ರಾಜ್ಯ

ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆ : ಜಯಮಾಲಾಗೆ ಜಯ

ಬೆಂಗಳೂರು : ಕನ್ನಡ ಚಿತ್ರರಂಗದ ಮಾತೃ ಸಂಸ್ಥೆಯಾಗಿ ಪ್ರಸಿದ್ಧವಾದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಹಿರಿಯ ನಟಿ ಮತ್ತು ಮಾಜಿ ಸಚಿವೆ ಡಾ.ಜಯಮಾಲಾ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಇಂದು (ಜನವರಿ 31) ನಡೆದ ಚುನಾವಣೆಯಲ್ಲಿ ಅವರು ತಮ್ಮ ಪ್ರತಿಸ್ಪರ್ಧಿಗಳನ್ನು ಸುಲಭವಾಗಿ ಸೋಲಿಸಿ ಮತ್ತೊಮ್ಮೆ ಗದ್ದುಗೆ ಏರಿದ್ದಾರೆ.

ಗುರುರಾಜ ಕಲ್ಯಾಣ ಮಂಟಪದಲ್ಲಿ ನಡೆದ ಈ ಚುನಾವಣೆಯಲ್ಲಿ ಮತದಾನ ಮತ್ತು ಮತ ಎಣಿಕೆಯ ನಂತರ ಸಂಜೆಯೇ ಫಲಿತಾಂಶ ಪ್ರಕಟವಾಗಿದ್ದು, ಜಯಮಾಲಾ ಅವರು ಸ್ಪಷ್ಟ ಬಹುಮತದೊಂದಿಗೆ ಗೆದ್ದು ಬೀಗಿದ್ದಾರೆ.

ಈ ಬಾರಿ ನಿರ್ಮಾಪಕರ ವಲಯಕ್ಕೆ ಮೀಸಲಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಜಯಮಾಲಾ ಅವರೊಂದಿಗೆ ಭಾ.ಮಾ.ಹರೀಶ್, ಶಾಸಕ ಮುನಿರತ್ನ ಮತ್ತು ಚಿಂಗಾರಿ ಮಹಾದೇವ್ ಸೇರಿದಂತೆ ಹಲವರು ಸ್ಪರ್ಧಿಸಿದ್ದರು. ಆದರೆ ಮುನಿರತ್ನ ಮತ್ತು ಚಿಂಗಾರಿ ಮಹಾದೇವ್ ಅವರು ನಾಮಪತ್ರ ವಾಪಸ್ ಪಡೆದ ನಂತರ ಪೈಪೋಟಿ ಜಯಮಾಲಾ vs ಭಾ.ಮಾ.ಹರೀಶ್ ನಡುವೆ ಮಾತ್ರ ಸೀಮಿತವಾಗಿತ್ತು. ಚುನಾವಣೆಯಲ್ಲಿ ರಾಜಕೀಯ ಬಣಗಳ ಪ್ರಭಾವವೂ ಗಮನಾರ್ಹವಾಗಿತ್ತು – ಜಯಮಾಲಾ ಅವರಿಗೆ ಸಿದ್ದರಾಮಯ್ಯ ಬಣದ ಬೆಂಬಲವಿದ್ದರೆ, ಹರೀಶ್ ಅವರಿಗೆ ಡಿ.ಕೆ. ಶಿವಕುಮಾರ್ ನೈತಿಕ ಬೆಂಬಲ ಇತ್ತು ಎಂದು ಮೂಲಗಳು ತಿಳಿಸಿವೆ.

ಜಯಮಾಲಾ ಅವರು ಈ ಹಿಂದೆಯೂ 2008ರಿಂದ 2010ರವರೆಗೆ KFCC ಅಧ್ಯಕ್ಷರಾಗಿದ್ದರು ಮತ್ತು ಮಹಿಳಾ ಅಧ್ಯಕ್ಷರಾಗಿ ಇತಿಹಾಸ ಸೃಷ್ಟಿಸಿದ್ದರು. ಈ ಬಾರಿ ಮತ್ತೊಮ್ಮೆ ಗೆದ್ದ ಅವರು, ಕನ್ನಡ ಚಿತ್ರರಂಗದ ಸಮಸ್ಯೆಗಳಾದ ಸಬ್ಸಿಡಿ ಬಿಡುಗಡೆ, ಒಟಿಟಿ ನಿಯಂತ್ರಣ, ಚಿತ್ರನಗರಿ ಅಭಿವೃದ್ಧಿ ಮತ್ತು ನಿರ್ಮಾಪಕರ-ಪ್ರದರ್ಶಕರ ಸಮನ್ವಯಕ್ಕೆ ಆದ್ಯತೆ ನೀಡುವುದಾಗಿ ಭರವಸೆ ನೀಡಿದ್ದಾರೆ.

