ಬೆಂಗಳೂರು : ಕಲೆಕ್ಷನ್ನಲ್ಲೂ ಸಿಎಂ, ಡಿಸಿಎಂ ನಡುವೆ ಸ್ಪರ್ಧೆ ಏರ್ಪಟ್ಟಿದೆ. ಸಿಎಂ ತಮ್ಮ ಕುರ್ಚಿ ಉಳಿಸಿಕೊಳ್ಳಲು ಡಿಸಿಎಂಗಿಂತ ಹೆಚ್ಚು ಕಲೆಕ್ಷನ್ಗೆ ಇಳಿದಿದ್ದಾರೆ. ಸಿಎಂ ಕುರ್ಚಿ ಎಳೆದುಕೊಳ್ಳಲು ಹೆಚ್ಚು ಹಣ ಸಂಗ್ರಹಕ್ಕೆ ಮುಂದಾಗಿದ್ದಾರೆ. ದೆಹಲಿ ಕಲೆಕ್ಷನ್ ಕೇಂದ್ರ ಬಿಂದು. ರಾಹುಲ್ ಗಾಂಧಿ ಇದರ ಪೂರ್ಣ ಜವಾಬ್ದಾರಿ ಹೊತ್ತಿದ್ದಾರೆ ಎಂದು ಕೇಂದ್ರದ ಮಾಜಿ ಸಚಿವ ಡಿ.ವಿ. ಸದಾನಂದಗೌಡ ಆರೋಪಿಸಿದ್ದಾರೆ.
ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿಂದು ‘ಎಟಿಎಂ ಸrfkArd ಕಲೆಕ್ಷನ್ ಟ್ರೀ’ ಸಂಬಂಧ ಪೋಸ್ಟರ್ ಬಿಡುಗಡೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಲೆಕ್ಷನ್ ಸರಕಾರವಿದೆ. ಅದನ್ನು ಸಾಮಾನ್ಯ ಜನರೂ ತಿಳಿದುಕೊಂಡು ಅದನ್ನು ಅನುಭವಿಸುವಂತಾಗಿದೆ. ಅಭಿವೃದ್ಧಿ ಇಲ್ಲದೆ, ರಸ್ತೆಯ ಹೊಂಡ ಗುಂಡಿಗಳನ್ನೂ ತುಂಬಿಸಲಾಗದ ದುಸ್ಥಿತಿ ರಾಜ್ಯದ್ದು ಎಂದು ಟೀಕಿಸಿದರು.
ರಾಷ್ಟ್ರೀಯ ಕಾಂಗ್ರೆಸ್ಸಿನ ಕಲೆಕ್ಷನ್ ನೇತೃತ್ವವನ್ನು ಸುರ್ಜೇವಾಲಾ, ವೇಣುಗೋಪಾಲ್ ವಹಿಸಿದ್ದಾರೆ. ಲೂಟಿ ಹೊಡೆಯುವ ಕಾರ್ಯಯೋಜನೆ ಅಚ್ಚರಿ ತರುವಂತಿದೆ. ಸಿದ್ದರಾಮಯ್ಯರ ಹಣ ಸಂಗ್ರಹ ಅವರ ಮಗ ಯತೀಂದ್ರ ಮತ್ತು ಸ್ವಜಾತಿಯ ಬೈರತಿ ಸುರೇಶ್ ಮೂಲಕ ನಡೆಯುತ್ತದೆ ಎಂದು ವಿವರಿಸಿದರು.
ಗುತ್ತಿಗೆದಾರರಲ್ಲೂ 2 ಗುಂಪುಗಳಾಗಿವೆ. ಕೆಂಪಣ್ಣ, ಸಿದ್ದರಾಮಯ್ಯರ ಗುಂಪು. ಇನ್ನೊಂದೆಡೆ ತಂಡ ದೊಡ್ಡದಿದೆ. ಉಪಾಧ್ಯಕ್ಷ ಅಂಬಿಕಾಪತಿ ನೇತೃತ್ವದ ತಂಡವಿದು. ಅವರ ಮನೆಯಲ್ಲೇ ಹಣ ಸಿಕ್ಕಿದೆ. ಪ್ರದೀಪ್, ಪ್ರಹ್ಲಾದ್, ಪ್ರಮೋದ್ ನೇತೃತ್ವದಲ್ಲಿ ಹಣ ಸಂಗ್ರಹ ನಡೆದಿದೆ. ಇವೆಲ್ಲವೂ ರಾಹುಲ್ ಗಾಂಧಿಯವರಿಗೆ ಹೋಗುತ್ತದೆ ಎಂದು ಆರೋಪಿಸಿದರು.
