ರಾಜ್ಯ

ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ; ಕಲ್ಲಡ್ಕ ಪ್ರಭಾಕರ ಭಟ್‌ ವಿರುದ್ಧ ಎಫ್‌ಐಆರ್‌

ಭಾನುವಾರ ಮಂಡ್ಯದಲ್ಲಿ ನಡೆದ ಹನುಮ ಸಂಕೀರ್ತನಾ ಯಾತ್ರೆಯಲ್ಲಿ ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್‌ ಭಟ್‌ ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದು, ಹಲವೆಡೆ ಭಾರೀ ವಿರೋಧ ಹಾಗೂ ಆಕ್ರೋಶ ವ್ಯಕ್ತವಾಗಿದೆ.

ಶ್ರೀರಂಗಪಟ್ಟಣ ಪೊಲೀಸ್‌ ಠಾಣೆಯಲ್ಲಿ ಹೋರಾಟಗಾರ್ತಿ ನಜ್ಮಾ ನಝೀರ್‌ ಎಂಬುವವರು ಕಲ್ಲಡ್ಕ ಪ್ರಭಾಕರ್‌ ಭಟ್‌ ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ, ಧರ್ಮಗಳ ನಡುವೆ ಗಲಭೆ ಹಾಗೂ ಅಶಾಂತಿ ಸೃಷ್ಠಿಸುವ ಹಾಗೆ ಮಾತಾನಾಡಿ ನ್ಯಾಯಾಂಗ ವ್ಯವಸ್ಥೆಯನ್ನೂ ಸಹ ಅಣಕಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ದೂರಿನ ಮೇರೆ ಕಲ್ಲಡ್ಕ ಪ್ರಭಾಕರ್‌ ಭಟ್‌ ಹಾಗೂ ಇತರರ ವಿರುದ್ಧ ಐಪಿಸಿ ಸೆಕ್ಷನ್‌ 354, 294, 509, 506, 153A, 295, 295A ಹಾಗೂ 298 ಅಡಿಯಲ್ಲಿ ಜಾಮೀನುರಹಿತ ಎಫ್‌ಐಆರ್‌ ದಾಖಲಾಗಿದೆ.

ಪ್ರಭಾಕರ್‌ ಅವರ ವಿರುದ್ಧ ಈ ಹಿಂದೆಯೂ ಇಂತಹ ಹಲವು ದೂರುಗಳು ದಾಖಲಾಗಿದ್ದು, ಹೀಗಾಗಿ ಅವರ ವಿರುದ್ಧ ರೌಡಿಶೀಟ್‌ ತೆರೆಯಬೇಕು ಎಂದು ದೂರಿನಲ್ಲಿ ನಜ್ಮಾ ನಝೀರ್‌ ಒತ್ತಾಯಿಸಿದ್ದಾರೆ.

ಕಲ್ಲಡ್ಕ ಪ್ರಭಾಕರ್‌ ಭಟ್‌ ಹೇಳಿಕೆಯೇನು?

ಕಲ್ಲಡ್ಕ ಪ್ರಭಾಕರ್‌ ಭಟ್‌ ಮಂಡ್ಯದಲ್ಲಿ ಮಾತನಾಡಿದ್ದಾಗ “ಹಿಂದೆ ತಲಾಖ್‌ ತಲಾಖ್‌ ಎಂದು ಹೇಳಿ ಕೈತೊಳೆದುಕೊಳ್ಳುತ್ತಿದ್ದರು. ದಿನಕ್ಕೊಬ್ಬ ಗಂಡ ಬದಲಾಗ್ತಿದ್ದ. ನಿಮಗೆ ಪರ್ಮನೆಂಟ್‌ ಗಂಡನನ್ನು ಕೊಟ್ಟಿದ್ದು ಮೋದಿ ಸರ್ಕಾರ. ತಲಾಖ್‌ ರದ್ದು ಮಾಡಿ ನಿಮಗೆ ಗೌರವ ಕೊಟ್ಟದ್ದು ಇದೇ ಹಿಂದೂ ಧರ್ಮ” ಎಂದು ಹೇಳಿಕೆ ನೀಡಿದ್ದರು.

andolana

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

12 mins ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

16 mins ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

21 mins ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

26 mins ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

34 mins ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago