ರಾಜ್ಯ

ಮಾಜಿ ಸಂಸದ ಅನಂತ್‌ ಕುಮಾರ್‌ ಹೆಗಡೆ ಸೇರಿದಂತೆ ಮೂವರ ವಿರುದ್ಧ ಎಫ್‌ಐಆರ್‌

ಬೆಂಗಳೂರು: ಕಾರು ಓವರ್‌ ಟೇಕ್‌ ಮಾಡಿದ್ದಕ್ಕೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಾಜಿ ಸಂಸದ ಅನಂತ್‌ ಕುಮಾರ್‌ ಹೆಗಡೆ ಸೇರಿದಂತೆ ಮೂವರ ವಿರುದ್ಧ ದಾಬಸ್‌ಪೇಟೆಯಲ್ಲಿ ಪ್ರಕರಣ ದಾಖಲಾಗಿದೆ.

ಓವರ್‌ ಟೇಕ್‌ ಮಾಡುವ ವಿಚಾರವಾಗಿ ನೆಲಮಂಗಲದ ಹಳೇ ನಿಜಗಲ್‌ ಬಳಿ ಕಾರು ಅಡ್ಡಗಟ್ಟಿ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದ್ದು, ಸಲ್ಮಾನ್‌, ಸೈಫ್‌, ಇಲಿಯಾಜ್‌, ಗುಲಷಿರ್‌ ಉನ್ನೀಸಾ ಎಂಬುವವರು ದೂರು ದಾಖಲಿಸಿದ್ದಾರೆ. ಈ ಬೆನ್ನಲ್ಲೇ ಹೆಗಡೆ ಕಾರಿನಲ್ಲಿದ್ದ ನಾಲ್ವರನ್ನೂ ನೆಲಮಂಗಲ ಡಿವೈಎಸ್‌ಪಿ ಕಚೇರಿಯಲ್ಲಿ ವಿಚಾರಣೆ ನಡೆಸಲಾಗಿದೆ.

ಅನಂತ್‌ ಕುಮಾರ್‌ ಹೆಗಡೆ ಅವರಿಗೆ ಬೆದರಿಕೆ ಇರುವ ಕಾರಣ ಗನ್‌ ತೆಗೆದಿರೋದಾಗಿ ಗನ್‌ಮ್ಯಾನ್‌ ಶ್ರೀಧರ್‌ ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ. ದಾಬಸ್‌ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾಜಿ ಸಂಸದರು ಪ್ರಕರಣದಲ್ಲಿ ಭಾಗಿಯಾಗಿದ್ದ ಸುದ್ದಿ ಹರಡುತ್ತಿದ್ದಂತೆ ಪೊಲೀಸ್‌ ಠಾಣೆಯಲ್ಲಿ ಜನಸಮೂಹ ಜಮಾಯಿಸಿತ್ತು.

ಈ ಬಗ್ಗೆ ಮಾಹಿತಿ ನೀಡಿರುವ ಬೆಂಗಳೂರು ಗ್ರಾಮಾಂತರ ಎಸ್‌ಪಿ ಸಿ.ಕೆ.ಬಾಬಾ ಅವರು, ಅನಂತ್‌ ಕುಮಾರ್‌ ಹೆಗಡೆ ಸೇರಿದಂತೆ ಮೂವರ ಮೇಲೆ ಎಫ್‌ಐಆರ್‌ ದಾಖಲಾಗಿದೆ. ಎ.1 ಅನಂತ್‌ ಕುಮಾರ್‌, ಎ2 ಗನ್‌ ಮ್ಯಾನ್‌, ಎ3 ಚಾಲಕ ಆರೋಪಿಗಳಾಗಿದ್ದಾರೆ. ತನಿಖೆ ಮಾಡಿ ಅಗತ್ಯವಿದ್ದರೆ ಬಂಧಿಸುತ್ತೇವೆ. ಇದರೊಂದಿಗೆ ಗಾಯಾಳುಗಳ ಹೇಳಿಕೆ ಪಡೆದು ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ಮಾಹಿತಿ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

13 hours ago

ಕೆಎಸ್‌ಓಯುಗೆ ನೂತನ ಕುಲಪತಿಯಾಗಿ ಡಾ.ಜ್ಞಾನ ಪ್ರಕಾಶ್ ನೇಮಕ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…

13 hours ago

ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…

15 hours ago

ಮಾಜಿ ಸಿಎಂ ದೇವರಾಜ ಅರಸು ನೂತನ ಪ್ರತಿಮೆ ಅನಾವರಣ

ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…

15 hours ago

ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟ್: ಮೂವರು ಸಿಎಂಗಳಿಂದ ಲೋಕಾರ್ಪಣೆ

ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್‌ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…

16 hours ago

ಮಾವು ಬೆಳೆಗಾರರ ನೆರವಿಗೆ ಬಂದ ಕೇಂದ್ರ ಸರ್ಕಾರ: ತೋತಾಪುರಿಯ ಒಂದು ಕ್ವಿಂಟಲ್‌ಗೆ ₹1,750 ನಿಗದಿ

ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…

16 hours ago