ರಾಜ್ಯ

ಖಾಸಗಿ ಶಾಲೆಗಳಿಂದ ಶುಲ್ಕ ಏರಿಕೆ: ಮಧ್ಯಮ ವರ್ಗದ ಪೋಷಕರಿಗೆ ಸಂಕಷ್ಟ

ಬೆಂಗಳೂರು: ಖಾಸಗಿ ಶಾಲೆಗಳು ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಸಾಲಿನ ಶುಲ್ಕವನ್ನು 5-10%, ಮತ್ತೆ ಕೆಲವು 10-15% ವರೆಗೆ ಏರಿಕೆ ಮಾಡಿವೆ. ಇದು ಈಗಾಗಲೇ ಆರ್ಥಿಕ ಒತ್ತಡದಲ್ಲಿರುವ ಮಧ್ಯಮ ವರ್ಗದ ಪೋಷಕರಿಗೆ ದೊಡ್ಡ ಹೊಡೆತವಾಗಿದೆ.

ಈಗಾಗಲೇ ಶಾಲಾ ಪ್ರವೇಶದ ವಯೋಮಿತಿ ನಿಯಮದ ಗೊಂದಲದಿಂದ ಸಂಕಷ್ಟದಲ್ಲಿರುವ ಪೋಷಕರಿಗೆ, ಇದೀಗ ಖಾಸಗಿ ಶಾಲೆಗಳು ಶುಲ್ಕ ಏರಿಕೆ ಮಾಡಿ ಮತ್ತಷ್ಟು ತಲೆನೋವು ತಂದಿವೆ. ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಶೈಕ್ಷಣಿಕ ವರ್ಷದ ದಾಖಲಾತಿ ಪ್ರಕ್ರಿಯೆಯನ್ನು ಕೆಲವು ಖಾಸಗಿ ಶಾಲೆಗಳು ಆರಂಭಿಸಿವೆ. ಇದೇ ಸಂದರ್ಭದಲ್ಲಿ ಹಲವು ಶಾಲೆಗಳು 5ರಿಂದ 15 ಶೇಕಡಾ ವರೆಗೆ ಶುಲ್ಕ ಹೆಚ್ಚಿಸಲು ಮುಂದಾಗಿವೆ ಎಂಬ ಆರೋಪ ಪೋಷಕರ ವಲಯದಲ್ಲಿ ಕೇಳಿಬರುತ್ತಿದೆ. ಇದರಿಂದ ಈಗಾಗಲೇ ಆರ್ಥಿಕ ಒತ್ತಡದಲ್ಲಿರುವ ಪೋಷಕರು ಆತಂಕ ವ್ಯಕ್ತಪಡಿಸಿದ್ದಾರೆ.

ಇನ್ನೊಂದೆಡೆ, ಈ ವರ್ಷ ಸರ್ಕಾರ ಶಾಲಾ ಪ್ರವೇಶಕ್ಕೆ ಕೇವಲ 60 ದಿನಗಳ ವಯೋಮಿತಿ ಸಡಿಲಿಕೆ ನೀಡಿರುವುದು ಕೂಡ ಪೋಷಕರಿಗೆ ಮತ್ತೊಂದು ಸಮಸ್ಯೆಯಾಗಿದೆ. ಕಳೆದ ವರ್ಷ ಇದ್ದಂತೆ 5.5 ವರ್ಷದ ವಯೋಮಿತಿಯನ್ನು ಮುಂದುವರಿಸಬೇಕು ಎಂದು ಹಲವರು ಒತ್ತಾಯಿಸುತ್ತಿದ್ದಾರೆ. ಇಲ್ಲವಾದರೆ ಮಕ್ಕಳನ್ನು ಮತ್ತೆ ಯುಕೆಜಿ ತರಗತಿಯನ್ನು ಪುನರಾವರ್ತನೆ ಮಾಡಿಸಬೇಕಾಗಿ ಬರುತ್ತದೆ. ಇದರಿಂದ ಲಕ್ಷಾಂತರ ರೂಪಾಯಿ ಶುಲ್ಕವನ್ನು ಮತ್ತೊಮ್ಮೆ ಕಟ್ಟಬೇಕಾದ ಪರಿಸ್ಥಿತಿ ಎದುರಾಗುತ್ತದೆ ಎಂದು ಪೋಷಕರು ಹೇಳುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ರೈತರ ನಿದ್ದೆಗೆಡಿಸಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಕಿಕ್ಕೇರಿ: ಹೋಬಳಿಯ ಗೊಲ್ಲರಕೊಪ್ಪಲು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆದ ಹಲವು ದಿನಗಳಿಂದ ರೈತರಿಗೆ ಆತಂಕ ಸೃಷ್ಟಿಸಿ ಜಾನುವಾರುಗಳು ಹಾಗೂ ಸಾಕು…

