ಬೆಂಗಳೂರು: ಜೆಡಿಎಸ್ ಕಚೇರಿ ಪಕ್ಕದ ಮೈದಾನದಲ್ಲಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಕಾರು ಹಾಗೂ ಬೈಕ್ ಸೇರಿದಂತೆ 100ಕ್ಕೂ ಹೆಚ್ಚು ವಾಹನಗಳು ಸುಟ್ಟು ಕರಕಲಾಗಿವೆ.
ಪೊಲೀಸರು ಜಪ್ತಿ ಮಾಡಿದ್ದ ವಾಹನಗಳನ್ನು ಪೊಲೀಸರು ಶೇಷಾದ್ರಿಪುರಂ ಬಳಿಯಿರುವ ಜಕ್ಕರಾಯನಕೆರೆ ಗ್ರೌಂಡ್ನಲ್ಲಿ ಪಾರ್ಕ್ ಮಾಡಿದ್ದರು. ಈ ಜಾಗಕ್ಕೆ ಇಂದು ಇದ್ದಕ್ಕಿದ್ದಂತೆ ಬೆಂಕಿ ಬಿದ್ದಿದೆ.
ಪರಿಣಾಮ ಕಾರು ಹಾಗೂ ಬೈಕ್ ಸೇರಿದಂತೆ 100ಕ್ಕೂ ಹೆಚ್ಚು ವಾಹನಗಳು ಸುಟ್ಟು ಕರಕಲಾಗಿವೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.
ಯಾರೋ ಸಿಗರೇಟ್ಗಾಗಿ ಬೆಂಕಿ ಕಡ್ಡಿ ಗೀರಿ ಎಸೆದು ಹೋಗಿದ್ದರಿಂದ ಈ ಅವಘಡ ಸಂಭವಿಸಿದೆ ಎಂದು ಶಂಕಿಸಲಾಗಿದೆ.
ಕೊರಿಯನ್ ಗೇಮ್ಸ್ ವ್ಯಸನದಿಂದ ಮಕ್ಕಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಇಂದು ನಮ್ಮ ಯುವಜನತೆ ಕೆ ಪಾಪ್ ಮತ್ತು ಕೆ…
ಮೈಸೂರಿನ ಶ್ರೀರಾಂಪುರ ೨ನೇ ಹಂತದಲ್ಲಿ ನಿವೇಶನನವೊಂದು ಕಳೆದ ೨೬ ವರ್ಷಗಳಿಂದ ಖಾಲಿಬಿದ್ದಿದೆ. ಈ ಖಾಲಿ ನಿವೇಶನದಲ್ಲಿ ಅಕ್ಕಪಕ್ಕದ ಮನೆಯ ನಿವಾಸಿಗಳು…
ಮೈಸೂರು ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಯಾಗಿರುವುದು ಸ್ವಾಗತಾರ್ಹ ಸಂಗತಿ. ಆದರೆ ಗ್ರಾಮದ ನೈಸರ್ಗಿಕ ಸಂಪತ್ತಾದ ‘ಬೆಳವಾಡಿ ಕೆರೆ’ಗೆ…
ನವೀನ್ ಡಿಸೋಜ ಜನವರಿಯಲ್ಲಿ ೬೩ ಎನ್ಡಿಪಿಎಸ್ ಪ್ರಕರಣಗಳು ದಾಖಲು; ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರ ಮೆಚ್ಚುಗೆ ಮಡಿಕೇರಿ: ಮಾದಕ ವಸ್ತುಗಳ ಮಾರಾಟ…
ಮಂಜು ಕೋಟೆ ಜಕ್ಕಹಳ್ಳಿ ಆಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮುಜುಗರ; ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಪೋಷಕರ ಆಗ್ರ ಎಚ್.ಡಿ.ಕೋಟೆ: ಗಿರಿಜನ ಮಕ್ಕಳ…
ಪ್ರಶಾಂತ್ ಎಸ್. ವೇಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳದಿದ್ದರೆ ಅನಾಹುತಕ್ಕೆ ಹಾದಿ ಎನ್.ಎಚ್.ಪಾಳ್ಯ,ಟೋಲ್ಗೇಟ್, ಶಿವಪುರ ತಿರುವಿನಲ್ಲಿ ರಿಫ್ಲೆಕ್ಟರ್,ಬ್ಯಾರಿಕೇಡ್ ಅಳವಡಿಕೆ ಅಗತ್ಯ ಮೈಸೂರು:…