ರಾಜ್ಯ

ಕನ್ನಡ ಬೋರ್ಡ್‌ ಕಡ್ಡಾಯ ಧರಣಿ: 15 ಕರವೇ ಕಾರ್ಯಕರ್ತರ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರಿನಲ್ಲಿನ ಮಾಲ್‌ ಹಾಗೂ ವಿವಿಧ ಶಾಪ್‌ಗಳಲ್ಲಿ ಕನ್ನಡಕ್ಕಿಂತ ಹೆಚ್ಚಾಗಿ ಆಂಗ್ಲ ಭಾಷೆಯ ಬೋರ್ಡ್‌ಗಳು ಇರುವ ಕಾರಣ ಸಿಡಿದೆದ್ದಿದ್ದ ಕನ್ನಡ ಪರ ಸಂಘಟನೆಗಳು ಇಂದು ( ಡಿಸೆಂಬರ್‌ 27 ) ಕನ್ನಡ ಫಲಕಗಳನ್ನು ಕಡ್ಡಾಯವಾಗಿ ಬಳಸಬೇಕು ಎಂದು ಕನ್ನಡ ಜಾಗೃತಿ ಅಭಿಯಾನವನ್ನು ಹಮ್ಮಿಕೊಂಡಿದ್ದವು.

ಈ ಅಭಿಯಾನದಡಿಯಲ್ಲಿ ಕರವೇ ಕಾರ್ಯಕರ್ತರು ಹಲವೆಡೆ ಆಂಗ್ಲ ಭಾಷೆಯಲ್ಲಿದ್ದ ಬೋರ್ಡ್‌ಗಳನ್ನು ಒಡೆದು ಹಾಕುವ ಮೂಲಕ ಆಕ್ರೋಶ ಹೊರಹಾಕಿದ್ದರು. ಈ ವೇಳೆ ನಗರದ ಲಾವೆಲ್ಲೆ ರಸ್ತೆಯಲ್ಲಿ ಬೋರ್ಡ್‌ಗಳನ್ನು ಒಡೆದು ಹಾಕಿದ ಕಾರಣ 15 ಕರವೇ ಕಾರ್ಯಕರ್ತರ ವಿರುದ್ಧ ಕಬ್ಬನ್‌ ಪಾರ್ಕ್‌ ಪೊಲೀಸ್‌ ಠಾಣೆಯಲ್ಲಿ ಐಪಿಸಿ ಸೆಕ್ಷನ್‌ 504, 506, 143, 147, 427, RW 41 ಹಾಗೂ PDLP Act 2a ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಸದ್ಯ ಎಲ್ಲಾ 15 ಕರವೇ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನು ಕಾರ್ಯಕರ್ತರನ್ನು ಬಂಧಿಸಿರುವುದನ್ನು ಖಂಡಿಸಿ ಇತರೆ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಅತ್ತ ಸಿಎಂ ಸಿದ್ದರಾಮಯ್ಯ ಕಾರ್ಯಕರ್ತರ ಮೇಲೆ ಕಠಿಣ ಕ್ರಮ ಕೈಗೊಳ್ಳಬಾರದು ಎಂದು ಹೇಳಿದ್ದೇನೆ ಎಂದು ಸಂಜೆಯೇ ಹೇಳಿಕೆ ನೀಡಿದ್ದಾರೆ.

andolana

Recent Posts

ಸೆಲ್ಫಿ ವಿಡಿಯೋ ಮಾಡಿ ಆಟೋ ಚಾಲಕ ಆತ್ನಹತ್ಯೆಗೆ ಯತ್ನ

ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…

2 hours ago

ಮಂಡ್ಯದಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…

4 hours ago

ರಾಜ್ಯದಲ್ಲಿ ಮೂರು ದಿನ ದಟ್ಟ ಮಂಜು ಕವಿದ ವಾತಾವರಣ: ತೀವ್ರ ಚಳಿ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…

4 hours ago

ಯೂರಿಯಾ ಗೊಬ್ಬರ ತಿಂದು 11 ಮೇಕೆಗಳು ಸಾವು

ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…

4 hours ago

ಚಾಮರಾಜನಗರ| ಹುಚ್ಚುನಾಯಿ ದಾಳಿಯಿಂದ 7 ಮಂದಿಗೆ ಗಾಯ

ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…

5 hours ago

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…

5 hours ago