ರಾಜ್ಯ

ಭರ್ತಿಯತ್ತ ತುಂಗಭದ್ರಾ ಜಲಾಶಯ: 10 ಗೇಟ್‌ಗಳ ಮೂಲಕ 20 ಸಾವಿರ ಕ್ಯೂಸೆಕ್ಸ್‌ ನೀರು ಬಿಡುಗಡೆ

ವಿಜಯನಗರ: ಬಳ್ಳಾರಿ ಸಮೀಪದಲ್ಲಿರುವ ತುಂಗಭದ್ರಾ ಅಣೆಕಟ್ಟೆಯು ಭರ್ತಿಯತ್ತ ಸಾಗಿದ್ದು, 10 ಗೇಟ್‌ಗಳ ಮೂಲಕ 20 ಸಾವಿರ ಕ್ಯೂಸೆಕ್ಸ್‌ ನೀರನ್ನು ನದಿಗೆ ಹೊರಬಿಡಲಾಗಿದೆ.

ಕಳೆದ ಕೆಲ ದಿನಗಳ ಹಿಂದೆ ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್‌ ಗೇಟ್‌ನ ಚೈನ್‌ ಕಟ್ಟಾಗಿ ಡ್ಯಾಂನಿಂದ ಅಪಾರ ಪ್ರಮಾಣದ ನೀರು ಪೋಲಾಗಿತ್ತು.

ಈ ಹಿನ್ನೆಲೆಯಲ್ಲಿ ಭಾರೀ ಆತಂಕಗೊಂಡಿದ್ದ ಆ ಭಾಗದ ರೈತರು ಈ ವರ್ಷ ಒಂದು ಬೆಳೆಯನ್ನೂ ಬೆಳೆಯಲು ಆಗಲ್ಲ ಎಂದು ಬೇಸರದಿಂದಲೇ ದಿನದೂಡುತ್ತಿದ್ದರು.

ಹೀಗಿರುವಾಗಲೇ ಕಳೆದ ಮೂರು ದಿನಗಳಿಂದ ಮಳೆರಾಯ ತನ್ನ ಅಬ್ಬರ ಶುರು ಮಾಡಿದ್ದು, ತುಂಗಭದ್ರಾ ಜಲಾಶಯ ಭರ್ತಿಯತ್ತ ಸಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆಯಿಂದ ಒಂದೊಂದೇ ಗೇಟ್‌ಗಳನ್ನು ತೆರೆದು ನೀರನ್ನು ಹೊರಬಿಡಲು ಆರಂಭಿಸಲಾಯಿತು.

ಮೊದಲಿಗೆ 5 ಗೇಟ್‌ಗಳನ್ನು ತೆರೆದು ನೀರನ್ನು ಹರಿಸಲಾಯಿತು. ಬಳಿಕ ಮತ್ತೆ ಐದು ಗೇಟ್‌ಗಳನ್ನು ತೆರೆದು ನೀರನ್ನು ಹೊರಬಿಡಲಾಗಿದೆ.

ಜಲಾಶಯದಿಂದ ಒಟ್ಟಾರೆ ಈಗ 20 ಸಾವಿರ ಕ್ಯೂಸೆಕ್ಸ್‌ ನೀರನ್ನು ಹೊರಬಿಡಲಾಗುತ್ತಿದ್ದು, ಮಳೆ ಜಾಸ್ತಿಯಾಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾದರೆ, ಮತ್ತೆ ಹೊರಹರಿವನ್ನು ಹೆಚ್ಚಳ ಮಾಡುತ್ತೇವೆ ಎಂದು ನೀರಾವರಿ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.

ಈ ಹಿನ್ನೆಲೆಯಲ್ಲಿ ನದಿ ಪಾತ್ರದಲ್ಲಿ ವಾಸಿಸುತ್ತಿರುವ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಪರೀಕ್ಷೆ ಮುಗಿದ ದಿನವೇ ಫಲಿತಾಂಶ ಪ್ರಕಟಿಸಿದ ಮಹಿಳಾ ಸರ್ಕಾರಿ ಕಾಲೇಜು!

ಮಂಡ್ಯ : ನಗರದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ) ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು 2025-26ನೇ ಸಾಲಿನ ವಿವಿಧ…

29 mins ago

ಮಂಡ್ಯ ಜಿಲ್ಲೆಯ ರಾಷ್ಟೀಯ ಹೆದ್ದಾರಿಗಳ ಕಾಮಗಾರಿ ಶೀಘ್ರ ಮುಕ್ತಾಯಗೊಳಿಸಿ : ಸಚಿವ ಎನ್.ಚಲುವರಾಯಸ್ವಾಮಿ

ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು…

42 mins ago

‘ಟಿವಿಕೆ ಪ್ರವೇಶದಿಂದ ರಾಜಕೀಯ ಉದ್ವಿಗ್ನ’ : ದಳಪತಿ ವಿಜಯ್‌

ಚೆನ್ನೈ : ನಮ್ಮ ಪಕ್ಷದ ಪ್ರವೇಶದಿಂದ ತಮಿಳುನಾಡು ರಾಜಕೀಯ ಉದ್ವಿಗ್ನಗೊಂಡಿದೆ ಎಂದು ದಳಪತಿ ವಿಜಯ್ ಹೇಳಿಕೊಂಡಿದ್ದಾರೆ. ಮುಂಬರುವ ತಮಿಳುನಾಡಿನ ವಿಧಾನಸಭಾ…

1 hour ago

ಜಿಎಸ್‌ಟಿ, ಐಟಿ ಪಾವತಿದಾರರು ‘ಗ್ರಹಲಕ್ಷ್ಮಿʼಗೆ ಅರ್ಹರಲ್ಲ : ಸಚಿವೆ ಲಕ್ಷ್ಮಿ

ಬೆಂಗಳೂರು : ಆದಾಯ ತೆರಿಗೆ ಪಾವತಿಸುವವರು ಹಾಗೂ ಜಿಎಸ್‌ಟಿ ವ್ಯಾಪ್ತಿಗೆ ಒಳಪಡುವವರು ರಾಜ್ಯ ಸರ್ಕಾರದ ಮಹಾತ್ವಕಾಂಕ್ಷಿ ಯೋಜನೆ ಗೃಹಲಕ್ಷ್ಮಿ ವ್ಯಾಪ್ತಿಗೆ…

1 hour ago

ಸಾಮಾಜಿಕ ಜಾಲತಾಣ ಬಳಕೆಯಿಂದ ದುಷ್ಪರಿಣಾಮ : ಹರೆಯದವರ ಬಳಕೆ ನಿಷೇಧಕ್ಕೆ ಚಿಂತನೆ

ಬೆಂಗಳೂರು : ಆರೋಗ್ಯದ ಮೇಲೆ ವ್ಯಾಪಕ ದುಷ್ಪರಿಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ ಇನ್ನು ಮುಂದೆ 16 ವರ್ಷದ ಒಳಗಿನ ಮಕ್ಕಳು, ಸಾಮಾಜಿಕ…

1 hour ago

ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣ : ನ್ಯಾಯಾಂಗ ತನಿಖೆಗೆ ಕೇರಳ ಸಿಎಂ ಆಗ್ರಹ

ತಿರುವನಂತಪುರಂ : ಬೆಂಗಳೂರಿನಲ್ಲಿ ಆದಾಯ ತೆರಿಗೆ ಇಲಾಖೆ ನಡೆಸಿದ ಶೋಧದ ವೇಳೆ ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ.ರಾಯ್ ಅವರ ಆತ್ಮಹತ್ಯೆ…

2 hours ago