ರಾಜ್ಯ

ಬೆಂಗಳೂರು| ಅಗ್ನಿ ಅವಘಡ: ಶಾರ್ಟ್‌ ಸರ್ಕ್ಯೂಟ್‌ನಿಂದ 30ಕ್ಕೂ ಅಧಿಕ ಎಲೆಕ್ಟ್ರಾನಿಕ್‌ ಸ್ಕೂಟರ್‌ ಭಸ್ಮ

ಬೆಂಗಳೂರು: ನಗರದ ರಾಜ್‌ಕುಮಾರ್‌ ರಸ್ತೆಯಲ್ಲಿನ ಹೋಂಡಾ ಬೈಕ್‌ ಶೋ ರೂಂನಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದ ಅಗ್ನಿ ಅವಘಡ ಸಂಭವಿಸಿ 30ಕ್ಕೂ ಅಧಿಕ ಎಲೆಕ್ಟ್ರಾನಿಕ್‌ ಸ್ಕೂಟರ್‌ಗಳನ್ನು ಭಸ್ಮವಾಗಿವೆ ಎಂದು ಮೂಲಗಳು ತಿಳಿಸಿವೆ.

ಈ ಘಟನೆಯೂ ಇಂದು(ಜನವರಿ.27) ಸುಮಾರು ಮಧ್ಯಾಹ್ನದ ವೇಳೆಗೆ ನಡೆದಿದ್ದು, ಬೈಕ್‌ ಶೋ ರೂಂನಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಹೇಳಲಾಗುತ್ತಿದೆ. ಈ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ಮಾಡಿದ್ದಾರೆ.

ಇನ್ನೂ ಈ ಘಟನೆ ರಾಜಾಜಿನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಇದೇ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಏನಿದು ಘಟನೆ?

ರಾಜಾಜಿನಗರದಲ್ಲಿರುವ ಶುಕ್ರ ಮೋಟರ್‌ಸ್‌ ಎಂಬ ಬೈಕ್‌ ಶೋ ರೂಂಗೆ ಇಂದು ಇದ್ದಕಿದ್ದ ಹಾಗೇ ಬೆಂಕಿ ಹತ್ತಿಕೊಂಡಿದ್ದು, ಈ ವೇಳೆ ವಕಿನೋವಾ ಕಂಪನಿಯ ಎಲೆಕ್ಟ್ರಾನಿಕ್‌ ಬೈಕ್‌ಗಳು ಇದ್ದವು. ಈ ಅಗ್ನಿ ದುರಂತದಿಂದ ಸುಮಾರು 30ಕ್ಕೂ ಅಧಿಕ ಎಲೆಕ್ಟ್ರಾನಿಕ್‌ ಬೈಕ್‌ಗಳು ಭಸ್ಮವಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬ್ಯಾಟರಿ ಚಾರ್ಜ್ ಹಾಕುವಾಗ ಶಾರ್ಟ್ ಸರ್ಕ್ಯೂಟ್ ಆಗಿ ಅವಘಡ ಸಂಭವಿಸಿದೆ ಎನ್ನಲಾಗಿದೆ.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

3 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

3 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

3 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

3 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

3 hours ago