ಯಾದಗಿರಿ: ಗಣೇಶ ವಿಸರ್ಜನೆ ಶೋಭಾಯಾತ್ರೆ ಮೆರವಣಿಗೆ ವೇಳೆ ಪ್ರಚೋದನಕಾರಿ ಹೇಳಿಕೆ ನೀಡಿದ್ದ ಆರೋಪದಡಿ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಸೆಪ್ಟೆಂಬರ್.21ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಶೋಭಾಯಾತ್ರೆಯಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಭಾಗಿಯಾಗಿದ್ದರು. ಈ ವೇಳೆ ಅನ್ಯಕೋಮಿನ ಜನಾಂಗದ ಬಗ್ಗೆ ಪ್ರಚೋದನಕಾರಿ ಹೇಳಿಕೆ ನೀಡಿದ್ದರು.
ಗಣೇಶ ವಿಸರ್ಜನೆ ವೇಳೆ ಎಲ್ಲಾ ಕಡೆ ಕಲ್ಲು ತೂರುವ ಪ್ರವೃತ್ತಿ ಕಾಣಿಸುತ್ತಾ ಇದೆ. ಕಲ್ಲು ಹೊಡೆಯುವ ಪ್ರವೃತ್ತಿ ಅವರಿಗೆ ಯಾಕೆ ಬರುತ್ತೆ? ಹಿಂದುಗಳು ಕೈಯಲ್ಲಿ ಕಲ್ಲು ಹಿಡಿದುಕೊಂಡರೆ ನಿಮ್ಮ ಕಥೆ ಏನಾಗುತ್ತದೆ ಎಂದು ಪ್ರಶ್ನೆ ಮಾಡಿದ್ದಾರೆ.
ನ್ಯೂಕ್ಲಿಯರ್ ಬಾಂಬ್ ಮಾಡಿದ ಹಿಂದುಗಳಿಗೆ ಪೆಟ್ರೋಲ್ ಬಾಂಬ್ ಮಾಡೋಕೆ ಬರಲ್ವಾ ಎಂದು ಪ್ರಚೋದನಕಾರಿ ಹೇಳಿಕೆ ನೀಡಿದ್ದರು.
ಈ ಹಿನ್ನೆಲೆಯಲ್ಲಿ ಧಾರ್ಮಿಕ ನಂಬಿಕೆಗಳಿಗೆ ದ್ವೇಷ ಭಾವನೆಯಿಂದ ಮಾತನಾಡಿದ್ದಾರೆ ಎಂದು ಆರೋಪಿಸಿ ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರಬೆಟ್ಟ ಕಾಡಂಚಿನ ಇಂಡಿಗನತ್ತ–ನಾಗಮಲೆ ಗ್ರಾಮದಲ್ಲಿ ಚಿರತೆ ದಾಳಿಗೆ ಬಾಲಕ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ಹುಂಡಿ…
ಬೆಂಗಳೂರು: ವೈದ್ಯಕೀಯ ಕಾಲೇಜುಗಳಿಗೆ ಪರೀಕ್ಷೆ ನಡೆಸುವ ಸಿಇಟಿ ವ್ಯವಸ್ಥೆಯನ್ನು ನಡೆಸಲು ರಾಜ್ಯಗಳಿಗೇ ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದರು.…
ಕಾಂಗೋ: ಆಫ್ರಿಕಾದ ಕಾಂಗೋದಲ್ಲಿ ಎಬೋಲಾ ಮಾರಣಾಂತಿಕ ಸೋಂಕಿನಿಂದ ಉಂಟಾದ ಸಾವಿನ ಸಂಖ್ಯೆ 136ಕ್ಕೆ ಏರಿದೆ. ಈ ಬಗ್ಗೆ ವಿಶ್ವ ಆರೋಗ್ಯ…
ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮೇ.25ರವರೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ…
ನವದೆಹಲಿ: ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಸಂಬಂಧ ಸುಪ್ರಿಂಕೋರ್ಟ್ ಮುಂದಿನ ಅರ್ಜಿ ವಿಚಾರಣೆಯನ್ನು…