ಬೆಂಗಳೂರು: ಕೇಂದ್ರ ಸರ್ಕಾರ ತೆರಿಗೆ ಹಂಚಿಕೆಯಲ್ಲಿ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿದ್ದ ರಾಜ್ಯ ಸರ್ಕಾರಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿರುಗೇಟು ನೀಡಿದ್ದಾರೆ.
ಬಿಜೆಪಿ ರಾಜ್ಯ ಘಟಕದ ಮಾಧ್ಯಮ ಕಚೇರಿಯಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನ ನೀರಿನ ಸಮಸ್ಯೆ ವಿಚಾರ ಪ್ರಸ್ತಾಪಿಸಿ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗದುಕೊಂಡರು. ನನ್ನ ತೆರಿಗೆ ನನ್ನ ಹಕ್ಕು ಘೋಷಣೆ ಸರಿ ಇದೆ. ಬೆಂಗಳೂರಿನ ಜನ ಇದೇ ಮಾತು ಕೇಳಿದ್ರೆ ಏನು ಹೇಳ್ತೀರಾ? ಬೆಂಗಳೂರು ಅಭಿವೃದ್ಧಿ ಆಗಬೇಕು. ನನ್ನ ತೆರಿಗೆ ನನಗೆ ಕೊಡಿ ಅಂದರೆ ಏನು ಹೇಳ್ತಿರಾ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.
ಕರ್ನಾಟಕದ ಬರ ಪರಿಹಾರ ಅನುದಾನ ಬಿಡುಗಡೆ ವಿಳಂಬಕ್ಕೆ ಕೇಂದ್ರ ಸರ್ಕಾರ ಕಾರಣವಲ್ಲ. ಉನ್ನತಾಧಿಕಾರಿ ಸಮಿತಿ ಸಭೆ ನಡೆಸಲು ಕೇಂದ್ರ ಚುನಾವಣಾ ಆಯೋಗದ ಅನುಮತಿ ಬಾರದಿರುವುದರಿಂದ ವಿಳಂಬಕ್ಕೆ ಕಾರಣವಾಗಿದೆ. ಕರ್ನಾಟಕ ಮಾತ್ರವಲ್ಲ, ತೆಲಂಗಾಣ, ತಮಿಳುನಾಡು, ಸಿಕ್ಕಿಂ, ಮಿಜೋರಾಂ, ಅಸ್ಸಾಂ ಸೇರಿದಂತೆ ಹಲವು ರಾಜ್ಯಗಳಿಗೆ ವಿಪತ್ತು ಪರಿಹಾರ ನಿಧಿಯಡಿ ನೆರವು ನೀಡುವ ಪ್ರಸ್ತಾವನೆಗಳಿಗೆ ಉನ್ನತಾಧಿಕಾರಿ ಸಮಿತಿ ಮುಂದಿವೆ. ಚುನಾವಣೆ ಆಯೋಗದ ಅನುಮತಿ ದೊರಕಿದ ಬಳಿಕವೇ ನೀರ್ಮಾನ ಕೈಗೊಳ್ಳಬೇಕಿದೆ ಎಂದು ಹೇಳಿದರು.
ತೆರಿಗೆ ವಿಚಾರದಲ್ಲಿ ಬಹಿರಂಗ ಚರ್ಚೆಗೆ ನಿಮಗೆ ಆಹ್ವಾನವಿದೆಯಲ್ಲಾ? ಎಂಬ ಪ್ರಶ್ನೆಗೆ ಉತ್ತರಿಸಲು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ನಿರಾಕರಿಸಿದರು.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…