ಚಿಕ್ಕಮಗಳೂರು: ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ಸಾಮೂಹಿಕ ಗಣಪತಿ ವಿಸರ್ಜನೆ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಡಿ ಎಫ್ಐಆರ್ ದಾಖಲಾಗಿರುವ ಕುರಿತು ಬಿಜೆಪಿ ಎಂಎಲ್ಸಿ ಸಿ.ಟಿ.ರವಿ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಚಿಕ್ಕಮಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಎಂಎಲ್ಸಿ ಸಿ.ಟಿರವಿ ಅವರು, ಕೇಸ್ ನನಗೆ ಹೊಸದಲ್ಲ. ಕೇಸಿಗೆ ಹೆದರುವ ಜಾಯಮಾನದವನೂ ನಾನಲ್ಲ. ಕ್ರಿಯೆಗೆ ತಕ್ಕ ಪ್ರತಿಕ್ರಿಯೆ ಎಂದು ಹೇಳಿದ್ದೆ. ಪ್ರೀತಿಗೆ ಪ್ರೀತಿ ಕಲ್ಲಿಗೆ-ಕಲ್ಲು ಎಂದು ಹೇಳಿದ್ದೆ. ನನ್ನ ಹೇಳಿಕೆಗೆ ಇಂದಿಗೂ ನಾನು ಬದ್ಧ ಎಂದರು.
ಇದನ್ನು ಓದಿ: ಮದ್ದೂರಿನಲ್ಲಿ ಪ್ರಚೋದನಕಾರಿ ಭಾಷಣ: ಎಂಎಲ್ಸಿ ಸಿ.ಟಿ.ರವಿ ವಿರುದ್ಧ ಎಫ್ಐಆರ್
ಇನ್ನು ಇಂತಹ ನೂರು ಕೇಸ್ ಬಂದರೂ ನಾನು ನಿಭಾಯಿಸುತ್ತೇನೆ. ನಾನೇನು ಇದಕ್ಕೆ ಹೆದರಿ ಕೂರಲ್ಲ ಎಂದು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮಂಜುನಾಥ್ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದರು.
ಪ್ರಕರಣದ ಹಿನ್ನೆಲೆ: ಮದ್ದೂರಿನಲ್ಲಿ ನಿನ್ನೆ ಸಾಮೂಹಿಕ ಗಣಪತಿ ವಿಸರ್ಜನೆ ವೇಳೆ ಎಂಎಲ್ಸಿ ಸಿ.ಟಿ.ರವಿ ಅವರು ಪ್ರಚೋದನಕಾರಿ ಭಾಷಣ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮಂಜುನಾಥ್ ಅವರ ದೂರಿನನ್ವಯ ಸಿ.ಟಿ.ರವಿ ವಿರುದ್ಧ ಪ್ರಕರಣ ದಾಖಲಾಗಿದೆ.
ಚಾ.ನಗರ ಜಿಲ್ಲಾಧಿಕಾರಿ,ಆಹಾರ ಸುರಕ್ಷತಾ ಅಧಿಕಾರಿ ದಿಡೀರ್ ಭೇಟಿ, ಪರಿಶೀಲನೆ ಚಾಮರಾಜನಗರ : ಅವಧಿ ಮೀರಿದ ಆಹಾರ ಪದಾರ್ಥಗಳ ಬಳಕೆ, ಗುಣಮಟ್ಟದ…
ಗುಂಡ್ಲುಪೇಟೆ : ಕಾಲದ ಚಕ್ರ ಉರುಳಿ 20 ವರ್ಷಗಳು ಕಳೆದರೂ, ಗುರು-ಶಿಷ್ಯರ ನಡುವಿನ ಪ್ರೀತಿ, ಗೌರವ ಮತ್ತು ಆತ್ಮೀಯತೆ ಮಾತ್ರ…
ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…
ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…
ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…