ಬೆಂಗಳೂರು: ದಕ್ಷಿಣ ಭಾರತದಲ್ಲಿ ಮುಂಗಾರು ಅಬ್ಬರು ಜೋರಾಗಿದ್ದು, ಕರ್ನಾಟಕ, ಗೋವಾ, ಮಹಾರಾಷ್ಟ್ರ, ಕೇರಳ ಸೇರಿದಂತೆ ಬಹುತೇಕ ರಾಜ್ಯಗಳಲ್ಲಿ ವರುಣನ ಆರ್ಭಟ ಜೋರಾಗಿದೆ.
ರಾಜ್ಯದ ಹಲವು ನದಿಗಳು ಬಹುತೇಕ ತುಂಬಿ ಹರಿಯುತ್ತಿದ್ದು, ಅಪಾಯಮಟ್ಟಿ ಮೀರಿ ಹರಿಯುತ್ತಿದೆ. ಇನ್ನು ಮಹಾರಾಷ್ಟ್ರ, ಗೋವಾ ಕರ್ನಾಟಕ ಗಡಿ ಭಾಗದಲ್ಲಿನ ಹಲವು ಜಲಪಾತಗಳು ತುಂಬಿ ಹರಿಯುತ್ತಿವೆ.
ಕರ್ನಾಟಕ ಗೋವಾ ಗಡಿಗಳಲ್ಲಿ ಹೆಚ್ಚಿನ ಝರಿ, ಜಲಪಾತಗಳು ಕಂಡುಬರುತ್ತವೆ. ಮತ್ತು ಮುಂಗಾರಿನಲ್ಲಿ ಈ ಜಲಪಾತಗಳು ಮೈದುಂಬಿ ಹರಿಯುವ ರಮಣೀಯ ದೃಶ್ಯವನ್ನು ನೋಡಲು ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಚಾರಣಕ್ಕೆ ತೆರಳುತ್ತಾರೆ. ಇದೇ ರೀತಿಯಲ್ಲಿ ಗೋವಾ, ಕರ್ನಾಟಕ ಗಡಿಯಲ್ಲಿರುವ ಪಾಲಿ ಜಲಪಾತ ಹುಕ್ಕಿ ಹರಿಯುತ್ತಿದ್ದು, ಪ್ರವಾಹದ ಸ್ಥಿತಿ ಉಂಟಾಗಿದೆ.
ಇನ್ನು ವೀಕೆಂಡ್ನಲ್ಲಿ ಮೋಜು ಮಸ್ತಿಗಾಗಿ ಚಾರಣಕ್ಕೆ ತೆರಳುವವರ ಸಂಖ್ಯೆ ಹೆಚ್ಚಾಗಿದೆ. ಇದರ ಬೆನ್ನಲ್ಲೇ ಪಾಲಿ ಜಲಪಾತ ವೀಕ್ಷಣೆಗಾಗಿ ರಾಜ್ಯದಿಂದ ಕನಿಷ್ಠ 50 ಮಂದಿ ತೆರಳಿದ್ದು, ಪ್ರವಾಹದಲ್ಲಿ ಸಿಲುಕಿದ್ದಾರೆ. ಇದರ ಜೊತೆಗೆ ಮಹಾರಾಷ್ಟ್ರ ಹಾಗೂ ಗೋವಾ ಸೇರಿದಂತೆ 150ಕ್ಕೂ ಹೆಚ್ಚುಮಂದಿ ಪ್ರವಾಹಲ್ಲಿ ಸಿಲುಕಿದ್ದು, ಅರಣ್ಯ ಇಲಾಖೆ ,ಅಗ್ನಿಶಾಮಕ ಸಿಬ್ಬಂದಿ ಈ ಎಲ್ಲಾ ಪ್ರವಾಸಿಗರನ್ನು ರಕ್ಷಿಸುವಲ್ಲಿ ಸಫಲರಾಗಿದ್ದಾರೆ. ಕರ್ನಾಟಕದಿಂದ ಚಾರಣಕ್ಕೆ ತೆರಳಿದ್ದ 50 ಮಂದಿ ಸುರಕ್ಷಿತವಾಗಿ ವಾಪಸಾಗಿದ್ದಾರೆ.
ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…
ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…
ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…
ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…
ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…
ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್ಎಸ್ಎಲ್ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…