ಬೆಂಗಳೂರು: ಸ್ಯಾಂಡಲ್ವುಡ್ ನಟ ಧ್ರುವಸರ್ಜಾ ವಿರುದ್ಧ 3 ಕೋಟಿ ರೂಪಾಯಿಗಳ ವಂಚನೆ ಆರೋಪ ಕೇಳಿಬಂದಿದೆ.
ಜಗ್ಗುದಾದ ಸಿನಿಮಾದ ನಿರ್ದೇಶಕ ಹಾಗೂ ನಿರ್ಮಾಪಕ ರಾಘವೇಂದ್ರ ಹೆಗ್ಡೆ ನಟ ಧ್ರುವಸರ್ಜಾ ವಿರುದ್ಧ ದೂರು ನೀಡಿದ್ದಾರೆ. ಈ ಸಂಬಂಧ ತಮಗೆ ವಂಚನೆ ಆಗಿದೆ ಎಂದು ಮುಂಬೈನ ಅಂಬೋಲಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಈ ದೂರು ಆಧರಿಸಿ ಎಫ್ಐಆರ್ ದಾಖಲು ಮಾಡಲಾಗಿದೆ.
3 ಕೋಟಿ ರೂಪಾಯಿ ವಂಚನೆ ಪ್ರಕರಣ ಇದಾಗಿದ್ದು, ಬಡ್ಡಿ ಸೇರಿದಂತೆ ಆ ಹಣ ಈಗ 9 ಕೋಟಿ ರೂಪಾಯಿ ಆಗಿದೆ ಎಂದು ರಾಘವೇಂದ್ರ ಹೆಗ್ಡೆ ಗಂಭೀರ ಆರೋಪ ಮಾಡಿದ್ದಾರೆ.
ಹೊಸ ಸಿನಿಮಾದ ಶೂಟಿಂಗ್ಗೆ ಬರುವುದಾಗಿ 3.15 ಕೋಟಿ ಅಡ್ವಾನ್ಸ್ ಹಣ ಪಡೆದು ಶೂಟಿಂಗ್ಗೆ ಬರಲಿಲ್ಲ ಎಂಬ ಆರೋಪ ಕೇಳಿಬಂದಿದೆ. ಜೊತೆಗೆ ಸ್ಕ್ಪಿಪ್ಟ್ ರೈಟರ್ಗಳಿಗೂ ಧ್ರುವ ಸರ್ಜಾ ಹಣ ಕೊಡಿಸಿದ್ದರಂತೆ. ಇದನ್ನು ಸೇರಿದರೆ ರಾಘವೇಂದ್ರ ಅವರ ಕೈಯಿಂದ 3.43 ಕೋಟಿ ರೂಪಾಯಿ ಹಣ ನೀಡಿದ್ದರು ಎನ್ನಲಾಗಿದೆ.
ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಹಲವು ಲಿಂಗಾಯತ ಮಠಗಳಿಗೆ ಮುಖ್ಯಮಂತ್ರಿ ಡಿಕೆಶಿ ಅವರು ಆಪ್ಯಾಯಮಾನ ಕರ್ನಾಟಕದಲ್ಲಿ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಲು…
ಭೇರ್ಯ ಮಹೇಶ್ ಕೆ.ಆರ್.ನಗರ: ಧರ್ಮಸ್ಥಳ ಸಂಸ್ಥೆಯಿಂದ ಕೆರೆ ಅಭಿವೃದ್ಧಿ; ಗ್ರಾಮಸ್ಥರು, ರೈತರಿಂದಲೂ ಸಹಕಾರ ಕೆ.ಆರ್.ನಗರ: ಹೂಳು ತುಂಬಿ ಅವನತಿಯ ಹಾದಿ…
ಆನಂದ್ ಹೊಸೂರು ಕಬ್ಬಿಗೆ ಕಾರ್ಖಾನೆಗಳಿಂದ ಬೇಡಿಕೆಯಿದ್ದರೂ ರೈತರಿಗೆ ದುಬಾರಿ ಸಾಗಣೆ ವೆಚ್ಚ ಭರಿಸುವ ಅನಿವಾರ್ಯತೆ ಹೊಸೂರು: ಮಾಜಿ ಶಾಸಕ ದಿವಂಗತ…
ಮುಳ್ಳೂರು ನಾಗರಾಜ ಕಾವ್ಯ ಪ್ರಶಸ್ತಿ, ರಾಜಶೇಖರ ಕೋಟಿ ನೆನಪು ಕಾರ್ಯಕ್ರಮ ಪತ್ರಿಕಾರಂಗ ಸೇರಿ ಬಹುತೇಕ ಕ್ಷೇತ್ರಗಳಿಗೆ ಕೋಟಿ ಕೊಡುಗೆ:ಮಹದೇವಸ್ವಾಮಿ ಮೈಸೂರು:…