುತ್ತಿರುವ ಅತಿದೊಡ್ಡ ಲಾಜಿಸ್ಟಿಕ್ ಸಂಸ್ಥೆಯಾದ ಬ್ಲಾಕ್ ಬಕ್ ಕಂಪನಿ ಬೆಂಗಳೂರಿನ ಸಹವಾಸವೇ ಬೇಡ ಎಂಬ ನಿರ್ಧಾರಕ್ಕೆ ಬಂದಿದೆ.

ಕಳೆದ 990 ರಲ್ಲಿ ಲಾಜಿಸ್ಟಿಕ್ ಸೇವೆ ಆರಂಭಿಸಿದ್ದ ಬ್ಲಾಕ್ ಬಕ್ ಸಂಸ್ಥೆ ನಗರದ ಹೊರವರ್ತುಲ ರಸ್ತೆಯಲ್ಲಿ ಸೇವೆ ನೀಡುತ್ತ ಬರುತ್ತಿದೆ. ವೈಟ್‍ಫೀಲ್ಡ್, ಸರ್ಜಾಪುರ, ಮಾರತ್‍ಹಳ್ಳಿ ಮತ್ತು ಬೆಳ್ಳಂದೂರು ಕಡೆಗಳಲ್ಲಿ ಸೇವೆ ನೀಡ್ತಿರೋ ಈ ಸಂಸ್ಥೆ ನಗರದ ಅವ್ಯವಸ್ಥೆಗೆ ಬೇಸತ್ತು ಇಲ್ಲಿಂದ ಜಾಗ ಖಾಲಿ ಮಾಡಲು ನಿರ್ಧರಿಸಿದೆ.

ಬ್ಲಾಕ್‍ಬಕ್ ಸಂಸ್ಥೆ ಸಹ-ಸಂಸ್ಥಾಪಕ ಮತ್ತು ಸಿಇಒ ರಾಜೇಶ್ ಯಬಾಜಿ ಅವರು ಎಕ್ಸ್ ಮಾಡಿ ತಮ್ಮ ಈ ನಿರ್ಧಾರ ಪ್ರಕಟಿಸಿದ್ದಾರೆ. ಪೋಸ್ಟ್‍ನಲ್ಲಿ ಕಳೆದ 9 ವರ್ಷದಿಂದ ಬೆಂಗಳೂರಿನಲ್ಲಿ ಸೇವೆ ನೀಡೋಕೆ ಕಷ್ಟ ಆಗ್ತಿದೆ.. ಬೆಳ್ಳಂದೂರಿನಲ್ಲಿ ಸೇವೆ ನೀಡೋಕೆ ಕಷ್ಟ ಆಗ್ತಿದೆ. ನಮ್ಮ ಕಚೇರಿ ಇದೀಗ ಕಚೇರಿ ಪ್ಲಸ್ ಮನೆಯಾಗಿ ಪರಿವರ್ತನೆಯಾಗಿದೆ. ಇಲ್ಲಿ ನಾವು ಮುಂದುವರೆಯುವುದು ಕಷ್ಟ ಆಗಲಿದೆ..ನಾವು ಹೊರಗೆ ಹೋಗಲು ತೀರ್ಮಾನಿಸಿದ್ದೇವೆ ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ.

ನಮ್ಮ ಅಸಮಾಧಾನಕ್ಕೆ ಕಾರಣ..!
ನಮ್ಮ ಸಹೋದ್ಯೋಗಿಗಳ ಪ್ರಯಾಣದ ಸಮಯ ಒಂದೂವರೆ ಗಂಟೆಗೂ ಹೆಚ್ಚಿದೆ. ರಸ್ತೆಗಳು ಗುಂಡಿ ಮತ್ತು ಧೂಳಿನಿಂದ ತುಂಬಿವೆ. ಹಾಳಾದ ರಸ್ತೆಗಳನ್ನ ರಿಪೇರಿ ಮಾಡಲು ಹಿಂದೇಟು ಹಾಕಲಾಗುತ್ತಿದೆ. ಮುಂದಿನ ಐದು ವರ್ಷ ಯಾವುದೇ ಬದಲಾವಣೆ ಕಂಡು ಬರುವುದು ಕಷ್ಟ ಸಾಧ್ಯ ಎನ್ನುವ ಪರಿಸ್ಥಿತಿ ಇರುವ ಹಿನ್ನೆಲೆಯಲ್ಲಿ ಇಂತಹ ನಿರ್ಧಾರ ಕೈಗೊಳ್ಳುವುದು ಅನಿವಾರ್ಯ ಎಂದು ಅವರು ಅಲವತ್ತುಕೊಂಡಿದ್ದಾರೆ. ಕೆಆರ್ ಪುರಂ ನಿಂದ ಸಿಲ್ಕ್ ಬೋರ್ಡ್ ವರೆಗೆ 500ಕ್ಕೂ ಐಟಿ ಸಂಸ್ಥೆಗಳಿವೆ ಇಲ್ಲಿ 9.5 ಲಕ್ಷಕ್ಕೂ ಹೆಚ್ಚು ಉದ್ಯೋಗಿಗಳು ಕೆಲಸ ಮಾಡುತ್ತಿದ್ದಾರೆ. ರಾಜ್ಯದ ವಾರ್ಷಿಕ ಆದಾಯದಲ್ಲಿ ಶೆ. 36ರಷ್ಟು ಕೊಡುಗೆ ನಮ್ಮದೆ ಇದೇ. ಪರಿಸ್ಥಿತಿ ಹೀಗಿದ್ದರೂ ನಮಗೆ ಸೂಕ್ತ ಮೂಲಭೂತ ಸೌಲಭ್ಯ ಸಿಗುತ್ತಿಲ್ಲ ಎಂದು ಅವರು ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

14 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

14 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

14 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

14 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

14 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

17 hours ago