Anantkumar Hegde
ಬೆಂಗಳೂರು: ಕಾರು ಓವರ್ ಟೇಕ್ ಮಾಡಿದ್ದಕ್ಕೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ಸೇರಿದಂತೆ ಮೂವರ ವಿರುದ್ಧ ದಾಬಸ್ಪೇಟೆಯಲ್ಲಿ ಪ್ರಕರಣ ದಾಖಲಾಗಿದೆ.
ಓವರ್ ಟೇಕ್ ಮಾಡುವ ವಿಚಾರವಾಗಿ ನೆಲಮಂಗಲದ ಹಳೇ ನಿಜಗಲ್ ಬಳಿ ಕಾರು ಅಡ್ಡಗಟ್ಟಿ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದ್ದು, ಸಲ್ಮಾನ್, ಸೈಫ್, ಇಲಿಯಾಜ್, ಗುಲಷಿರ್ ಉನ್ನೀಸಾ ಎಂಬುವವರು ದೂರು ದಾಖಲಿಸಿದ್ದಾರೆ. ಈ ಬೆನ್ನಲ್ಲೇ ಹೆಗಡೆ ಕಾರಿನಲ್ಲಿದ್ದ ನಾಲ್ವರನ್ನೂ ನೆಲಮಂಗಲ ಡಿವೈಎಸ್ಪಿ ಕಚೇರಿಯಲ್ಲಿ ವಿಚಾರಣೆ ನಡೆಸಲಾಗಿದೆ.
ಅನಂತ್ ಕುಮಾರ್ ಹೆಗಡೆ ಅವರಿಗೆ ಬೆದರಿಕೆ ಇರುವ ಕಾರಣ ಗನ್ ತೆಗೆದಿರೋದಾಗಿ ಗನ್ಮ್ಯಾನ್ ಶ್ರೀಧರ್ ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ. ದಾಬಸ್ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾಜಿ ಸಂಸದರು ಪ್ರಕರಣದಲ್ಲಿ ಭಾಗಿಯಾಗಿದ್ದ ಸುದ್ದಿ ಹರಡುತ್ತಿದ್ದಂತೆ ಪೊಲೀಸ್ ಠಾಣೆಯಲ್ಲಿ ಜನಸಮೂಹ ಜಮಾಯಿಸಿತ್ತು.
ಈ ಬಗ್ಗೆ ಮಾಹಿತಿ ನೀಡಿರುವ ಬೆಂಗಳೂರು ಗ್ರಾಮಾಂತರ ಎಸ್ಪಿ ಸಿ.ಕೆ.ಬಾಬಾ ಅವರು, ಅನಂತ್ ಕುಮಾರ್ ಹೆಗಡೆ ಸೇರಿದಂತೆ ಮೂವರ ಮೇಲೆ ಎಫ್ಐಆರ್ ದಾಖಲಾಗಿದೆ. ಎ.1 ಅನಂತ್ ಕುಮಾರ್, ಎ2 ಗನ್ ಮ್ಯಾನ್, ಎ3 ಚಾಲಕ ಆರೋಪಿಗಳಾಗಿದ್ದಾರೆ. ತನಿಖೆ ಮಾಡಿ ಅಗತ್ಯವಿದ್ದರೆ ಬಂಧಿಸುತ್ತೇವೆ. ಇದರೊಂದಿಗೆ ಗಾಯಾಳುಗಳ ಹೇಳಿಕೆ ಪಡೆದು ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ಮಾಹಿತಿ ನೀಡಿದ್ದಾರೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…