ರಾಜ್ಯ

ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆ : ಜಯಮಾಲಾಗೆ ಜಯ

ಬೆಂಗಳೂರು : ಕನ್ನಡ ಚಿತ್ರರಂಗದ ಮಾತೃ ಸಂಸ್ಥೆಯಾಗಿ ಪ್ರಸಿದ್ಧವಾದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಹಿರಿಯ ನಟಿ ಮತ್ತು ಮಾಜಿ ಸಚಿವೆ ಡಾ.ಜಯಮಾಲಾ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಇಂದು (ಜನವರಿ 31) ನಡೆದ ಚುನಾವಣೆಯಲ್ಲಿ ಅವರು ತಮ್ಮ ಪ್ರತಿಸ್ಪರ್ಧಿಗಳನ್ನು ಸುಲಭವಾಗಿ ಸೋಲಿಸಿ ಮತ್ತೊಮ್ಮೆ ಗದ್ದುಗೆ ಏರಿದ್ದಾರೆ.

ಗುರುರಾಜ ಕಲ್ಯಾಣ ಮಂಟಪದಲ್ಲಿ ನಡೆದ ಈ ಚುನಾವಣೆಯಲ್ಲಿ ಮತದಾನ ಮತ್ತು ಮತ ಎಣಿಕೆಯ ನಂತರ ಸಂಜೆಯೇ ಫಲಿತಾಂಶ ಪ್ರಕಟವಾಗಿದ್ದು, ಜಯಮಾಲಾ ಅವರು ಸ್ಪಷ್ಟ ಬಹುಮತದೊಂದಿಗೆ ಗೆದ್ದು ಬೀಗಿದ್ದಾರೆ.

ಈ ಬಾರಿ ನಿರ್ಮಾಪಕರ ವಲಯಕ್ಕೆ ಮೀಸಲಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಜಯಮಾಲಾ ಅವರೊಂದಿಗೆ ಭಾ.ಮಾ.ಹರೀಶ್, ಶಾಸಕ ಮುನಿರತ್ನ ಮತ್ತು ಚಿಂಗಾರಿ ಮಹಾದೇವ್ ಸೇರಿದಂತೆ ಹಲವರು ಸ್ಪರ್ಧಿಸಿದ್ದರು. ಆದರೆ ಮುನಿರತ್ನ ಮತ್ತು ಚಿಂಗಾರಿ ಮಹಾದೇವ್ ಅವರು ನಾಮಪತ್ರ ವಾಪಸ್ ಪಡೆದ ನಂತರ ಪೈಪೋಟಿ ಜಯಮಾಲಾ vs ಭಾ.ಮಾ.ಹರೀಶ್ ನಡುವೆ ಮಾತ್ರ ಸೀಮಿತವಾಗಿತ್ತು. ಚುನಾವಣೆಯಲ್ಲಿ ರಾಜಕೀಯ ಬಣಗಳ ಪ್ರಭಾವವೂ ಗಮನಾರ್ಹವಾಗಿತ್ತು – ಜಯಮಾಲಾ ಅವರಿಗೆ ಸಿದ್ದರಾಮಯ್ಯ ಬಣದ ಬೆಂಬಲವಿದ್ದರೆ, ಹರೀಶ್ ಅವರಿಗೆ ಡಿ.ಕೆ. ಶಿವಕುಮಾರ್ ನೈತಿಕ ಬೆಂಬಲ ಇತ್ತು ಎಂದು ಮೂಲಗಳು ತಿಳಿಸಿವೆ.

ಜಯಮಾಲಾ ಅವರು ಈ ಹಿಂದೆಯೂ 2008ರಿಂದ 2010ರವರೆಗೆ KFCC ಅಧ್ಯಕ್ಷರಾಗಿದ್ದರು ಮತ್ತು ಮಹಿಳಾ ಅಧ್ಯಕ್ಷರಾಗಿ ಇತಿಹಾಸ ಸೃಷ್ಟಿಸಿದ್ದರು. ಈ ಬಾರಿ ಮತ್ತೊಮ್ಮೆ ಗೆದ್ದ ಅವರು, ಕನ್ನಡ ಚಿತ್ರರಂಗದ ಸಮಸ್ಯೆಗಳಾದ ಸಬ್ಸಿಡಿ ಬಿಡುಗಡೆ, ಒಟಿಟಿ ನಿಯಂತ್ರಣ, ಚಿತ್ರನಗರಿ ಅಭಿವೃದ್ಧಿ ಮತ್ತು ನಿರ್ಮಾಪಕರ-ಪ್ರದರ್ಶಕರ ಸಮನ್ವಯಕ್ಕೆ ಆದ್ಯತೆ ನೀಡುವುದಾಗಿ ಭರವಸೆ ನೀಡಿದ್ದಾರೆ.

ಚುನಾವಣೆಯ ನಂತರ ಮಾತನಾಡಿದ ಜಯಮಾಲಾ ಅವರು, “ಇಡೀ ಕನ್ನಡ ಚಿತ್ರರಂಗದ ಬೆಳವಣಿಗೆಗಾಗಿ ಕೆಲಸ ಮಾಡುತ್ತೇನೆ. ಎಲ್ಲರ ಬೆಂಬಲಕ್ಕೆ ಧನ್ಯವಾದಗಳು” ಎಂದು ಹೇಳಿದರು. ಈ ಗೆಲುವು ಕನ್ನಡ ಚಿತ್ರರಂಗದಲ್ಲಿ ಹೊಸ ಆಶಾವಾದ ಮೂಡಿಸಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

7 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

7 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

7 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

7 hours ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

19 hours ago