ರಾಜ್ಯ

ನಿರ್ಮಲಾ, ಜೆ.ಪಿ.ನಡ್ಡಾ, ವಿಜಯೇಂದ್ರ ವಿರುದ್ಧ ಎಫ್‌ಐಆರ್‌ : ಜನಪ್ರತಿನಿಧಿಗಳ ನ್ಯಾಯಾಲಯ ಆದೇಶ

ಬೆಂಗಳೂರು: ಚುನಾವಣಾ ಬಾಂಡ್‌ಗಳ ಮೂಲಕ ಬಹುಕೋಟಿ ಸಂಸ್ಥೆಗಳಿಂದ ಸಾವಿರಾರು ಕೋಟಿ ರೂ.ಗಳನ್ನು ಲೂಟಿ ಮಾಡಿದ್ದಾರೆ ಎಂದು ಆರೋಪಿಸಿ ಜನಪರ ಸಂಘಟನೆಯೊಂದು ದಾಖಲಿಸಿದ್ದ ಪ್ರಕರಣದ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿ ನ್ಯಾಯಾಲಯ ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್‌, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಮಾಜಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ತನ್ನ ಆದೇಶದಲ್ಲಿ ತಿಳಿಸಿದೆ.

2018ರಲ್ಲಿ ಕೇಂದ್ರ ಸರ್ಕಾರ ಚುನಾವಣಾ ಬಾಂಡ್‌ಗಳ ಮೂಲಕ ಬೇರೆ ಬೇರೆ ಸಂಘ-ಸಂಸ್ಥೆಗಳಿಂದ, ನಾಗರಿಕರಿಂದ ದೇಣಿಗೆ ನೀಡುವ ಪದ್ಧತಿಯನ್ನು ಜಾರಿಗೊಳಿಸಿತ್ತು. ಚುನಾವಣೆ ಸಂದರ್ಭದಲ್ಲಿ ದೇಣಿಗೆಯ ರೂಪದಲ್ಲಿ ಸಂಗ್ರಹಿಸಲಾದ ಸಾವಿರಾರು ಕೋಟಿ ರೂ.ಗಳನ್ನು ಲೂಟಿ ಮಾಡಲಾಗಿದೆ ಎಂದು ಆರೋಪಿಸಿ ಜನಾಧಿಕಾರ ಸಂಘರ್ಷ ಸಂಘಟನೆಯ ಮುಖಂಡ ಆದರ್ಶ ಆರ್‌.ಐಯ್ಯರ್‌ ಎಂಬುವವರು ನ್ಯಾಯಾಲಯದಲ್ಲಿ ನಾಗರೀಕ ಹಕ್ಕುಗಳ ಸಂರಕ್ಷಣಾ ಕಾಯ್ದೆಯಡಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದರು.

ವಿವಿಧ ಸಂಘ ಸಂಸ್ಥೆಗಳಿಂದ ಬಾಂಡ್‌ಗಳ ಹೆಸರಿನಲ್ಲಿ ಬಿಜೆಪಿಗೆ ಅತಿ ಹೆಚ್ಚು ದೇಣಿಗೆ ಬಂದಿದ್ದು, ಅದೆಲ್ಲವೂ ಬೇನಾಮಿ ಹಣವಾಗಿದೆ. ಇದರಲ್ಲಿ ಸುಮಾರು 8,000 ಕೋಟಿ ರೂ.ಗಳನ್ನು ಲೂಟಿ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಈ ವಿಚಾರವಾಗಿ ಅಯ್ಯರ್‌ ಅವರು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್‌, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಮಾಜಿ ಬಜೆಪಿ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ವಿರುದ್ಧ ತನಿಖೆ ನಡೆಸುವಂತೆ ನ್ಯಾಯಾಲಯಕ್ಕೆ ಅರ್ಜಿ ಕೋರಿದ್ದರು. ಆದರ್ಶ ಅಯ್ಯರ್‌ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ಕೋರ್ಟ್‌ ಬಿಜೆಪಿ ನಾಯಕರ ವಿರುದ್ಧ ಎಫ್‌ಐಆರ್‌ ದಾಖಲಿಸಲು ಅನುಮತಿ ನೀಡಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

7 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

15 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

15 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

15 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

18 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

18 hours ago