ರಾಜ್ಯ

ಬಿಜೆಪಿ ಶಾಸಕ ಶರಣು ಸಲಗರ್‌ ವಿರುದ್ಧ ಎಫ್‌ಐಆರ್:‌ ಕಾರಣ ಇಷ್ಟೇ

ಬೀದರ್:‌ 99 ಲಕ್ಷ ಸಾಲ ಹಿಂತಿರುಗಿಸದ ಆರೋಪದ ಮೇರೆಗೆ ಬಸವಕಲ್ಯಾಣ ಕ್ಷೇತ್ರದ ಬಿಜೆಪಿ ಶಾಸಕ ಶರಣು ಸಲಗರ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಬಸವಕಲ್ಯಾಣ ನಗರ ಠಾಣೆಯಲ್ಲಿ ಉದ್ಯಮಿ ಸಂಜು ಸುಗುರೆ ಎಂಬುವವರು ದೂರು ನೀಡಿದ್ದಾರೆ.

ಕಳೆದ 2023ರ ಚುನಾವಣೆ ಸಂದರ್ಭದಲ್ಲಿ ಉದ್ಯಮಿ ಸಂಜು ಸುಗುರೆಯಿಂದ ಶಾಸಕ ಸಲಗರ್‌ ಅವರು ಚುನಾವಣೆ ವೆಚ್ಚಕ್ಕೆಂದು 99 ಲಕ್ಷ ರೂ ಸಾಲ ಪಡೆದಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಹಣ ವಾಪಸ್‌ ಕೊಡಿ ಎಂದು ಮನೆಗೆ ಹೋದರೆ ಅವಾಚ್ಯ ಶಬ್ಧಗಳಿಂದ ಬೈದು ಧಮ್ಕಿ ಹಾಕಿದ್ದಾಗಿ ದೂರಿನಲ್ಲಿ ಉಲ್ಲೇಖ ಮಾಡಿದ್ದು, ಸೆಪ್ಟೆಂಬರ್.‌19ರಂದು ಶರಣು ಸಲಗರ್‌ ನೀಡಿದ ಚೆಕ್‌ ಬ್ಯಾಂಕಿಗೆ ಹಾಕಿದ್ರೆ ವಾಪಸ್‌ ಬಂದಿದೆ.

ಕರ್ನಾಟಕ ಬ್ಯಾಂಕ್‌ನಲ್ಲಿದ್ದ ಶಾಸಕರ ಖಾತೆ ಮುಚ್ಚಲ್ಪಟ್ಟಿದೆ ಎಂದು ಮಾಹಿತಿ ನೀಡಿದ್ದು, ಬಳಿಕ ಶಾಸಕರ ವಿರುದ್ಧ ಬೆಂಗಳೂರಿನ ಎಸಿಜೆಎಂ ಕೋರ್ಟ್‌ನಲ್ಲಿ ಸಂಜು ಸುಗುರೆ ದಾವೆ ಹೂಡಿದ್ದರು.

ಕೋರ್ಟ್‌ ಸೂಚನೆ ಮೇರೆಗೆ ಬಸವಕಲ್ಯಾಣ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಶಾಸಕರ ವಿರುದ್ಧ ದೂರು ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

4 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

12 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

12 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

12 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

15 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

15 hours ago