ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದೆ. ಮತ್ತೊಂದೆಡೆ ಡೆಂಗ್ಯೂಯಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ. ಹೀಗಾಗಲೇ ಜಿಲ್ಲೆಯಾದ್ಯಂತ ಡೆಂಗ್ಯೂ ನಿಯಂತ್ರಣಕ್ಕೆ ತರಲು ಅಗತ್ಯ ಕ್ರಮಗಳನ್ನ ಕೈಗೊಳ್ಳಲಾಗುತ್ತಿದ್ದರು ಕೂಡ ಪ್ರಕರಣ ಸಂಖ್ಯೆ ಏರಿಕೆಯಾಗುತ್ತಲೆ ಇದೆ.
ಬಿಬಿಎಂಪಿ ಕೂಡ ಬೆಂಗಳೂರಿನಲ್ಲಿ ಏರಿಕೆಯಾಗುತ್ತಿರುವ ಡೆಂಗ್ಯೂ ನಿಯಂತ್ರಣಕ್ಕೆ ಸಾಕಷ್ಟು ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ. ಇದೀಗ ಡೆಂಗ್ಯೂ ನಿಯಂತ್ರಣಕ್ಕೆ ದಂಡಪ್ರಯೋಗವನ್ನು ಸಹ ಕೈಗೊಳ್ಳುತ್ತಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ನಿವೇಶನ , ಜಾಗ ಅಥವಾ ಸ್ವತ್ತುಗಳಲ್ಲಿ ಸೊಳ್ಳೆ ಉತ್ಪತ್ತಿ ಕಂಡು ಬಂದಲ್ಲಿ ಸ್ವಚ್ಛತೆ ಕಾಪಾಡುವಂತೆ ಸೂಚನೆ ನೀಡಲಾಗುತ್ತಿದೆ. ಒಂದು ವೇಳೆ ಅದಕ್ಕೆ ಸ್ಪಂದಿಸದಿದ್ದಲ್ಲಿ ಮತ್ತು ಸ್ವಚ್ಛತೆ ಕಾಪಾಡದೆ ಇದ್ದಲ್ಲಿ ೫೦ ರೂ ದಂಡ ವಿಧಿಸಲು ಸೂಚಿಸಿದೆ. ಮೊದಲು ಮನೆ ಮನೆಗೂ ಹೋಗಿ ಸ್ವಚ್ಛತೆ ಬಗ್ಗೆ ಅರಿವು ಮೂಡಿಸಲಾಗುತ್ತದೆ. ಆದಾದ ನಂತರು ಜನರು ಸ್ವಚ್ಛತೆ ಕಾಪಾಡದೇ ಇದ್ದಲ್ಲಿ ೫೦ ರೂ ದಂಡ ವಿಧಿಸಲಾಗುತ್ತಿದೆ. ಬಳಿಕ ಆ ಜಾಗ ಸ್ವಚ್ಛವಾಗುವವರೆಗೂ ದಿನಕ್ಕೆ ೧೫ ರೂ ದಂಡ ವಿಧಿಸಲು ತೀರ್ಮಾನಿಸಲಾಗಿದೆ.
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಭಾರತದಲ್ಲಿ ಅತಿ ಹೆಚ್ಚು ಕಾಲ ಸರ್ಕಾರದ ಮುಖ್ಯಸ್ಥರಾದ ದಾಖಲೆ ಬರೆದಿದ್ದಾರೆ. ಈ ಮೂಲಕ ಸಿಕ್ಕಿಂನ…
ತುಮಕೂರು: ಏಪ್ರಿಲ್.1ರಂದು ತುಮಕೂರಿನ ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭೇಟಿ ನೀಡಲಿದ್ದಾರೆ. ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು…
ಬೆಂಗಳೂರು: ಏಪ್ರಿಲ್.9ರಂದು ನಡೆಯಲಿರುವ ದಾವಣಗೆರೆ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಲಾಗಿದೆ. ಬಾಗಲಕೋಟೆ…
ಬೆಂಗಳೂರು: ಅಮೇರಿಕಾದಲ್ಲಿರುವ ಕನ್ನಡಿಗರ ಅತಿ ದೊಡ್ಡ ಸಾಂಸ್ಕೃತಿಕ ಸಂಭ್ರಮವಾಗಿರುವ ಅಕ್ಕ ವಿಶ್ವ ಕನ್ನಡ ಸಮ್ಮೇಳನ ರಾಯಭಾರಿಯಾಗಿ ನಟ ರಿಷಬ್ ಶೆಟ್ಟಿ…
ವಾಷಿಂಗ್ಟನ್: ಹಾರ್ಮುಜ್ ಜಲಸಂಧಿಯನ್ನು 48 ಗಂಟೆಯೊಳಗೆ ಸಂಪೂರ್ಣ ಓಪನ್ ಮಾಡಬೇಕು ಎಂದು ಇರಾನ್ಗೆ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗಡುವು…
ಮೈಸೂರಿನ ಶಾರದಾದೇವಿ ನಗರದ ಸರ್ಕಲ್ನಲ್ಲಿ ಒಂದು ವರ್ಷದ ಹಿಂದೆ ಲಕ್ಷಾಂತರ ರೂ. ವೆಚ್ಚದಲ್ಲಿ ಸುಸಜ್ಜಿತವಾದ ಬಸ್ ನಿಲ್ದಾಣವನ್ನು ನಿರ್ಮಿಸಲಾಗಿದೆ. ಆದರೆ…