ರಾಜ್ಯ

ಸೂಪಾ ಅಣೆಕಟ್ಟು : ಪ್ರವಾಹದ ಅಂತಿಮ ಮುನ್ನೆಚ್ಚರಿಕೆ

ಬೆಂಗಳೂರು : ಕಾಳಿ ನದಿ ಯೋಜನೆ 1ನೇ ಹಂತ ಸೂಪಾ ಅಣೆಕಟ್ಟೆ ಜಲಾನಯನ ಪ್ರದೇಶದಲ್ಲಿ ಸತತ ಮಳೆ ಬೀಳುತ್ತಿರುವ ಹಿನ್ನೆಲೆ ಜಲಾಶಯದ ಕೆಳಹಂತದ ಪ್ರದೇಶದಲ್ಲಿ ಪ್ರವಾಹದ ಕುರಿತು ಕೆಪಿಸಿಸಿಎಲ್ ವತಿಯಿಂದ ಮೂರನೆಯ ಹಾಗೂ ಅಂತಿಮ ಮುನ್ನೆಚ್ಚರಿಕೆ ನೀಡಲಾಗಿದೆ.

ಸೂಪಾ ಅಣೆಕಟ್ಟೆಯ ಜಲಾನಯನ ಪ್ರದೇಶದಲ್ಲಿ ಸತತವಾಗಿ ಮಳೆ ಬೀಳುತ್ತಿದ್ದು, ಜಲಾಶಯಕ್ಕೆ ಹೇರಳವಾಗಿ ನೀರು ಹರಿದು ಬರುತ್ತಿರುವುದರಿಂದ ನೀರಿನ ಮಟ್ಟವು ಸತತವಾಗಿ ಏರುತ್ತಿದೆ. ಜಲಾಶಯದ ಗರಿಷ್ಠ ಮಟ್ಟವು 564.00 ಮೀಟರ ಆಗಿದ್ದು, ನೀರಿನ ಸಂಗ್ರಹಣ ಸಾಮರ್ಥ್ಯ 147.55 ಟಿ.ಎಂ.ಸಿ. ಇರುತ್ತದೆ. ಜಲಾಸಯದ ಈಗಿನ ನೀರಿನ ಮಟ್ಟವು 558.87 ಮೀಟರ್ ಆಗಿದ್ದು, 126.345 ಟಿಎಂಸಿ ನೀರಿನೊಂದಿಗೆ ಒಟ್ಟು ಸಾಮರ್ಥ್ಯದ ಶೇ. 85.63ರಷ್ಟು ಭರ್ತಿಯಾಗಿದೆ.

ಇದಲ್ಲದೆ, ಜಲಾಶಯದ ಒಳಹರಿವು ಸುಮಾರು 21,261 ಕ್ಯೂಸೆಕ್ ಇದ್ದು, ನೀರಿನ ಹರಿವು ಇದೇ ರೀತಿ ಮುಂದುವರಿದರೆ ಜಲಾಶಯವು ಗರಿಷ್ಠ ಮಟ್ಟ ತಲುಪುವ ಸಾಧ್ಯತೆ ಇರುತ್ತದೆ. ಆದ್ದರಿಂದ ಆಣೆಕಟ್ಟು ಸುರಕ್ಷತಾ ದೃಷ್ಟಿಯಿಂದ ಹೆಚ್ಚುವರಿ ಜಲಾಶಯದ ನೀರನ್ನು ಯಾವುದೇ ಸಮಯದಲ್ಲಿ ಹೊರ ಬಿಡಲಾಗುವುದು ಎಂದು ಕೆಪಿಸಿಎಲ್ ತಿಳಿಸಿದೆ.

