ಬೆಂಗಳೂರು: ನದಿ ಜೋಡಣೆ, ನೀರಾವರಿ ಸೇರಿದಂತೆ ರಾಜ್ಯದ ಯಾವುದೇ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಹೋರಾಡುವಲ್ಲಿ ಜೆಡಿಎಸ್ ಮತ್ತು ಬಿಜೆಪಿ ಸುಮ್ಮನೆ ಕುಳಿತಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
ಈ ಬಗ್ಗೆ ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಗೋದಾವರಿ-ಕಾವೇರಿ ನದಿ ಜೋಡಣೆ ಯೋಜನೆ ಡಿಪಿಆರ್ ಸಿದ್ಧಪಡಿಸಿದಾಗ, ಕರ್ನಾಟಕಕ್ಕೆ ನೀರು ಹಂಚಿಕೆ ಮಾಡಿರಲಿಲ್ಲ. ನಾನು 2020-22ರಲ್ಲಿ ಅಂದಿನ ಕೇಂದ್ರ ನೀರಾವರಿ ಸಚಿವರಿಗೆ ಪತ್ರ ಬರೆದಿದ್ದೆ ಎಂದರು.
ಕರ್ನಾಟಕಕ್ಕೆ ಆಗಿರುವ ಅನ್ಯಾಯದ ಬಗ್ಗೆ ಸಚಿವರ ಬಳಿ ಹೇಳಿದ ನಂತರ ರಾಜ್ಯಕ್ಕೆ 15.91 ಟಿಎಂಸಿ ಅಡಿ ನೀರು ಹಂಚಿಕೆ ಮಾಡಿದ್ದಾರೆ. ಆದರೆ ಅದನ್ನು ಘಟಪ್ರಭಾ ನದಿಗೆ ಹರಿಸುತ್ತೇವೆ ಎಂದಿದ್ದಾರೆ. ಇದು ಸಾಧ್ಯವಿಲ್ಲ ಎಂದು ನಾನು ಸಂಸತ್ತಿನಲ್ಲೇ ಪ್ರಶ್ನೆ ಮಾಡಿದ್ದೇನೆ ಎಂದರು.
ಗೋದಾವರಿಯಿಂದ ಹರಿಸಿದ ನೀರು ರಾಜ್ಯದಲ್ಲಿ ಕಾವೇರಿಗೆ ಎಲ್ಲಿ ಜೋಡಿಸುತ್ತಾರೆ ಎಂಬುದನ್ನು ಸ್ಪಷ್ಟವಾಗಿ ತೋರಿಸಿಯೇ ಇಲ್ಲ. ಅದನ್ನು ಸ್ಪಷ್ಟಪಡಿಸಿ ಎಂದು ಕೋರಿದ್ದೇನೆ. ಇದಕ್ಕೆ ಒತ್ತು ನೀಡಿ ಪ್ರಧಾನಿಗೆ ಪತ್ರ ಬರೆಯುತ್ತೇನೆ ಎಂದರು.
ಈ ಹೋರಾಟ ಮಾಡುವಲ್ಲಿ ಸಿದ್ದರಾಮಯ್ಯ, ಡಿಕೆಶಿ, ಕಾಂಗ್ರೆಸ್ ಸಂಸದರ ಜೊತೆಗೆ ಮಾತನಾಡಲು ನನಗೆ ಯಾವುದೇ ಸಮಸ್ಯೆ ಇಲ್ಲ. ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋರಾಟ ನಡೆಸುತ್ತೇನೆ ಎಂದು ಹೇಳಿದರು.
ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…
ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…
ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…
ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…
ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…
ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…