ಬೆಂಗಳೂರು: ನಗರದ ರಾಜ್ಕುಮಾರ್ ರಸ್ತೆಯಲ್ಲಿನ ಹೋಂಡಾ ಬೈಕ್ ಶೋ ರೂಂನಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಅಗ್ನಿ ಅವಘಡ ಸಂಭವಿಸಿ 30ಕ್ಕೂ ಅಧಿಕ ಎಲೆಕ್ಟ್ರಾನಿಕ್ ಸ್ಕೂಟರ್ಗಳನ್ನು ಭಸ್ಮವಾಗಿವೆ ಎಂದು ಮೂಲಗಳು ತಿಳಿಸಿವೆ.
ಈ ಘಟನೆಯೂ ಇಂದು(ಜನವರಿ.27) ಸುಮಾರು ಮಧ್ಯಾಹ್ನದ ವೇಳೆಗೆ ನಡೆದಿದ್ದು, ಬೈಕ್ ಶೋ ರೂಂನಲ್ಲಿ ಶಾರ್ಟ್ ಸರ್ಕ್ಯೂಟ್ನಿಂದಾಗಿ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಹೇಳಲಾಗುತ್ತಿದೆ. ಈ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ಮಾಡಿದ್ದಾರೆ.
ಇನ್ನೂ ಈ ಘಟನೆ ರಾಜಾಜಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಇದೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಏನಿದು ಘಟನೆ?
ರಾಜಾಜಿನಗರದಲ್ಲಿರುವ ಶುಕ್ರ ಮೋಟರ್ಸ್ ಎಂಬ ಬೈಕ್ ಶೋ ರೂಂಗೆ ಇಂದು ಇದ್ದಕಿದ್ದ ಹಾಗೇ ಬೆಂಕಿ ಹತ್ತಿಕೊಂಡಿದ್ದು, ಈ ವೇಳೆ ವಕಿನೋವಾ ಕಂಪನಿಯ ಎಲೆಕ್ಟ್ರಾನಿಕ್ ಬೈಕ್ಗಳು ಇದ್ದವು. ಈ ಅಗ್ನಿ ದುರಂತದಿಂದ ಸುಮಾರು 30ಕ್ಕೂ ಅಧಿಕ ಎಲೆಕ್ಟ್ರಾನಿಕ್ ಬೈಕ್ಗಳು ಭಸ್ಮವಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬ್ಯಾಟರಿ ಚಾರ್ಜ್ ಹಾಕುವಾಗ ಶಾರ್ಟ್ ಸರ್ಕ್ಯೂಟ್ ಆಗಿ ಅವಘಡ ಸಂಭವಿಸಿದೆ ಎನ್ನಲಾಗಿದೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…