ಬೀದರ್: 99 ಲಕ್ಷ ಸಾಲ ಹಿಂತಿರುಗಿಸದ ಆರೋಪದ ಮೇರೆಗೆ ಬಸವಕಲ್ಯಾಣ ಕ್ಷೇತ್ರದ ಬಿಜೆಪಿ ಶಾಸಕ ಶರಣು ಸಲಗರ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಬಸವಕಲ್ಯಾಣ ನಗರ ಠಾಣೆಯಲ್ಲಿ ಉದ್ಯಮಿ ಸಂಜು ಸುಗುರೆ ಎಂಬುವವರು ದೂರು ನೀಡಿದ್ದಾರೆ.
ಕಳೆದ 2023ರ ಚುನಾವಣೆ ಸಂದರ್ಭದಲ್ಲಿ ಉದ್ಯಮಿ ಸಂಜು ಸುಗುರೆಯಿಂದ ಶಾಸಕ ಸಲಗರ್ ಅವರು ಚುನಾವಣೆ ವೆಚ್ಚಕ್ಕೆಂದು 99 ಲಕ್ಷ ರೂ ಸಾಲ ಪಡೆದಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಹಣ ವಾಪಸ್ ಕೊಡಿ ಎಂದು ಮನೆಗೆ ಹೋದರೆ ಅವಾಚ್ಯ ಶಬ್ಧಗಳಿಂದ ಬೈದು ಧಮ್ಕಿ ಹಾಕಿದ್ದಾಗಿ ದೂರಿನಲ್ಲಿ ಉಲ್ಲೇಖ ಮಾಡಿದ್ದು, ಸೆಪ್ಟೆಂಬರ್.19ರಂದು ಶರಣು ಸಲಗರ್ ನೀಡಿದ ಚೆಕ್ ಬ್ಯಾಂಕಿಗೆ ಹಾಕಿದ್ರೆ ವಾಪಸ್ ಬಂದಿದೆ.
ಕರ್ನಾಟಕ ಬ್ಯಾಂಕ್ನಲ್ಲಿದ್ದ ಶಾಸಕರ ಖಾತೆ ಮುಚ್ಚಲ್ಪಟ್ಟಿದೆ ಎಂದು ಮಾಹಿತಿ ನೀಡಿದ್ದು, ಬಳಿಕ ಶಾಸಕರ ವಿರುದ್ಧ ಬೆಂಗಳೂರಿನ ಎಸಿಜೆಎಂ ಕೋರ್ಟ್ನಲ್ಲಿ ಸಂಜು ಸುಗುರೆ ದಾವೆ ಹೂಡಿದ್ದರು.
ಕೋರ್ಟ್ ಸೂಚನೆ ಮೇರೆಗೆ ಬಸವಕಲ್ಯಾಣ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಶಾಸಕರ ವಿರುದ್ಧ ದೂರು ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.
ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…
ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 12ರಂದು ದೆಹಲಿಗೆ…
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…