ಬೆಂಗಳೂರು: ನದಿ ಜೋಡಣೆ, ನೀರಾವರಿ ಸೇರಿದಂತೆ ರಾಜ್ಯದ ಯಾವುದೇ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಹೋರಾಡುವಲ್ಲಿ ಜೆಡಿಎಸ್ ಮತ್ತು ಬಿಜೆಪಿ ಸುಮ್ಮನೆ ಕುಳಿತಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
ಈ ಬಗ್ಗೆ ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಗೋದಾವರಿ-ಕಾವೇರಿ ನದಿ ಜೋಡಣೆ ಯೋಜನೆ ಡಿಪಿಆರ್ ಸಿದ್ಧಪಡಿಸಿದಾಗ, ಕರ್ನಾಟಕಕ್ಕೆ ನೀರು ಹಂಚಿಕೆ ಮಾಡಿರಲಿಲ್ಲ. ನಾನು 2020-22ರಲ್ಲಿ ಅಂದಿನ ಕೇಂದ್ರ ನೀರಾವರಿ ಸಚಿವರಿಗೆ ಪತ್ರ ಬರೆದಿದ್ದೆ ಎಂದರು.
ಕರ್ನಾಟಕಕ್ಕೆ ಆಗಿರುವ ಅನ್ಯಾಯದ ಬಗ್ಗೆ ಸಚಿವರ ಬಳಿ ಹೇಳಿದ ನಂತರ ರಾಜ್ಯಕ್ಕೆ 15.91 ಟಿಎಂಸಿ ಅಡಿ ನೀರು ಹಂಚಿಕೆ ಮಾಡಿದ್ದಾರೆ. ಆದರೆ ಅದನ್ನು ಘಟಪ್ರಭಾ ನದಿಗೆ ಹರಿಸುತ್ತೇವೆ ಎಂದಿದ್ದಾರೆ. ಇದು ಸಾಧ್ಯವಿಲ್ಲ ಎಂದು ನಾನು ಸಂಸತ್ತಿನಲ್ಲೇ ಪ್ರಶ್ನೆ ಮಾಡಿದ್ದೇನೆ ಎಂದರು.
ಗೋದಾವರಿಯಿಂದ ಹರಿಸಿದ ನೀರು ರಾಜ್ಯದಲ್ಲಿ ಕಾವೇರಿಗೆ ಎಲ್ಲಿ ಜೋಡಿಸುತ್ತಾರೆ ಎಂಬುದನ್ನು ಸ್ಪಷ್ಟವಾಗಿ ತೋರಿಸಿಯೇ ಇಲ್ಲ. ಅದನ್ನು ಸ್ಪಷ್ಟಪಡಿಸಿ ಎಂದು ಕೋರಿದ್ದೇನೆ. ಇದಕ್ಕೆ ಒತ್ತು ನೀಡಿ ಪ್ರಧಾನಿಗೆ ಪತ್ರ ಬರೆಯುತ್ತೇನೆ ಎಂದರು.
ಈ ಹೋರಾಟ ಮಾಡುವಲ್ಲಿ ಸಿದ್ದರಾಮಯ್ಯ, ಡಿಕೆಶಿ, ಕಾಂಗ್ರೆಸ್ ಸಂಸದರ ಜೊತೆಗೆ ಮಾತನಾಡಲು ನನಗೆ ಯಾವುದೇ ಸಮಸ್ಯೆ ಇಲ್ಲ. ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋರಾಟ ನಡೆಸುತ್ತೇನೆ ಎಂದು ಹೇಳಿದರು.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…