ಬೆಂಗಳೂರು: ದಕ್ಷಿಣ ಭಾರತದಲ್ಲಿ ಮುಂಗಾರು ಅಬ್ಬರು ಜೋರಾಗಿದ್ದು, ಕರ್ನಾಟಕ, ಗೋವಾ, ಮಹಾರಾಷ್ಟ್ರ, ಕೇರಳ ಸೇರಿದಂತೆ ಬಹುತೇಕ ರಾಜ್ಯಗಳಲ್ಲಿ ವರುಣನ ಆರ್ಭಟ ಜೋರಾಗಿದೆ.
ರಾಜ್ಯದ ಹಲವು ನದಿಗಳು ಬಹುತೇಕ ತುಂಬಿ ಹರಿಯುತ್ತಿದ್ದು, ಅಪಾಯಮಟ್ಟಿ ಮೀರಿ ಹರಿಯುತ್ತಿದೆ. ಇನ್ನು ಮಹಾರಾಷ್ಟ್ರ, ಗೋವಾ ಕರ್ನಾಟಕ ಗಡಿ ಭಾಗದಲ್ಲಿನ ಹಲವು ಜಲಪಾತಗಳು ತುಂಬಿ ಹರಿಯುತ್ತಿವೆ.
ಕರ್ನಾಟಕ ಗೋವಾ ಗಡಿಗಳಲ್ಲಿ ಹೆಚ್ಚಿನ ಝರಿ, ಜಲಪಾತಗಳು ಕಂಡುಬರುತ್ತವೆ. ಮತ್ತು ಮುಂಗಾರಿನಲ್ಲಿ ಈ ಜಲಪಾತಗಳು ಮೈದುಂಬಿ ಹರಿಯುವ ರಮಣೀಯ ದೃಶ್ಯವನ್ನು ನೋಡಲು ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಚಾರಣಕ್ಕೆ ತೆರಳುತ್ತಾರೆ. ಇದೇ ರೀತಿಯಲ್ಲಿ ಗೋವಾ, ಕರ್ನಾಟಕ ಗಡಿಯಲ್ಲಿರುವ ಪಾಲಿ ಜಲಪಾತ ಹುಕ್ಕಿ ಹರಿಯುತ್ತಿದ್ದು, ಪ್ರವಾಹದ ಸ್ಥಿತಿ ಉಂಟಾಗಿದೆ.
ಇನ್ನು ವೀಕೆಂಡ್ನಲ್ಲಿ ಮೋಜು ಮಸ್ತಿಗಾಗಿ ಚಾರಣಕ್ಕೆ ತೆರಳುವವರ ಸಂಖ್ಯೆ ಹೆಚ್ಚಾಗಿದೆ. ಇದರ ಬೆನ್ನಲ್ಲೇ ಪಾಲಿ ಜಲಪಾತ ವೀಕ್ಷಣೆಗಾಗಿ ರಾಜ್ಯದಿಂದ ಕನಿಷ್ಠ 50 ಮಂದಿ ತೆರಳಿದ್ದು, ಪ್ರವಾಹದಲ್ಲಿ ಸಿಲುಕಿದ್ದಾರೆ. ಇದರ ಜೊತೆಗೆ ಮಹಾರಾಷ್ಟ್ರ ಹಾಗೂ ಗೋವಾ ಸೇರಿದಂತೆ 150ಕ್ಕೂ ಹೆಚ್ಚುಮಂದಿ ಪ್ರವಾಹಲ್ಲಿ ಸಿಲುಕಿದ್ದು, ಅರಣ್ಯ ಇಲಾಖೆ ,ಅಗ್ನಿಶಾಮಕ ಸಿಬ್ಬಂದಿ ಈ ಎಲ್ಲಾ ಪ್ರವಾಸಿಗರನ್ನು ರಕ್ಷಿಸುವಲ್ಲಿ ಸಫಲರಾಗಿದ್ದಾರೆ. ಕರ್ನಾಟಕದಿಂದ ಚಾರಣಕ್ಕೆ ತೆರಳಿದ್ದ 50 ಮಂದಿ ಸುರಕ್ಷಿತವಾಗಿ ವಾಪಸಾಗಿದ್ದಾರೆ.
ಮೈಸೂರು: ಮೈಸೂರು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್ಸಿ ನ್ಯಾಯಾಲಯದಲ್ಲಿ ವಿಚಾರಣೆ (ಜಯರಾಮು ಆರ್ ವಿರುದ್ಧ ಕರ್ನಾಟಕ ರಾಜ್ಯ) ಪ್ರಕರಣದಲ್ಲಿ…
ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಪ್ರವಾಸಿಗರ ಮನಗೆದ್ದಿದ್ದ ಹೆಮ್ಮೆಯ ಹುಲಿ…
ಬೆಂಗಳೂರು: 42ನೇ ಎಸಿಜೆಎಂ ನ್ಯಾಯಾಲಯ ಅರೆಸ್ಟ್ ವಾರೆಂಟ್ ಜಾರಿಯ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.…
ಮಡಿಕೇರಿ: ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೈಸೂರು ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಿರತೆ ದಾಳಿ ನಡೆಸಿದ ಪರಿಣಾಮ ಹಸು ತೀವ್ರವಾಗಿ ಗಾಯಗೊಂಡಿರುವ ಘಟನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಹಾವಿನಮೂಲೆ…