ಮೈಸೂರು: ದೇಶದಲ್ಲೇ ಹೆಚ್ಚು ಭದ್ರತೆ ಇರುವ ಸಂಸತ್ ಭವನದಲ್ಲಿ, ಭದ್ರತಾಲೋಪದಿಂದ ನಿನ್ನೆ ನಡೆದ ಘಟನೆ ಸಂಬಂಧಿಸಿದಂತೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರನ್ನು ಈ ಕೂಡಲೆ ಸಂಸದ ಸ್ಥಾನದಿಂದ ವಜಾಗೊಳಿಸಬೇಕು ಎಂದು ಬಿಜೆಪಿ ಎಂಎಲ್ಸಿ ಹೆಚ್.ವಿಶ್ವನಾಥ್ ಆಗ್ರಹಿಸಿದ್ದಾರೆ.
ಘಟನೆ ಬಗ್ಗೆ ಆಂದೋಲನ ಪತ್ರಿಕೆಗೆ ಪ್ರತಿಕ್ರಿಯೆ ನೀಡಿದ ಹೆಚ್.ವಿಶ್ವನಾಥ್, ನಿನ್ನೆ ಸಂಸತ್ನಲ್ಲಿ ನಡೆದ ಘಟನೆ ಖಂಡನೀಯ. ದೇಶದಲ್ಲೇ ಅತೀ ಹೆಚ್ಚು ಭದ್ರತೆ ಇರುವ ಸ್ಥಳದಲ್ಲೇ ಭದ್ರತಾಲೋಪವಾಗಿರುವುದು ವಿಪರ್ಯಾಸ ಎಂದಿದ್ದಾರೆ.
ಜವಬ್ಧಾರಿಯುತ ಸಂಸತ್ ಸದಸ್ಯರು ಯಾರಿಗೆ ಪಾಸ್ ನೀಡಬೇಕು ಎಂಬುದರ ಬಗ್ಗೆ ಸರಿಯಾದ ರೀತಿಯಲ್ಲಿ ತೀರ್ಮಾನ ಕೈಗೊಳ್ಳದಿದ್ದರೇ ಏನೆಲ್ಲಾ ಅನಾಹುತಗಳು ಆಗಬಹುದು ಎಂಬುದಕ್ಕೆ ನಿನ್ನೆ ನಡೆದ ಘಟನೆಯೇ ಸಾಕ್ಷಿ. ನಮ್ಮೂರಿನವರೇ ಆದಂತ ಸಂಸದ ಪ್ರತಾಪ್ ಸಿಂಹ, ಪಾಸ್ ನೀಡುವಂತ ಸಂದರ್ಭದಲ್ಲಿ ಅವರ ಪೂರ್ವಪರಗಳನ್ನು ತಿಳಿದಿರಬೇಕು .ನಾನೂ ಕೂಡ ಒಬ್ಬ ಸಂಸತ್ ಸದಸ್ಯನಾಗಿ ಕೆಲಸ ಮಾಡಿದವನು, ಒಬ್ಬ ಸಂಸತ್ ಸದಸ್ಯನಿಗೆ, ಸಂಸತ್ಗೆ ಭೇಟಿ ನೀಡುವವರಿಗೆ ಪಾಸ್ ನೀಡುವ ಅಧಿಕಾರವನ್ನು ನೀಡಲಾಗಿದೆ.
ಆದರೇ ಆ ಅಧಿಕಾರವನ್ನು ಸರಿಯಾಗಿ ಉಪಯೋಗ ಮಾಡಿಕೊಳ್ಳಬೇಕು. ಅದನ್ನು ಬಿಟ್ಟು ಎಲ್ಲರಿಗೂ ಒಳಗೆ ಪ್ರವೇಶ ನೀಡಿದರೆ ಏನೆಲ್ಲಾ ಅನಾಹುತವಾಗಹುದು ಎಂಬುದಕ್ಕೆ ಇದೇ ಸಾಕ್ಷಿ. ಈ ಕೂಡಲೇ ಸಂಸದ ಪ್ಎಂರತಾಪ್ದ ಸಿಂಹ ಅವರನ್ರುನು ಸಂಸದ ಸ್ಥಾನದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.
ಪ್ರತಾಪ್ ಸಿಂಹಗೆ ಪರಿಚಯಸ್ಥ ಹುಡುಗ:
ನಿನ್ನೆ ಸಂಸತ್ನಲ್ಲಿ ನಿರ್ಮಾಣವಾದ ಆತಂಕಕಾರಿ ಘಟನೆಯ ಆರೋಪಿಯಾಗಿರುವ ಮೈಸೂರಿನ ಹುಡುಗ ಮನೋರಂಜನ್ ಸಂಸದ ಪ್ರತಾಪ್ ಸಿಂಹ ಅವರಿಗೆ ತೀರ ಹತ್ತಿರದ ಒಡನಾಡಿ. ಈ ಬಗ್ಗೆ ಮನೋರಂಜನ್ ತಂದೆಯೇ ಹೇಳಿಕೆ ನೀಡಿದ್ದಾರೆ. ಆ ಹುಡುಗನ ನಡವಳಿಕೆ ಬಗ್ಗೆ ಪ್ರತಾಪ್ ಸಿಂಹರಿಗೆ ಚೆನ್ನಾಗಿಯೇ ತಿಳಿದಿರುತ್ತದೆ. ಒಂದು ವೇಳೆ ಪ್ರತಾಪ್ ಸಿಂಹ ಆ ಹುಡುಗ ಪರಿಚಯ ಇಲ್ಲ ಎಂದರೇ ಅದು ಶುದ್ಧ ಸುಳ್ಳು ಎಂದರು.
