ವಿಜಯನಗರ: ಬಳ್ಳಾರಿ ಸಮೀಪದಲ್ಲಿರುವ ತುಂಗಭದ್ರಾ ಅಣೆಕಟ್ಟೆಯು ಭರ್ತಿಯತ್ತ ಸಾಗಿದ್ದು, 10 ಗೇಟ್ಗಳ ಮೂಲಕ 20 ಸಾವಿರ ಕ್ಯೂಸೆಕ್ಸ್ ನೀರನ್ನು ನದಿಗೆ ಹೊರಬಿಡಲಾಗಿದೆ.
ಕಳೆದ ಕೆಲ ದಿನಗಳ ಹಿಂದೆ ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ನ ಚೈನ್ ಕಟ್ಟಾಗಿ ಡ್ಯಾಂನಿಂದ ಅಪಾರ ಪ್ರಮಾಣದ ನೀರು ಪೋಲಾಗಿತ್ತು.
ಈ ಹಿನ್ನೆಲೆಯಲ್ಲಿ ಭಾರೀ ಆತಂಕಗೊಂಡಿದ್ದ ಆ ಭಾಗದ ರೈತರು ಈ ವರ್ಷ ಒಂದು ಬೆಳೆಯನ್ನೂ ಬೆಳೆಯಲು ಆಗಲ್ಲ ಎಂದು ಬೇಸರದಿಂದಲೇ ದಿನದೂಡುತ್ತಿದ್ದರು.
ಹೀಗಿರುವಾಗಲೇ ಕಳೆದ ಮೂರು ದಿನಗಳಿಂದ ಮಳೆರಾಯ ತನ್ನ ಅಬ್ಬರ ಶುರು ಮಾಡಿದ್ದು, ತುಂಗಭದ್ರಾ ಜಲಾಶಯ ಭರ್ತಿಯತ್ತ ಸಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆಯಿಂದ ಒಂದೊಂದೇ ಗೇಟ್ಗಳನ್ನು ತೆರೆದು ನೀರನ್ನು ಹೊರಬಿಡಲು ಆರಂಭಿಸಲಾಯಿತು.
ಮೊದಲಿಗೆ 5 ಗೇಟ್ಗಳನ್ನು ತೆರೆದು ನೀರನ್ನು ಹರಿಸಲಾಯಿತು. ಬಳಿಕ ಮತ್ತೆ ಐದು ಗೇಟ್ಗಳನ್ನು ತೆರೆದು ನೀರನ್ನು ಹೊರಬಿಡಲಾಗಿದೆ.
ಜಲಾಶಯದಿಂದ ಒಟ್ಟಾರೆ ಈಗ 20 ಸಾವಿರ ಕ್ಯೂಸೆಕ್ಸ್ ನೀರನ್ನು ಹೊರಬಿಡಲಾಗುತ್ತಿದ್ದು, ಮಳೆ ಜಾಸ್ತಿಯಾಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾದರೆ, ಮತ್ತೆ ಹೊರಹರಿವನ್ನು ಹೆಚ್ಚಳ ಮಾಡುತ್ತೇವೆ ಎಂದು ನೀರಾವರಿ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.
ಈ ಹಿನ್ನೆಲೆಯಲ್ಲಿ ನದಿ ಪಾತ್ರದಲ್ಲಿ ವಾಸಿಸುತ್ತಿರುವ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…