ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಎಫ್ಐಆರ್ ದಾಖಲಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ್ ಮಾಹಿತಿ ನೀಡಿದ್ದಾರೆ.
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಜೀವ ಬೆದರಿಕೆ ಹಾಕಿರುವುದಾಗಿ ಉದ್ಯಮಿ ವಿಜಯ್ ಟಾಟಾ ಎಂಬುವವರು ಎಫ್ಐಆರ್ ದಾಖಲಿಸಿದ್ದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ದಯಾನಂದ್ ಅವರು, ಪ್ರಕರಣ ಸಂಬಂಧ ಎಲ್ಲಾ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದೇನೆ. ಈ ಸಂಬಂಧ ನಿಷ್ಪಕ್ಷಪಾತ ತನಿಖೆ ನಡೆಸಲಾಗುವುದು. ಯಾರೇ ತಪ್ಪು ಮಾಡಿದ್ದರೂ ಅವರನ್ನು ಬಿಡುವ ಮಾತೇ ಇಲ್ಲ ಎಂದು ಎಚ್ಚರಿಕೆ ನೀಡಿದರು.
ಆಡುಗೋಡಿ ಸಿಎಆರ್ ಮೈದಾನದಲ್ಲಿ ಇಂದು ನಡೆದ ಮಾಸಿಕ ಸೇವಾ ಕವಾಯತು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅರ್ಜಿ ವಿಚಾರಣೆ ನಡೆಯುವ ಸಂದರ್ಭದಲ್ಲಿ ವರ್ಗಾವಣೆ ವಿಚಾರವಾಗಿ ಅನೇಕ ಸಿಬ್ಬಂದಿ ಕಚೇರಿಗೆ ಬರುತ್ತಿದ್ದಾರೆ. ಸೂಕ್ತ ಸಮಯದಲ್ಲಿ ನಾವೇ ವರ್ಗಾವಣೆ ಮಾಡುತ್ತೇವೆ. ಪ್ರತಿನಿತ್ಯ ಕಚೇರಿಗೆ ಸಿಬ್ಬಂದಿ ಬರುವುದರಿಂದ ಇದೇ ಕೆಲಸವಾಗಿ ಬಿಡುತ್ತದೆ. ಹೀಗಾಗಿ ಪೊಲೀಸ್ ಸಿಬ್ಬಂದಿ ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಇಲ್ಲವಾದರೆ ನಾನು ನಿಮ್ಮನ್ನು ಗಂಭೀರವಾಗಿ ತೆಗೆದುಕೊಂಡು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಸೂಚನೆ ನೀಡಿದ್ದಾರೆ.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…