ಬೆಂಗಳೂರು: ಕುಡಿದು ವಾಹನ ಚಾಲನೆ ಮಾಡಿ ಕಾರ್ಗಳಿಗೆ ಸರಣಿ ಅಪಘಾತ ಉಂಟು ಮಾಡಿದ ನಟ ಮಯೂರ್ ಪಟೇಲ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಓಲ್ಡ್ ಏರ್ಪೋರ್ಟ್ ರಸ್ತೆಯ ಕಮಾಂಡೋ ಆಸ್ಪತ್ರೆಯ ಸಿಗ್ನಲ್ ಬಳಿ ರಾತ್ರಿ 10 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ.
ಸಿಗ್ನಲ್ನಲ್ಲಿ ನಿಂತಿದ್ದ ಕಾರ್ಗಳಿಗೆ ಹಿಂಬದಿಯಿಂದ ನಟ ಮಯೂರ್ ಪಟೇಲ್ ಚಾಲನೆ ಮಾಡುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಈ ವೇಳೆ ಒಂದಕ್ಕೊಂದು ಕಾರ್ಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದ, ಎರಡು ಸ್ವಿಫ್ಟ್ ಡಿಸೈನ್ ಕಾರುಗಳು, ಒಂದು ಸರ್ಕಾರಿ ವಾಹನ ಜಖಂಗೊಂಡಿದೆ.
ಡ್ರಿಂಕ್ ಅಂಡ್ ಡ್ರೈವ್ ಪರೀಕ್ಷೆ ನಡೆಸಲಾಗಿದ್ದು, ಮಯೂರ್ ಪಟೇಲ್ ಮದ್ಯಪಾನ ಮಾಡಿರುವುದು ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಮಯೂರ್ ಪಟೇಲ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಬೆಂಗಳೂರು : ವಾಲ್ಮೀಕಿ ನಿಗಮ ಹಗರಣ ಸಂಬಂಧ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳ ತೀವ್ರ ಪ್ರತಿಭಟನೆಗೆ ಸಾಕ್ಷಿಯಾದ…
ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…
ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…