ಬೆಂಗಳೂರು : ಇಂದಿನ ಯುವ ಜನಾಂಗದಲ್ಲಿ ಹೆಚ್ಚುತ್ತಿರುವ ರೀಲ್ಸ್ ಹುಚ್ಚನ್ನು ಎನ್ಕ್ಯಾಶ್ ಮಾಡಿಕೊಳ್ಳುವ ಹೊಸ ಐಡಿಯಾವನ್ನು ಮುಜರಾಯಿ ಇಲಾಖೆ ಕಂಡುಕೊಂಡಿದೆ. ಇನ್ನು ಮುಂದೆ ಮುಜರಾಯಿ ದೇವಾಲಯಗಳಲ್ಲಿ ರೀಲ್ಸ್ ಮಾಡುವವರು ಕಡ್ಡಾಯವಾಗಿ ಶುಲ್ಕ ಪಾವತಿ ಮಾಡಬೇಕು ಎಂಬ ಹೊಸ ನಿಯಮವನ್ನು ಜಾರಿಗೊಳಿಸಲಾಗಿದೆ.
ಸಿನಿಮಾ, ಧಾರವಾಹಿ, ಸಾಕ್ಷ್ಯಚಿತ್ರ ಹಾಗೂ ಸುದ್ದಿವಾಹಿನಿಗಳ ಚಿತ್ರೀಕರಣಕ್ಕೆ ಇನ್ನು ಮುಂದೆ ನಿಗದಿತ ಶುಲ್ಕ ಪಾವತಿಸಿ ಪೂರ್ವಾನುಮತಿ ಪಡೆಯಬೇಕು ಎಂದು ಮುಜರಾಯಿ ಇಲಾಖೆ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ಈ ಸಂಬಂಧ 2003 ಹಾಗೂ 2013ರಲ್ಲಿ ಜಾರಿಗೊಂಡಿದ್ದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ನಿರ್ದೇಶನ ನೀಡಲಾಗಿದೆ. ಇತ್ತೀಚಿನ ದಿನಗಳಲ್ಲಿ ದೇವಾಲಯಗಳಲ್ಲಿ ರೀಲ್ಸ್, ಯೂಟ್ಯೂಬ್ ಚಾನೆಲ್ಗಳ ಚಿತ್ರೀಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದೇವಾಲಯಗಳ ಪಾವಿತ್ರ್ಯತೆಗೆ ಧಕ್ಕೆಯಾಗುತ್ತಿದೆ ಎಂಬ ಆಕ್ಷೇಪಗಳು ಕೇಳಿಬಂದಿವೆ. ಹೀಗಾಗಿ ಮತ್ತೆ ಹಿಂದಿನ ನಿಯಮಗಳನ್ನು ಪುನಃ ಜಾರಿಗೆ ತರುವ ನಿರ್ಧಾರ ಕೈಗೊಳ್ಳಲಾಗಿದೆ.
ಈ ಹೊಸ ನಿಯಮದ ಬಗ್ಗೆ ಪ್ರತಿಕ್ರಿಯಿಸಿರುವ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು, ದೇವಾಲಯಗಳಲ್ಲಿ ಶಿಸ್ತಿನ ವಾತಾವರಣ ಕಾಪಾಡುವ ಉದ್ದೇಶದಿಂದ ಇಂತಹ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಈ ಹೊಸ ರೂಲ್, ರಾಜ್ಯದ ಎ, ಬಿ ಮತ್ತು ಸಿ ಗ್ರೇಡ್ ದೇವಸ್ಥಾನದಲ್ಲಿ ಚಿತ್ರಕರಣೆ ಮಾಡುವುದಕ್ಕೆ ಅನ್ವಯಿಸುತ್ತದೆ. ರಾಜ್ಯದಲ್ಲಿ 205 ಎ ಗ್ರೆಡ್, 193 ಬಿ ಗ್ರೇಡ್ ಹಾಗೂ 34,105 ಸಿ ಗ್ರೇಡ್ ದೇವಾಲಗಳು ಸೇರಿದಂತೆ ಒಟ್ಟು 34,563 ದೇವಾಲಯಗಳಿವೆ. ಈ ದೇಗುಲಗಳಲ್ಲಿ ಇನ್ನು ಮುಂದೆ ರೀಲ್ಸ್ ಮಾಡಬೇಕಾದರೆ, ಅಲ್ಲಿನ ಆಡಳಿತ ಮಂಡಳಿಗೆ ಪತ್ರ ಬರೆಯಬೇಕು, ಅನುಮತಿ ಸಿಕ್ಕನಂತರ ಶುಲ್ಕ ಪಾವತಿಸಿ ರೀಲ್ಸ್ ಮಾಡಬೇಕಾಗುತ್ತದೆ.
ನಗರದ ದೇವಸ್ಥಾನಗಳಲ್ಲಿ ಧಾರಾವಾಹಿ ಚಿತ್ರೀಕರಣಕ್ಕೆ 15 ಸಾವಿರ ರೂ, ಬೆಂಗಳೂರು ಹೊರತು ಪಡಿಸಿ ಉಳಿದ ಕಡೆಗಳ ದೇವಾಲಯಗಳಲ್ಲಿ ಚಿತ್ರೀಕರಣಕ್ಕೆ 10 ಸಾವಿರ ಪಾವತಿಸಬೇಕಾಗುತ್ತದೆ. ಸಾಕ್ಷ್ಯಚಿತ್ರ ಮಾಡಿದರೆ ದಿನಕ್ಕೆ 5 ಸಾವಿರ ರೂ. ಹಾಗೂ 5 ನಿಮಿಷಗಳ ರೀಲ್ಸ್ ಚಿತ್ರೀಕರಣಕ್ಕಾಗಿ 250 ರೂ. ಐದು ನಿಮಿಷಗಳ ನಂತರ ಗಂಟೆಗಳ ಆಧಾರದ ಮೇಲೆ ಶುಲ್ಕ ಪಾವತಿಸಬೇಕಾಗುತ್ತದೆ.
ನಂಜನಗೂಡು: ಆಳೆತ್ತರ ಬೆಳೆದು ನಿಂತಿದ್ದ ಕಬ್ಬಿನ ಬೆಳೆಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಪರಿಣಾಮ ಐದು ಎಕರೆಯಲ್ಲಿ ಬೆಳೆದಿದ್ದ ಕಬ್ಬು ಬೆಂಕಿಗಾಹುತಿಯಾಗಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿರುಗಾಳಿ ಸಹಿತ ಮಳೆಗೆ ಹಲವಾರು ರೈತರು ಬೆಳೆದಿದ್ದ 50ಕ್ಕೂ ಹೆಚ್ಚು…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ ಬುಧವಾರ ಸುರಿದ ಬಿರುಗಾಳಿ ಮಳೆಗೆ ಬಾಲೆ ಬೆಳೆ ನಾಶವಾಗಿರುವ ಘಟನೆ…
ಬೆಂಗಳೂರು: ಬೌರಿಂಗ್ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿಯಾಗಿದ್ದ ಪ್ರಕರಣದಲ್ಲಿ ಸಂಬಂಧಪಟ್ಟ ಎಂಜಿನಿಯರ್ ಅನ್ನು ಕೂಡಲೇ ಅಮಾನತು…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಭೇದಿಸಿ, ಇಬ್ಬರು…
ಬೆಂಗಳೂರು: ಅಧಿಕಾರ ಹಂಚಿಕೆಯ ಬಗ್ಗೆ ಯಾವುದೇ ಗೊಂದಲ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿನ ರಾಜಕೀಯ ಗೊಂದಲಗಳನ್ನು ಆದಷ್ಟು…