ಐಟಿ ಇಲಾಖೆಯಿಂದ ಮಾತ್ರ ಇದರ ತನಿಖೆ ನಡೆದರೆ ಸಾಲದು. ಇದರ ಬೇರು ಆಳವಾಗಿದೆ. ಕ್ರಿಮಿನಲ್ ಉದ್ದೇಶವನ್ನು ಹೊರಕ್ಕೆ ತರಲು ಸಿಬಿಐ ತನಿಖೆ ಅನಿವಾರ್ಯ. ಇದು ಖಜಾನೆ ಲೂಟಿಯ ವ್ಯವಸ್ಥೆಯಾಗಿದ್ದು, ಇದನ್ನು ಸಿದ್ದರಾಮಯ್ಯನವರು ಸಿಬಿಐ ತನಿಖೆಗೆ ಕೊಡಬೇಕು ಎಂದು ಆಗ್ರಹಿಸಿದರು.
ಬಿಲ್ ಕೊಡದೆ ಹಾವೇರಿ ಮತ್ತಿತರ ಕಡೆ ಇಂದಿರಾ ಕ್ಯಾಂಟೀನ್ ಬಂದ್ ಆಗಿದೆ. ಹಣ ಪಾವತಿ ಇಲ್ಲ; ಕಮಿಷನ್ ಕೇಳುತ್ತಾರೆಂದು ಆರೋಪ ಕೇಳಿಸಿದೆ. ಕಲಾವಿದರ ಕೈಯಲ್ಲಿ ಕಮಿಷನ್ ಕೇಳುವುದಕ್ಕಿಂತ ಕೆಟ್ಟ ಕೆಲಸ ಇನ್ನೇನಿದೆ ಎಂದು ಪ್ರಶ್ನಿಸಿದರು. ಐಟಿ ರೇಡ್ ಆದೊಡನೆ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಬೆಂಗಳೂರಿಗೆ ಓಡಿ ಬರುವ ದಯನೀಯ ಪರಿಸ್ಥಿತಿ ಯಾಕೆ ಬಂತು ಎಂದು ಅವರು ಪ್ರಶ್ನಿಸಿದರು.
ಎಲ್ಲ ಇಲಾಖೆಗಳಲ್ಲಿ ಕಿಂಗ್ಪಿನ್ ನೇಮಕ ಆಗಿದೆ. ಅಪಘಾತಗಳು ಹೆಚ್ಚಾಗಿವೆ. ಅಭಿವೃದ್ಧಿ ಕೆಲಸಗಳು ಆರಂಭವಾಗಬೇಕಿದೆ. ಹೈಕೋರ್ಟ್ ಆದೇಶದ ಬಳಿಕ ಡಿಸಿಎಂಗೆ ಆ ಸ್ಥಾನಕ್ಕೆ ರಾಜೀನಾಮೆ ಕೊಡಬೇಕಿತ್ತು. ಸಿಎಂ ಮತ್ತು ಎಐಸಿಸಿ ವರಿಷ್ಠರು ಅವರನ್ನು ಆ ಸ್ಥಾನದಿಂದ ಕೆಳಕ್ಕಿಳಿಸಿ ಸಮರ್ಪಕ ತನಿಖೆಗೆ ಅವಕಾಶ ಮಾಡಿಕೊಡಲಿ ಎಂದು ಅವರು ಒತ್ತಾಯಿಸಿದರು.
ರಾಜ್ಯದ ಎಲ್ಲ ಕಡೆ ಭ್ರಷ್ಟಾಚಾರ ಪರಿಚಯಿಸುವ ಪೋಸ್ಟರ್ ಅಂಟಿಸುವ ಕಾರ್ಯ ನಡೆಯಲಿದೆ. ಇದು ಸಿನಿಮಾ ಪ್ರಾರಂಭದ ಟ್ರೈಲರ್ ಅಷ್ಟೇ ಎಂದು ಸದಾನಂದಗೌಡ ತಿಳಿಸಿದರು. ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್, ಶಾಸಕ ರವಿ ಸುಬ್ರಹ್ಮಣ್ಯ, ಎಸ್ಸಿ ಮೋರ್ಚಾ ರಾಜ್ಯ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಉಪಸ್ಥಿತರಿದ್ದರು.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…