ರಾಜ್ಯ

ಚಲನಚಿತ್ರ ವಾರ್ಷಿಕ ಸಾಹಿತ್ಯ ಪ್ರಶಸ್ತಿ : ರಘುನಾಥ್‌ ಚ.ಹ, ಪ್ರಕಾಶ್‌ರಾಜ್‌ ಕೃತಿ ಆಯ್ಕೆ

ಬೆಂಗಳೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2020 ಹಾಗೂ 2021ನೇ ಸಾಲಿನ ರಾಜ್ಯ ಚಲನಚಿತ್ರ ವಾರ್ಷಿಕ ಸಾಹಿತ್ಯ ಪ್ರಶಸ್ತಿಗಳನ್ನು ಪ್ರಕಟಿಸಿದೆ.

2020ನೇ ವರ್ಷದ ಚಲನಚಿತ್ರ ಸಾಹಿತ್ಯ ಪ್ರಶಸ್ತಿಗೆ ಬಳ್ಳಾರಿ ಜಿಲ್ಲೆ ಸಿರಿಗೇರಿಯ ಅನ್ನಪೂರ್ಣ ಪ್ರಕಾಶನ ಪ್ರಕಟಿಸಿದ ಹಿರಿಯ ಪತ್ರಕರ್ತ ರಘುನಾಥ ಚ.ಹ.ಅವರು ಆಯ್ದ 20 ಸಿನಿಮಾಗಳ ಕುರಿತು ಬರೆದ ಲೇಖನಗಳ ಸಂಗ್ರಹ ನಮೋ ವೆಂಕಟೇಶ ಕೃತಿ ಆಯ್ಕೆಯಾಗಿದೆ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್ ಎಂ.ನಿಂಬಾಳ್ಕರ್ ಅವರ ಅಧ್ಯಕ್ಷತೆಯ ಆಯ್ಕೆ ಸಮಿತಿಯಲ್ಲಿದ್ದ ಹಿರಿಯ ಪತ್ರರ್ತರಾದ ಡಾ.ರಾಜಶೇಖರ ಹತಗುಂದಿ ಹಾಗೂ ಬಸವರಾಜ ಮೇಗಲಕೇರಿ ಅವರು 2020 ವರ್ಷದ ಕೃತಿಯನ್ನು ಆಯ್ಕೆ ಮಾಡಿದ್ದರು.

2021ನೇ ವರ್ಷದ ಚಲನಚಿತ್ರ ವಾರ್ಷಿಕ ಸಾಹಿತ್ಯ ಪ್ರಶಸ್ತಿಗೆ ಬೆಂಗಳೂರಿನ ಸಿರಿಗಂಧ ಪ್ರಕಾಶನ ಪ್ರಕಟಿಸಿರುವ ಲೇಖಕ ಹಾಗೂ ಚಲನಚಿತ್ರ ನಿರ್ದೇಶಕ ಪ್ರಕಾಶರಾಜ್ ಮೇಹು ಅವರು ಬರೆದ ಡಾ.ರಾಜಕುಮಾರ್ ಬದುಕಿನ ಕುರಿತ ಅಂತರಂಗದ ಅಣ್ಣ ಕೃತಿಯು ಆಯ್ಕೆಯಾಗಿದೆ. ಸಾಹಿತಿ ಡಾ.ಚಿದಾನಂದ ಸಾಲಿ ಹಾಗೂ ಪತ್ರಕರ್ತ ಡಾ.ಶರಣು ಹುಲ್ಲೂರು ಅವರು ಪ್ರಶಸ್ತಿ ಆಯ್ಕೆ ಸಮಿತಿಯ ಸದಸ್ಯರಾಗಿದ್ದರು.

ಪ್ರಶಸ್ತಿಯು ಲೇಖಕರು ಹಾಗೂ ಪ್ರಕಾಶಕರಿಬ್ಬರಿಗೂ ತಲಾ 20 ಸಾವಿರ ನಗದು ಹಾಗೂ 50 ಗ್ರಾಂ ಬೆಳ್ಳಿ ಪದಕಗಳನ್ನು ಒಳಗೊಂಡಿದೆ ಎಂದು ಎಂದು ವಾರ್ತಾ ಇಲಾಖೆ ಜಂಟಿ ನಿರ್ದೇಶಕ , ಆಯ್ಕೆ ಸಮಿತಿಯ ಸದಸ್ಯ ಕಾರ್ಯದರ್ಶಿ ಮಂಜುನಾಥ ಡೊಳ್ಳಿನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

53 mins ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

5 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

5 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

5 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

5 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

5 hours ago