ಸಂಸತ್ನಲ್ಲಿ ಅಧಿಕಾರಿಗಳ ಸಮಸ್ಯೆ: ಭದ್ರತೆಗೆ ಸಂಬಂಧಿಸಿದಂತೆ ಸಂಸತ್ ಭವನದಲ್ಲಿ ಕೆಳ ಹಂತದ ಅಧಿಕಾರಿಗಳ ಕೊರತೆ ಇದೆ. ಮೇಲಧಿಕಾರಿಗಳು ಹೆಚ್ಚಾಗಿದ್ದಾರೆ ಹೊರತು ಕೆಳಹಂತದ ಅಧಿಕಾರಿಗಳು ಕಡಿಮೆ. ಕಾಯುವವರಿಗಿಂತಾ, ಕಾಯುವವರನ್ನು ಕಾಯುವ ಅಧಿಕಾರಿಗಳಿದ್ದಾರೆ. ಭದ್ರತಾಲೋಪಕ್ಕೆ ಇದೂ ಒಂದು ಕಾರಣವಾಗಿದೆ ಎಂದು ಹೆಚ್.ವಿಶ್ವನಾಥ್ ಆರೋಪಿಸಿದರು
ಸರ್ಕಾರದ ಮೇಲೆ ಜನರಿಗೆ ಅಪನಂಬಿಕೆ: ಈ ರೀರತಿಯ ಘಟನೆಗಳು ಪದೇ ಪದೇ ಆಗಿದ್ದರೂ ಮತ್ತೆ ಅದೇ ತಪ್ಪುಗಳನ್ನು ಮಾಡುತ್ತಿದ್ದೇವೆ. ಸಾವಿರಾರು ಕೋಟಿ ಕರ್ಚು ಮಾಡಿ ಕಟ್ಟಿರುವ ನೂತನ ಸಂಸತ್ ಭವನವನ್ನು ಇಂತಹ ಮನಸ್ಥಿತಿ ಇರುವ ಯುವಕರು ಒಂದು ವೇಳೆ ಒಡೆದು ಹಾಕಿದರೆ, ಸಂಸತ್ ಭವನವನ್ನೇ ರಕ್ಷಣೆ ಮಾಡದಂತ ಸರ್ಕಾರ ಭಾರತೀಯರಿಗೆ ಯಾವ ರೀತಿ ರಕ್ಷಣೆ ನೀಡುತ್ತದೆ ಎಂಬ ಪ್ರಶ್ನೆ ಜನರಲ್ಲಿ ಮೂಡುತ್ತದೆ. ಈಗಾಗಲೇ ಆ ರೀತಿಯ ಪ್ರಶ್ನೆ ಜನರಲ್ಲಿ ಮೂಡಿದೆ ಎಂದರು.
ಹೈದರಾಬಾದ್ : ಆಂಧ್ರಪ್ರದೇಶದ ಮಾರ್ಕಾಪುರಂ ಜಿಲ್ಲೆಯ ರಾಯವರಂ ಬಳಿ ಗುರುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ,…
65 ವಾರಗಳಿಗೆ ಸಾಕಾಗುವಷ್ಟು ಮೇವು ಸಂಗ್ರಹ; ಜಿಲ್ಲೆಯಾದ್ಯಂತ ಒಟ್ಟು 2,12,504 ಟನ್ ಮೇವು ಲಭ್ಯ - ನವೀನ್ ಡಿಸೋಜ ಮಡಿಕೇರಿ…
ಪುರುಷರೂ ಎಚ್ಪಿವಿ ಲಸಿಕೆ ಪಡೆಯುವುದು ಸುರಕ್ಷಿತ: ಡಾ.ಯೋಗೇಂದ್ರಕುಮಾರ್ ಸಲಹೆ • ಹೇಮಂತ್ಕುಮಾರ್ ಮಂಡ್ಯ : ಹೆಣ್ಣು ಮಕ್ಕಳನ್ನು ಬಾಧಿಸುತ್ತಿರುವ ಗರ್ಭಕಂಠ…
ತನಿಖೆ ವೇಳೆ ಮತ್ತಷ್ಟು ಕಳ್ಳತನ ಮಾಡಿದ ಪ್ರಕರಣಗಳು ಬೆಳಕಿಗೆ ವಿರಾಜಪೇಟೆ : ಕಾಫಿ ಕಣದಲ್ಲಿ ಒಣಗಿಸಲು ಇಟ್ಟಿದ ಕಾಳು ಮೆಣಸು…
ಮೈಸೂರು : ಪ್ರೀತಿ-ಪ್ರೇಮದ ಗುಂಗಲ್ಲಿ ಜೀವ ಕಳೆದುಕೊಂಡ ಜೀವಗಳು ಅದೆಷ್ಟೋ, ಜೀವನದಲ್ಲಿ ತೆಗೆದುಕೊಳ್ಳೋ ಒಂದೇ ಒಂದು ನಿರ್ಧಾರ ಬದುಕಿನ ಆಟವನ್ನೇ…
ನಗರಪಾಲಿಕೆಯಲ್ಲಿ 2026-27ನೇ ಸಾಲಿನ ಆಯವ್ಯಯ ಮಂಡನೆ ಮೈಸೂರು : ರಾಜಧಾನಿ ಬೆಂಗಳೂರು ನಂತರ ವೇಗವಾಗಿ ಬೆಳೆಯುತ್ತಿರುವ ಸಾಂಸ್ಕೃತಿಕ ನಗರಿಯ ಸಮಗ್ರ…