ಈ ಹಿನ್ನೆಲೆಯಲ್ಲಿ ಆಣೆಕಟ್ಟೆಯ ಕೆಳದಂಡೆಯಲ್ಲಿ ಹಾಗೂ ನದಿಯ ಪಾತ್ರದುದ್ದಕ್ಕೂ ವಾಸಿಸುತ್ತಿರುವ ಸಾರ್ವಜನಿಕರು ತಮ್ಮ ಜನ, ಜಾನುವಾರು ಇತ್ಯಾದಿಗಳೊಂದಿಗೆ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಗೊಳ್ಳಬೇಕು. ಆಣೆಕಟ್ಟೆಯ ಕೆಳಭಾಗದ ನದಿ ಪಾತ್ರದಲ್ಲಿ ದೋಣಿ ಸಂಚಾರ, ಮೀನುಗಾರಿಕೆ, ಜಲಸಾಹಸ ಕ್ರೀಡಾ ಚಟುವಟಿಕೆಗಳನ್ನು ಮತ್ತು ಇತರೆ ಚಟುವಟಿಕೆಗಳನ್ನು ಮಳೆಗಾಲ ಮುಗಿಯುವವರೆಗೂ ನಡೆಸಬಾರದು ಎಂದು ಮನವಿ ಮಾಡಿದೆ.

ಆಂದೋಲನ ಡೆಸ್ಕ್

Recent Posts

ಪ್ರೇಮಿಗಳ ಆತ್ಮಹತ್ಯೆ ; ಪೊನ್ನಾಚಿ ಗ್ರಾಮದಲ್ಲಿ ದುರಂತ

ಹನೂರು : ತಾಲೂಕಿನ ಪೊನ್ನಾಚಿ ಗ್ರಾಮದಲ್ಲಿ ಇಬ್ಬರು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಹನೂರು…

7 mins ago

ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಿರೀಕ್ಷೆ ಮೀರಿ ಜನಬೆಂಬಲ: ಸಿಎಂ ಸಿದ್ದರಾಮಯ್ಯ

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆಯುತ್ತಿದ್ದು, ಅಭಿವೃದ್ಧಿ ಮಾಡದ ಬಿಜೆಪಿಯ ಸತ್ಯವನ್ನು ಜನರು ಅರಿತಿದ್ದಾರೆ…

1 hour ago

ಎಲ್ಲಾ ರಾಜ್ಯದಲ್ಲೂ ದ್ವಿಭಾಷಾ ಶಿಕ್ಷಣದ ವ್ಯವಸ್ಥೆ ಜಾರಿಯಲ್ಲಿದೆ: ಸಚಿವ ಮಧುಬಂಗಾರಪ್ಪ

ಬೆಂಗಳೂರು: ಎಲ್ಲಾ ರಾಜ್ಯದಲ್ಲೂ ದ್ವಿಭಾಷಾ ಶಿಕ್ಷಣದ ವ್ಯವಸ್ಥೆ ಜಾರಿಯಲ್ಲಿದೆ ಎಂದು ಶಾಲಾ ಶಿಕ್ಷಣ ಸಾಕ್ಷರತಾ ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರು,…

1 hour ago

ಬೇಸಿಗೆಯ ಉಷ್ಣತೆ ಹೆಚ್ಚಾದಂತೆ ರಾಜ್ಯಾದ್ಯಂತ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ

ಬೆಂಗಳೂರು: ಬೇಸಿಗೆಯ ಉಷ್ಣತೆ ಹೆಚ್ಚಾದಂತೆ ರಾಜ್ಯಾದ್ಯಂತ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆಯಿದೆ ಎಂದು ರಾಜ್ಯ ಮಟ್ಟದ ಹವಾಮಾನ ವೀಕ್ಷಣಾ…

1 hour ago

ಹನೂರು: ಪಾಲಾರ್ ಚೆಕ್‌ಪೋಸ್ಟ್‌ನಲ್ಲಿ ಒಂಟಿಸಲಗ ದಾಂಧಲೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಂತರರಾಜ್ಯ ಪಾಲಾರ್ ಚೆಕ್‌ಪೋಸ್ಟ್‌ನಲ್ಲಿ ಒಂಟಿ ಸಲಗದ ದಾಂಧಲೆಗೆ ಅರಣ್ಯ…

2 hours ago

ಕಾನೂನು ಸುವ್ಯವಸ್ಥೆಗೂ ಜಿಡಿಪಿಗೂ ನೇರ ಸಂಬಂಧವಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸೈಬರ್ ಅಪರಾಧಗಳು ಸೇರಿದಂತೆ ನಾನಾ ಅಪರಾಧಗಳಲ್ಲಿ ನಮ್ಮ ರಾಜ್ಯ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಾಗಿದ್ದು ಇದನ್ನು ಕಟ್ಟುನಿಟ್ಟಾಗಿ ತಡೆಗಟ್ಟಿ ಎಂದು…

4 hours ago