Mysore
17
clear sky

Social Media

ಗುರುವಾರ, 29 ಜನವರಿ 2026
Light
Dark

ಮಹಮ್ಮದ್‌ ಪೈಗಂಬರ್‌ ಬಗ್ಗೆ ಅವಹೇಳನಕಾರಿ ಹೇಳಿಕೆ: ಶಾಸಕ ಯತ್ನಾಳ್‌ ಎಫ್‌ಐಆರ್‌ ದಾಖಲು

ವಿಜಯಪುರ: ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ಮಹಮ್ಮದ್‌ ಪೈಗಂಬರ್‌ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪ ಕೇಳಿ ಬಂದಿರುವ ಹಿನ್ನೆಲೆ ಗೋಲ್‌ ಗುಂಬಜ್‌ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಹುಬ್ಬಳ್ಳಿಯಲ್ಲಿ ಏಪ್ರಿಲ್‌.7ರಂದು ಬಾಣಿ ಓಣಿಯಲ್ಲಿ ನಡೆದ ರಾಮನವಮಿ ಕಾರ್ಯಕ್ರಮದಲ್ಲಿ ಯತ್ನಾಳ್‌ ಅವರು, ಇಸ್ಲಾಂ ಧರ್ಮದ ಪ್ರವಾದಿ ಮಹಮ್ಮದ್‌ ಪೈಗಂಬರ್‌ ಬಗ್ಗೆ ಪ್ರಚೋದನಕಾರಿ ಹಾಗೂ ಅವಹೇಳನಕಾರಿ ಹೇಳಿಕೆ ನೀಡಿದ್ದರೆಂದು ಆರೋಪಿಸಿ ವಿಜಯಪುರ ಗೋಲ್‌ ಗುಂಜ್‌ ಪೊಲೀಸ್‌ ಠಾಣೆಯಲ್ಲಿ ಮೊಹಮ್ಮದ್‌ ಹನ್ನಾನ್‌ ಎಂಬುವವರು ದೂರು ದಾಖಲಿಸಿದ್ದಾರೆ.

ಶಾಸಕ ಯತ್ನಾಳ್‌ ಅವರು ಹೇಳಿದ್ದೇನು?

ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ತಮ್ಮ ಭಾಷಣದಲ್ಲಿ ದಿ.ಬಾಬಾ ಸಾಹೇಬ್‌ ಠಾಕ್ರೆ ನಿವಾಸದಲ್ಲಿ ಮಹಮ್ಮದ್‌ ಪೈಗಂಬರ್‌ ಜನಿಸಿದ್ದಾರೆ ಎಂದು ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಹೇಳಿಕೆಯೂ ಮುಸಲ್ಮಾನರ ಧಾರ್ಮಿಕ ಭಾವವನೆಗಳಿಗೆ ತೀವ್ರ ಆಘಾತ ಉಂಟು ಮಾಡಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

Tags:
error: Content is protected !!