ಹಾವೇರಿ: ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಬಳಿ ಶುಕ್ರವಾರ ಮುಂಜಾನೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ರಾಜ್ಯ ಅಂಧರ ಫುಟ್ಬಾಲ್ ತಂಡದ ಆಟಗಾರ್ತಿ ಎ.ಎಸ್ ಮಾನಸ ಅವರು ಮೃತರಾಗಿದ್ದಾರೆ.
ಎಮ್ಮೆಹಟ್ಟಿಯ ಶರಣಪ್ಪ ಹಾಗೂ ಭಾಗ್ಯ ದಂಪತಿಯ ಪುತ್ರಿ ಮಾನಸ ಆಗಿದ್ದಾರೆ. ಈ ಅಪಘಾತದಲ್ಲಿ ಮಾನಸ ಜೊತೆ ಅವರ ತಾಯಿ ಭಾಗ್ಯ ಕೂಡಾ ಸಾವಿಗೀಡಾಗಿದ್ದಾರೆ.
ಐಎಎಸ್ ಆಕಾಂಕ್ಷಿಯಾಗಿದ್ದ ಮಾನಸ ಬಿಎಸ್ಸಿ ಪದವಿ ಮುಗಿಸಿ ಸ್ಪರ್ಧಾತ್ಮಕ ಪರೀಕ್ಷೆಗಾಗಿ ಬೆಂಗಳೂರಿನಲ್ಲಿ ಇದ್ದುಕೊಂಡು ತರಬೇತಿ ಪಡೆಯುತ್ತಿದ್ದರು.
ರಾಜ್ಯ ಫುಟ್ಬಾಲ್ ತಂಡದ ನಾಯಕಿಯಾಗಿದ್ದ ಮಾನಸ ಅವರು, ಕೊಲ್ಕತ್ತಾದಲ್ಲಿ ನಡೆದಿದ್ದ ರಾಷ್ಟ್ರಮಟ್ಟದ ಫುಟ್ಬಾಲ್ ಟೂರ್ನಿಯಲ್ಲಿ ರಾಜ್ಯವನ್ನು ಪ್ರತಿನಿಧಿಸಿದ್ದರು. 2022ರಲ್ಲಿ ಕೇರಳದ ಕೊಚ್ಚಿಯಲ್ಲಿ ಜಪಾನ್ ವಿರುದ್ಧ ನಡೆದ ಪಂದ್ಯದಲ್ಲಿ ಭಾರತ ತಂಡದ ಪರವಾಗಿಯೂ ಮಾನಸ ಆಡಿದ್ದರು.
ಕೃಷ್ಣ ಸಿದ್ದಾಪುರ ಅಣಬೆ ಕೃಷಿ ಗೃಹಿಣಿಯರಿಗೆ ಆದಾಯ ತರುವ ಉದ್ಯಮ ಸಿದ್ದಾಪುರ: ಕೊಡಗು ಜಿಲ್ಲೆಯಲ್ಲಿ ಅಣಬೆ ಕೃಷಿಗೆ ವಿಪುಲ ಅವಕಾಶಗಳಿದ್ದು,…
ʼರಾಮು ಅವರ ‘ಮಹಾಭಾರತದೊಳಗಿಂದ ಒಂದಿಷ್ಟು’ ಕೃತಿ ಬಿಡುಗಡೆ ಮಾಡಿದ ಚ.ಹ.ರಘುನಾಥ ಅಭಿಮತ ಮೈಸೂರು: ಸಾವಿರಾರು ವರ್ಷಗಳ ಹಿಂದಿನ ಮಹಾಭಾರತವನ್ನು ಸಮಕಾಲೀನ…
ಓ.ಎಲ್.ನಾಗಭೂಷಣ ಸ್ವಾಮಿ ‘ಹಾಡು-ಪಾಡು ರಾಮು’ ಅಂತಲೇ ಪರಿಚಯವಾಗಿರುವ ರಾಮು ನೆನಪು ಮಾತ್ರವಾಗಿ ಉಳಿದು ಇವತ್ತಿಗೆ ಮೂರು ವರ್ಷ. ರಾಮು ಮಹಾ…
ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್ಟಿಸಿ ಬಸ್…