ಚುನಾವಣೆಯ ನಂತರ ಮಾತನಾಡಿದ ಜಯಮಾಲಾ ಅವರು, “ಇಡೀ ಕನ್ನಡ ಚಿತ್ರರಂಗದ ಬೆಳವಣಿಗೆಗಾಗಿ ಕೆಲಸ ಮಾಡುತ್ತೇನೆ. ಎಲ್ಲರ ಬೆಂಬಲಕ್ಕೆ ಧನ್ಯವಾದಗಳು” ಎಂದು ಹೇಳಿದರು. ಈ ಗೆಲುವು ಕನ್ನಡ ಚಿತ್ರರಂಗದಲ್ಲಿ ಹೊಸ ಆಶಾವಾದ ಮೂಡಿಸಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬೌದ್ಧ ಧರ್ಮಗುರು ದಲೈಲಾಮಾಗೆ ಪ್ರತಿಷ್ಠಿತ ಗ್ರ್ಯಾಮಿ ಪ್ರಶಸ್ತಿ ಗೌರವ

ಟಿಬೆಟ್‌ ಬೌದ್ಧ ಧರ್ಮಗುರು ಮತ್ತು ಜಾಗತಿಕ ಶಾಂತಿದೂತ ಎಂದು ಪ್ರಖ್ಯಾತರಾದ ದಲೈಲಾಮಾ ಅವರು ಪ್ರತಿಷ್ಠಿತ ಗ್ರ್ಯಾಮಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ತಮ್ಮ…

3 mins ago

ಮಂಡ್ಯ| ಸಿದ್ಧಗಂಗಾಶ್ರೀಗಳ ಆದರ್ಶ ಅಜರಾಮರ: ಯು.ಸಿ.ಶಿವಕುಮಾರ್‌

ಮಂಡ್ಯ: ಕೋಟ್ಯಾಂತರ ಭಕ್ತರ ಮನೆ-ಮನಗಳಲ್ಲಿ ನೆಲೆಗೊಂಡಿರುವ ಡಾ.ಶಿವಕುಮಾರಸ್ವಾಮೀಜಿಯವರ ಆದರ್ಶ ಅಜರಾಮರ ಎಂದು ಮನ್‌ಮುಲ್‌ ಅಧ್ಯಕ್ಷ ಯು.ಸಿ.ಶಿವಕುಮಾರ್‌ ಹೇಳಿದರು. ಮಂಡ್ಯ ನಗರದ…

5 mins ago

ರಾಜ್ಯ ಸರ್ಕಾರ ಪಾಪರ್‌ ಆಗಿದೆ: ವಿಪಕ್ಷ ನಾಯಕ ಆರ್.‌ಅಶೋಕ್‌

ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ಪ್ರತಿ ಇಲಾಖೆಯಲ್ಲಿಯೂ ನಡೆಯುತ್ತಿದೆ. ಸರ್ಕಾರ ದಿವಾಳಿಯಾಗಿದ್ದು, ಲೂಟಿ ಮಾಡುವುದನ್ನೇ ಕಾಯಕವನ್ನಾಗಿ ಮಾಡಿಕೊಂಡಿದೆ ಎಂದು ವಿಪಕ್ಷ…

42 mins ago

ಚಾಮರಾಜನಗರ| ಫ್ಲೋರೈಡ್‌ ಮಿಶ್ರಿತ ನೀರು ಸೇವಿಸಿ ಕಿಡ್ನಿ ಕಳೆದುಕೊಂಡ 47 ಜನ

ಚಾಮರಾಜನಗರ: ಫ್ಲೋರೈಡ್‌ ಮಿಶ್ರಿತ ನೀರು ಕುಡಿದು 47 ಮಂದಿ ಕಿಡ್ನಿ ಕಳೆದುಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಹನೂರು…

53 mins ago

ಹುಣಸೂರು: ಬಾರ್‌ ತೆರೆಯಲು ಅವಕಾಶ ನೀಡದಂತೆ ಗ್ರಾಮಸ್ಥರ ಆಗ್ರಹ

ಹುಣಸೂರು: ತಾಲ್ಲೂಕಿನ ಬೋಳನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸರಾಮನಹಳ್ಳಿ ಗ್ರಾಮದಲ್ಲಿ ಬಾರ್‌ ತೆರೆಯಲು ಅನುಮತಿ ನೀಡದಂತೆ ಒತ್ತಾಯಿಸಿ ಗ್ರಾಮಸ್ಥರು ಪಿಡಿಓಗೆ…

1 hour ago

ಪೆನ್ನಾರ್‌ ನದಿ ಜಲವಿವಾದ: ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಆದೇಶ

ನವದೆಹಲಿ: ಕರ್ನಾಟಕ ಹಾಗೂ ತಮಿಳುನಾಡು ನಡುವಿನ ದಕ್ಷಿಣ ಪಿನಾಕಿನಿ ಎಂದೇ ಹೆಸರುವಾಸಿಯಾಗಿರುವ ಪೆನ್ನಾರ್‌ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

3 hours ago