ಬೆಂಗಳೂರು : ಕಾಳಿ ನದಿ ಯೋಜನೆ 1ನೇ ಹಂತ ಸೂಪಾ ಅಣೆಕಟ್ಟೆ ಜಲಾನಯನ ಪ್ರದೇಶದಲ್ಲಿ ಸತತ ಮಳೆ ಬೀಳುತ್ತಿರುವ ಹಿನ್ನೆಲೆ ಜಲಾಶಯದ ಕೆಳಹಂತದ ಪ್ರದೇಶದಲ್ಲಿ ಪ್ರವಾಹದ ಕುರಿತು ಕೆಪಿಸಿಸಿಎಲ್ ವತಿಯಿಂದ ಮೂರನೆಯ ಹಾಗೂ ಅಂತಿಮ ಮುನ್ನೆಚ್ಚರಿಕೆ ನೀಡಲಾಗಿದೆ.
ಸೂಪಾ ಅಣೆಕಟ್ಟೆಯ ಜಲಾನಯನ ಪ್ರದೇಶದಲ್ಲಿ ಸತತವಾಗಿ ಮಳೆ ಬೀಳುತ್ತಿದ್ದು, ಜಲಾಶಯಕ್ಕೆ ಹೇರಳವಾಗಿ ನೀರು ಹರಿದು ಬರುತ್ತಿರುವುದರಿಂದ ನೀರಿನ ಮಟ್ಟವು ಸತತವಾಗಿ ಏರುತ್ತಿದೆ. ಜಲಾಶಯದ ಗರಿಷ್ಠ ಮಟ್ಟವು 564.00 ಮೀಟರ ಆಗಿದ್ದು, ನೀರಿನ ಸಂಗ್ರಹಣ ಸಾಮರ್ಥ್ಯ 147.55 ಟಿ.ಎಂ.ಸಿ. ಇರುತ್ತದೆ. ಜಲಾಸಯದ ಈಗಿನ ನೀರಿನ ಮಟ್ಟವು 558.87 ಮೀಟರ್ ಆಗಿದ್ದು, 126.345 ಟಿಎಂಸಿ ನೀರಿನೊಂದಿಗೆ ಒಟ್ಟು ಸಾಮರ್ಥ್ಯದ ಶೇ. 85.63ರಷ್ಟು ಭರ್ತಿಯಾಗಿದೆ.
ಇದಲ್ಲದೆ, ಜಲಾಶಯದ ಒಳಹರಿವು ಸುಮಾರು 21,261 ಕ್ಯೂಸೆಕ್ ಇದ್ದು, ನೀರಿನ ಹರಿವು ಇದೇ ರೀತಿ ಮುಂದುವರಿದರೆ ಜಲಾಶಯವು ಗರಿಷ್ಠ ಮಟ್ಟ ತಲುಪುವ ಸಾಧ್ಯತೆ ಇರುತ್ತದೆ. ಆದ್ದರಿಂದ ಆಣೆಕಟ್ಟು ಸುರಕ್ಷತಾ ದೃಷ್ಟಿಯಿಂದ ಹೆಚ್ಚುವರಿ ಜಲಾಶಯದ ನೀರನ್ನು ಯಾವುದೇ ಸಮಯದಲ್ಲಿ ಹೊರ ಬಿಡಲಾಗುವುದು ಎಂದು ಕೆಪಿಸಿಎಲ್ ತಿಳಿಸಿದೆ.
ಈ ಹಿನ್ನೆಲೆಯಲ್ಲಿ ಆಣೆಕಟ್ಟೆಯ ಕೆಳದಂಡೆಯಲ್ಲಿ ಹಾಗೂ ನದಿಯ ಪಾತ್ರದುದ್ದಕ್ಕೂ ವಾಸಿಸುತ್ತಿರುವ ಸಾರ್ವಜನಿಕರು ತಮ್ಮ ಜನ, ಜಾನುವಾರು ಇತ್ಯಾದಿಗಳೊಂದಿಗೆ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಗೊಳ್ಳಬೇಕು. ಆಣೆಕಟ್ಟೆಯ ಕೆಳಭಾಗದ ನದಿ ಪಾತ್ರದಲ್ಲಿ ದೋಣಿ ಸಂಚಾರ, ಮೀನುಗಾರಿಕೆ, ಜಲಸಾಹಸ ಕ್ರೀಡಾ ಚಟುವಟಿಕೆಗಳನ್ನು ಮತ್ತು ಇತರೆ ಚಟುವಟಿಕೆಗಳನ್ನು ಮಳೆಗಾಲ ಮುಗಿಯುವವರೆಗೂ ನಡೆಸಬಾರದು ಎಂದು ಮನವಿ ಮಾಡಿದೆ.
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…
ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…