ಬೆಳಗಾವಿ : ಆರ್ಥಿಕ ಇಲಾಖೆಯ ಅನುಮತಿ ಪಡೆದು ಖಾಲಿ ಹುದ್ದೆಗಳನ್ನು ಹಂತಹಂತವಾಗಿ ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ವಿಧಾನ ಪರಿಷತ್ ಸದಸ್ಯ ನಿರಾಣಿ ಹಣಮಂತ ರುದ್ರಪ್ಪ ರವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ರಾಜ್ಯದಲ್ಲಿ ನಿಗಮ ಮಂಡಳಿಗಳು ಸೇರಿದಂತೆ ಸುಮಾರು 2,84,881 ಹುದ್ದೆಗಳು ಖಾಲಿಯಿದ್ದು,ಇವುಗಳನ್ನು ಶೀಘ್ರ ಗತಿಯಲ್ಲಿ ತುಂಬಲು ತೆಗೆದುಕೊಂಡಿರುವ ಕ್ರಮದ ಬಗ್ಗೆ ಮಾಹಿತಿ ಕೋರಿದ್ದರು.
ಸರ್ಕಾರದಲ್ಲಿ ವಿವಿಧ ಇಲಾಖೆಗಳೂ ಸೇರಿದಂತೆ ರಾಜ್ಯದಲ್ಲಿ ಒಟ್ಟು 2,84,881 ಹುದ್ದೆಗಳು ಖಾಲಿಯಿದೆ. ಅದರಲ್ಲಿ ವಿವಿಧ ನಿಗಮ ಮಂಡಳಿಗಳಲ್ಲಿ101420 ಹುದ್ದೆಗಳು, ವಿಶ್ವವಿದ್ಯಾಲಯಗಳ್ಲಲಿ 14677 ಹುದ್ದೆಗಳು ಒಟ್ಟು 188037 ಹುದ್ದೆಗಳು ಖಾಲಿಯಿದೆ. ಈಗಾಗಲೇ 24,300 ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಆರ್ಥಿಕ ಇಲಾಖೆಯಿಂದ ಅನುಮತಿ ದೊರೆತಿದೆ. ಹೈದ್ರಾಬಾದ್ ಕರ್ನಾಟಕಕ್ಕೆ 371 ಜೆ ಅಡಿ 32,132 ಹುದ್ದೆಗಳು ಭರ್ತಿಯಾಗಬೇಕಿದೆ. ಒಟ್ಟು 56432 ಹುದ್ದೆಗಳ ಭರ್ತಿಗೆ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ ಎಂದರು.
ಒಳಮೀಸಲಾತಿಯ ಬಿಕ್ಕಟ್ಟಿನಿಂದಾಗಿ ನೇಮಕಾತಿ ಪ್ರಕ್ರಿಯೆಯಲ್ಲಿ ವಿಳಂಬವುಂಟಾಗಿತ್ತು. ಈಗ ಈ ಸಮಸ್ಯೆಗೆ ಬಗೆಹರಿದಿದ್ದು, ಆರ್ಥಿಕ ಇಲಾಖೆಯ ಅನುಮತಿ ಪಡೆದು ಹಂತ ಹಂತವಾಗಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…