3 hours ago

ಶಿವಶಂಕರಪ್ಪ ಸಾಹುಕಾರ್‌ಗೆ ಹೊಸ ಕಾನೂನು ಸಂಕಷ್ಟ

ಬೆಂಗಳೂರು: ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಹುದ್ದೆಯಿಂದ ಅಮಾನತುಗೊಳಿಸಿದ ಬೆನ್ನಲ್ಲೇ ಈ ಹೊಸ ಕಾನೂನು ಸಂಕಷ್ಟ ಎದುರಾಗಿದೆ.…

6 hours ago

ಗೋಪಾಲಸ್ವಾಮಿ ಬೆಟ್ಟ: ಕೊನೆಗೂ ಭಕ್ತರಿಗೆ ಸಿಕ್ಕಿತು ನೆರಳು!

ಬೆಟ್ಟದಲ್ಲಿ ಬಸ್ ನಿಲ್ದಾಣದ ಉದ್ಘಾಟನೆ ನೆರವೇರಿಸಿದ ಶಾಸಕ; ಸಮಸ್ಯೆ ಕುರಿತು ಬೆಳಕು ಚೆಲ್ಲಿದ್ದ ‘ಆಂದೋಲನ’ ಗುಂಡ್ಲುಪೇಟೆ: ತಾಲ್ಲೂಕಿನ ಹಿಮವದ್ ಗೋಪಾಲಸ್ವಾಮಿ…

10 hours ago

ಓದುಗರ ಪತ್ರ: ಅಧ್ಯಾತ್ಮ ದುರಂತ!

ಅಧ್ಯಾತ್ಮ ದುರಂತ! ಲೌಕಿಕ ಬದುಕಿನ ಆಶೆ ಆಮಿಷಗಳ ಸೆರೆಮನೆಯಿಂದ ಬಿಡಿಸಿಕೊಳುವ ಸನ್ಮಾರ್ಗವನು ಅಧ್ಯಾತ್ಮವೆನ್ನುವರು ಪ್ರಾಜ್ಞರು! ಆದರೀಗ ಲೌಕಿಕದ ಆಶೆ ಆಮಿಷಗಳ…

13 hours ago

ಓದುಗರ ಪತ್ರ: ರಸ್ತೆ, ಉದ್ಯಾನಕ್ಕೆ ಎಸ್. ಜಾನಕಿ ಅವರ ಹೆಸರಿಡಿ

ಭಾರತೀಯ ಚಿತ್ರರಂಗದ ಗಾನಕೋಗಿಲೆ ಎಸ್.ಜಾನಕಿ ಅವರ ಸಾಧನೆ ಎಂದೆಂದಿಗೂ ಅಜರಾಮರ. ಅವರ ಹೆಸರನ್ನು ಮುಂದಿನ ಪೀಳಿಗೆಗೂ ಪರಿಚಯಿಸುವ ಮೂಲಕ ಚಿರಸ್ಥಾಯಿಯಾಗಿಸಲು…

13 hours ago

ಓದುಗರ ಪತ್ರ: ಚಾಮರಾಜಪುರಂನಲ್ಲಿ ರೈಲುಗಳ ನಿಲುಗಡೆಯಾಗಲಿ

ಮೈಸೂರಿನ ಅಶೋಕಪುರಂನಿಂದ ಚೆನ್ನೆ ಗೆ ತೆರಳುವ ಚೆನ್ನೆ ನಿಂದ - ಅಶೋಕಪುರಂಗೆ ಆಗಮಿಸುವ ೧೬೫೫೧ ಎಂಜಿಆರ್ ಚೆನ್ನೈಎಕ್ಸ್ ಪ್ರೆಸ್, ೨೦೬೨೪…

13 hours ago