ರಾಜ್ಯ

ಖಾಸಗಿ ಶಾಲೆಗಳಿಂದ ಶುಲ್ಕ ಏರಿಕೆ: ಮಧ್ಯಮ ವರ್ಗದ ಪೋಷಕರಿಗೆ ಸಂಕಷ್ಟ

ಬೆಂಗಳೂರು: ಖಾಸಗಿ ಶಾಲೆಗಳು ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಸಾಲಿನ ಶುಲ್ಕವನ್ನು 5-10%, ಮತ್ತೆ ಕೆಲವು 10-15% ವರೆಗೆ ಏರಿಕೆ ಮಾಡಿವೆ. ಇದು ಈಗಾಗಲೇ ಆರ್ಥಿಕ ಒತ್ತಡದಲ್ಲಿರುವ ಮಧ್ಯಮ ವರ್ಗದ ಪೋಷಕರಿಗೆ ದೊಡ್ಡ ಹೊಡೆತವಾಗಿದೆ.

ಈಗಾಗಲೇ ಶಾಲಾ ಪ್ರವೇಶದ ವಯೋಮಿತಿ ನಿಯಮದ ಗೊಂದಲದಿಂದ ಸಂಕಷ್ಟದಲ್ಲಿರುವ ಪೋಷಕರಿಗೆ, ಇದೀಗ ಖಾಸಗಿ ಶಾಲೆಗಳು ಶುಲ್ಕ ಏರಿಕೆ ಮಾಡಿ ಮತ್ತಷ್ಟು ತಲೆನೋವು ತಂದಿವೆ. ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಶೈಕ್ಷಣಿಕ ವರ್ಷದ ದಾಖಲಾತಿ ಪ್ರಕ್ರಿಯೆಯನ್ನು ಕೆಲವು ಖಾಸಗಿ ಶಾಲೆಗಳು ಆರಂಭಿಸಿವೆ. ಇದೇ ಸಂದರ್ಭದಲ್ಲಿ ಹಲವು ಶಾಲೆಗಳು 5ರಿಂದ 15 ಶೇಕಡಾ ವರೆಗೆ ಶುಲ್ಕ ಹೆಚ್ಚಿಸಲು ಮುಂದಾಗಿವೆ ಎಂಬ ಆರೋಪ ಪೋಷಕರ ವಲಯದಲ್ಲಿ ಕೇಳಿಬರುತ್ತಿದೆ. ಇದರಿಂದ ಈಗಾಗಲೇ ಆರ್ಥಿಕ ಒತ್ತಡದಲ್ಲಿರುವ ಪೋಷಕರು ಆತಂಕ ವ್ಯಕ್ತಪಡಿಸಿದ್ದಾರೆ.

ಇನ್ನೊಂದೆಡೆ, ಈ ವರ್ಷ ಸರ್ಕಾರ ಶಾಲಾ ಪ್ರವೇಶಕ್ಕೆ ಕೇವಲ 60 ದಿನಗಳ ವಯೋಮಿತಿ ಸಡಿಲಿಕೆ ನೀಡಿರುವುದು ಕೂಡ ಪೋಷಕರಿಗೆ ಮತ್ತೊಂದು ಸಮಸ್ಯೆಯಾಗಿದೆ. ಕಳೆದ ವರ್ಷ ಇದ್ದಂತೆ 5.5 ವರ್ಷದ ವಯೋಮಿತಿಯನ್ನು ಮುಂದುವರಿಸಬೇಕು ಎಂದು ಹಲವರು ಒತ್ತಾಯಿಸುತ್ತಿದ್ದಾರೆ. ಇಲ್ಲವಾದರೆ ಮಕ್ಕಳನ್ನು ಮತ್ತೆ ಯುಕೆಜಿ ತರಗತಿಯನ್ನು ಪುನರಾವರ್ತನೆ ಮಾಡಿಸಬೇಕಾಗಿ ಬರುತ್ತದೆ. ಇದರಿಂದ ಲಕ್ಷಾಂತರ ರೂಪಾಯಿ ಶುಲ್ಕವನ್ನು ಮತ್ತೊಮ್ಮೆ ಕಟ್ಟಬೇಕಾದ ಪರಿಸ್ಥಿತಿ ಎದುರಾಗುತ್ತದೆ ಎಂದು ಪೋಷಕರು ಹೇಳುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ನೇಪಾಳ ದುರಂತ | ಮೃತದೇಹದ ಮೇಲಿದ್ದ ಚಿನ್ನ ಕಳವು ; ಇಬ್ಬರು ಆರೋಪಿಗಳ ಬಂಧನ

ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…

5 mins ago

ಸೋನಿಯಾ ಗಾಂಧಿ ಆತ್ಮಚರಿತ್ರೆ ; ರಾಜಕೀಯ, ಸಾಹಿತ್ಯಿಕ ವಲಯದಲ್ಲಿ ಕೋಲಾಹಲ

ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…

33 mins ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಈ ಬಾರಿ ಮೆರವಣಿಗೆಗೆ ಸೇನೆಗೆ ಆಹ್ವಾನ ಎಂದ ಸಿಎಂ ಡಿಕೆಶಿ

ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್‌…

5 hours ago

ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…

8 hours ago

ರಾಜ್ಯದ 101 ತಾಲ್ಲೂಕುಗಳು ಬರ ತಾಲ್ಲೂಕುಗಳೆಂದು ಘೋಷಣೆ: ಡಿಸಿಎಂ ಜಿ.ಪರಮೇಶ್ವರ್‌

ಮೈಸೂರು: ರೈತರಿಗೆ ಬರ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಪರಮೇಶ್ವರ್‌, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ…

8 hours ago

ಓದುಗರ ಪತ್ರ: ಉಳುವ ‘ಯೋಗಿ’ ಕೂಗಿಗೆ ಸರ್ಕಾರ ತರ್ತಾಗಿ ಸ್ಪಂದಿಸಲಿ

ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…

9 hours ago