Kalladka Prabhakar Bhat
ಮಂಗಳೂರು: ಪ್ರಚೋದನಾಕಾರಿ ಭಾಷಣದ ಆರೋಪದ ಹಿನ್ನೆಲೆಯಲ್ಲಿ ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಸೇರಿದಂತೆ 15 ಹಿಂದೂ ಕಾರ್ಯಕರ್ತರ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಲ್ಲಡ್ಕ ಪ್ರಭಾಕರ್ ಭಟ್ ಜೊತೆಗೆ ಪ್ರಮೋದ್ ರೈ ನಂದುಗುರಿ, ತಿಲಕ್ ನಂದುಗುರಿ, ಮೋಹನ ಕೆರೆಕೋಡಿ, ಚಂದ್ರಶೇಖರ ನೂಜಿಬಾಳ್ತಿಲ, ಮಹೇಶ್ ಕುಟ್ರುಪ್ಪಾಡಿ, ಡೀಕಯ್ಯ ನೂಜಿಬಾಳ್ತಿಲ, ಸುಜಿತ್ ಕುಟ್ರುಪ್ಪಾಡಿ, ಶರತ್ ನಂದುಗುರಿ, ಶ್ರೇಯತ್, ನಂದುಗುರಿ, ಉಮೇಶ್ ನೂಜಿಬಾಳ್ತಿಲ, ರಾದಾಕೃಷ್ಣ. ಕೆ, ಜಯಂತ್ ಮತ್ತು ಇತರೆ ಮೂವರ ಮೇಲೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಬಜ್ಪೆಯಲ್ಲಿ ಹತ್ಯೆಯಾದ ಸುಹಾಸ್ ಶೆಟ್ಟಿ ಶ್ರದ್ದಾಂಜಲಿ ಕಾರ್ಯಕ್ರಮದಲ್ಲಿ ಮೇ.12ರಂದು ಬಂಟ್ವಾಳದ ಕಾವಳಪಡೂರು ಗ್ರಾಮದ ಮದುವೆ ಪ್ಯಾಲೇಸ್ ಹಾಲ್ನಲ್ಲಿ ಸಮಾಜದ ಸ್ವಾಸ್ಥ್ಯ ಕೆಡುವುದು ಮತ್ತು ಗುಂಪುಗಳ ನಡುವೆ ದ್ವೇಷ ಬಿತ್ತುವಂತೆ ಕಲ್ಲಡ್ಕ ಪ್ರಭಾಕರ ಭಟ್ ಪ್ರಚೋದನಾಕಾರಿ ಹೇಳಿಕೆ ನೀಡಿರುವ ಆರೋಪ ಕೇಳಿಬಂದಿದೆ.
ಹೀಗಾಗಿ ಬಿಎನ್ಎಸ್ 353(2)ರಡಿ ಪ್ರಕರಣದಡಿ ಎಫ್ಐಆರ್ ದಾಖಲಾಗಿದೆ. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ದಕ್ಕೆಯಾಗುವ ಸಾಧ್ಯತೆಗಳಿರುವುದರಿಂದ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…