ರಾಜ್ಯ

ಮಹೇಶ್‌ ಶೆಟ್ಟಿ ತಿಮರೋಡಿ ವಿರುದ್ಧ ಎಫ್‌ಐಆರ್‌ ದಾಖಲು

ಮಂಗಳೂರು: ಯಕ್ಷಗಾನ ಕಲಾವಿದರಿಗೆ ಬೆದರಿಕೆ ಹಾಕಿದ ಆರೋಪದಡಿ ಮಹೇಶ್‌ ಶೆಟ್ಟಿ ತಿಮರೋಡಿ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಬುರುಡೆ ಗ್ಯಾಂಗ್‌ ಹೆಸರಿನ ಯಕ್ಷಗಾನ ಪ್ರಸಂಗಕ್ಕೆ ಸಂಬಂಧಿಸಿದಂತೆ ತಮ್ಮ ಹೋರಾಟವನ್ನು ಅಪಹಾಸ್ಯ ಮಾಡುತ್ತಿದ್ದಾರೆ ಎಂದು ಮಹೇಶ್‌ ಶೆಟ್ಟಿ ತಿಮರೋಡಿ ಯಕ್ಷಗಾನ ಕಲಾವಿದರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿ, ಬೆದರಿಕೆ ಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ಪುತ್ತೂರು ಮಹಿಳಾ ಮತ್ತು ಗ್ರಾಮಾಂತರ ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

ಕಲಾವಿದ ಸುಂದರ ರೈ ನೀಡಿದ ದೂರಿನಡಿ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ತಿಮರೋಡಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

 

ಆಂದೋಲನ ಡೆಸ್ಕ್

Recent Posts

ಶಾಸಕ ವಿನಯ್‌ ಕುಲಕರ್ಣಿ ಸೇರಿ 17 ಅಪರಾಧಿಗಳಿಗೆ ನಾಳೆ ಶಿಕ್ಷೆ ಪ್ರಮಾಣ ಪ್ರಕಟ: ಆದೇಶ ಕಾಯ್ದಿರಿಸಿದ ಕೋರ್ಟ್‌

ಬೆಂಗಳೂರು: ಧಾರವಾಡದ ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದ ಅಪರಾಧಿಗಳಿಗೆ ವಿಶೇಷ ನ್ಯಾಯಾಲಯ ನಾಳೆ ಶಿಕ್ಷೆಯ…

17 mins ago

ಎಚ್.ಡಿ.ಕೋಟೆ| ಕಾಡಾನೆ ದಾಳಿ: ಮಹಿಳೆ ಸ್ಥಿತಿ ಗಂಭೀರ

ಮಂಜು ಕೋಟೆ: ಎಚ್.ಡಿ.ಕೋಟೆ ತಾಲ್ಲೂಕು ವರದಿಗಾರರು  ಎಚ್.ಡಿ.ಕೋಟೆ: ಜಮೀನಿಗೆ ಸೌದೆ ತರಲು ಹೋದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ…

25 mins ago

ಬೆಂಗಳೂರಿನಲ್ಲಿ 11.86 ಕೋಟಿ ರೂ ಮೌಲ್ಯದ ಮಾದಕ ವಸ್ತು ಜಪ್ತಿ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪೊಲೀಸರು 11.86 ಕೋಟಿ ರೂ ಮೌಲ್ಯದ ಮಾದಕವಸ್ತು ಜಪ್ತಿ ಮಾಡಿ ಇಬ್ಬರು ವಿದೇಶಿ ಮಹಿಳೆಯರು…

2 hours ago

ಸಂಸತ್‌ ವಿಶೇಷ ಅಧಿವೇಶನ: ಮೂರು ಮಹತ್ವದ ಮಸೂದೆ ಮಂಡನೆ

ನವದೆಹಲಿ: ಇಂದಿನಿಂದ ಆರಂಭವಾಗಿರುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಕೇಂದ್ರ ಸರ್ಕಾರವು ಮೂರು ಪ್ರಮುಖ ಮಸೂದೆಗಳನ್ನು ಮಂಡಿಸಿದೆ. ಸಂವಿಧಾನದ ತಿದ್ದುಪಡಿ ಮಸೂದೆ-2026,…

3 hours ago

ಪಶ್ಚಿಮಘಟ್ಟಗಳನ್ನು ಭವಿಷ್ಯದ ಪೀಳಿಗೆಯ ಜೀವನಾಡಿಯಾಗಿ ನೋಡಬೇಕು: ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ಪ್ರಕೃತಿ, ಪರಿಸರ ಸಂರಕ್ಷಣೆ ಹಾಗೂ ಹಸಿರು ಹೊದಿಕೆ ಹೆಚ್ಚಳದಲ್ಲಿ ಸುಸ್ಥಿರ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಪಾತ್ರ ಹಿರಿದಾಗಿದೆ ಎಂದು…

3 hours ago

ಲೋಕಸಭೆಯಲ್ಲಿ ಮಹತ್ವದ ಕ್ಷೇತ್ರ ಮರುವಿಂಗಡಣೆ ಮಸೂದೆ ಮಂಡನೆ

ನವದೆಹಲಿ: ಕೇಂದ್ರ ಸಚಿವ ಅರ್ಜುನ್‌ ರಾಮ್‌ ಮೇಘವಾಲ್‌ ಅವರು ಇಂದು ಲೋಕಸಭೆಯಲ್ಲಿ ಕ್ಷೇತ್ರ ಮರುವಿಂಗಡಣೆ ಮಸೂದೆ 2026ನ್ನು ಮಂಡಿಸಿದರು. ಈ…

3 hours ago